ಶ್ರೀರಾಮಚಂದ್ರಾಪುರ ಮಠದಿಂದ ವಿಷ್ಣುಗುಪ್ತ ವಿವಿ: ರಾಘವೇಶ್ವರ ಶ್ರೀ
ಕಾರವಾರ, ಫೆಬ್ರವರಿ 23: ವಿಶ್ವಕ್ಕೆ ಮಾದರಿ ಎನಿಸುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ. ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ಇದು ಬೃಹದಾಕಾರವಾಗಿ ಬೆಳೆಯಲಿದೆ ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.
ಶಿವರಾತ್ರಿ ಮಹೋತ್ಸವ ಅಂಗವಾಗಿ ಗೋಕರ್ಣದಲ್ಲಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಇಂಥ ವಿದ್ಯಾಸಂಸ್ಥೆ ಕಟ್ಟುವ ಮುನ್ನ ಭದ್ರಕಾಳಿ ಶಿಕ್ಷಣ ಸಂಸ್ಥೆಯಂತಹ ಉತ್ತಮ ಸಂಸ್ಥೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಭಾರತೀಯ ಪ್ರಾಚೀನ ಶಿಕ್ಷಣ, ಕಲೆಗಳ ಪುನರುತ್ಥಾನ ನೂತನ ವಿದ್ಯಾಪೀಠದ ಉದ್ದೇಶ ಎಂದು ಹೇಳಿದರು.
ಪುರಾತನ ಸಂಸ್ಥೆಗೆ ಸನಾತನ ಸಂಸ್ಥೆಯಿಂದ ಸನ್ಮಾನಿಸಲಾಗುತ್ತಿದೆ, ಇದು ದೈವೇಚ್ಛೆ. ಮಣ್ಣಿನಲ್ಲಿ ಬೆಳೆದ ವೃಕ್ಷ ಮಣ್ಣಿಗೆ ನೆರಳಾಗುತ್ತದೆ, ಆಧಾರವಾಗುತ್ತದೆ ಮತ್ತು ಆ ಮಣ್ಣಿಗೆ ಅಲಂಕಾರವಾಗುತ್ತದೆ. ಅಂತೆಯೇ ಮಹಾಬಲನ ಸನ್ನಿಧಿಯಲ್ಲಿ ಬೆಳೆದ ಭದ್ರಕಾಳಿ ಶಿಕ್ಷಣ ಸಂಸ್ಥೆ ಈ ಭಾಗಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿದೆ ಎಂದು ಬಣ್ಣಿಸಿದರು.

ಭದ್ರಕಾಳಿ ಶಾಲೆಯಲ್ಲಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ, ಪರೀಕ್ಷೆ ಬರೆದ ನೆನಪನ್ನು ರಾಘವೇಶ್ವರ ಸ್ವಾಮೀಜಿ ಹಂಚಿಕೊಂಡರು. ಲಕ್ಷಾಂತರ ಮಕ್ಕಳ ಬದುಕನ್ನು ಬೆಳಗಿಸಿದ ಸಂಸ್ಥೆಯ ಸೇವೆ ಅವರ್ಣನೀಯ ಎಂದು ಹೇಳಿದರು. ಸಂಸ್ಥೆಗೆ ಅಗತ್ಯ ಸೇವೆ ಸಲ್ಲಿಸಲು ದೇವಾಲಯ, ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ ಎಂದು ತಿಳಿಸಿದರು.
ಭದ್ರಕಾಳಿ ವಿದ್ಯಾಸಂಸ್ಥೆಗೆ ಇದೇ ಸಂದರ್ಭದಲ್ಲಿ ಸಾರ್ವಭೌಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. 1927 ರಲ್ಲಿ ಆರಂಭವಾಗಿ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ವಿ.ಆರ್.ಮಲ್ಲನ್ ಮತ್ತು ಜಿ.ಎನ್.ನಾಯಕ ಪ್ರಶಸ್ತಿ ಸ್ವೀಕರಿಸಿದರು.

ಕುಮಟಾ ಶಾಸಕ ದಿನಕರ ಶೆಟ್ಟಿ, ಹಿರಿಯ ಪತ್ರಕರ್ತ ವಿನಾಯಕ ಭಟ್ ಮುರೂರು ಭಾಗವಹಿಸಿದ್ದರು. ತಾಲೂಕು ಪಂಚಾಯ್ತಿ ಸದಸ್ಯ ಮಹೇಶ್ ಶೆಟ್ಟಿ ಅವಲೋಕನ ನೆರವೇರಿಸಿರು. ಶಿವರಾತ್ರಿ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಅಧ್ಯಕ್ಷೆ ಡಾ.ಶೀಲಾ ಹೊಸಮನೆ ಸನ್ಮಾನ ಪತ್ರ ವಾಚಿಸಿದರು. ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಹೆಗಡೆ ಸಭಾಪೂಜೆ ನೆರವೇರಿಸಿದರು. ಶಿರಸಿಯ ಗಣಪತಿ ಶಿವರಾಮ ಯಾಜಿ ಸಂಕಲನ ಮಾಡಿದ ಗೋಮಾತ್ರಷ್ಟೋತ್ತರ ಶತನಾಮ ಸ್ತೋತ್ರ ಮತ್ತು ನಾಮಾವಳಿ ಕೃತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಮಲ್ಲನ್ ಮಾತನಾಡಿ, ""1927ರಲ್ಲೇ ಈ ಭಾಗದ ಜನತೆಗೆ ಇಂಗ್ಲಿಷ್ ಕಲಿಕೆಗೆ ಅವಕಾಶ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಆರಂಭಿಸಿದ ಸಂಸ್ಥೆ ಜನಸೇವೆ ಮಾಡುತ್ತಾ ಬಂದಿದೆ'' ಎಂದು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications