ಜ.20ರಂದು ಕದಂಬ ನೌಕಾನೆಲೆಗೆ ರಾಹುಲ್ ಗಾಂಧಿ, ಶರದ್ ಪವಾರ್ ಸೇರಿದಂತೆ ಸಂಸದರ ತಂಡ ಭೇಟಿ
ಕಾರವಾರ, ಜನವರಿ 19: ಅತಿದೊಡ್ಡ ನೌಕಾನೆಲೆಯಾಗಿರುವ ಇಲ್ಲಿನ ಕದಂಬ ನೌಕಾನೆಲೆಗೆ ದೇಶದ ವಿವಿಧೆಡೆಯ ಸಂಸದರನ್ನೊಳಗೊಂಡ ತಂಡ ಜ.20ರಂದು (ಬುಧವಾರ) ಭೇಟಿ ನೀಡಲಿದೆ. ಸಂಸತ್ತಿನ ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರಾಗಿರುವ ಸಂಸದರುಗಳು, ನೌಕಾನೆಲೆಯಲ್ಲಿ ಪ್ರಗತಿಯಲ್ಲಿರುವ 2ನೇ ಹಂತದ ಕಾಮಗಾರಿಯ ಪರಿಶೀಲನೆಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ.
ಬುಧವಾರ ಬೆಳಿಗ್ಗೆ ವಿಮಾನದ ಮೂಲಕ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಈ ತಂಡ ನೌಕಾನೆಲೆಗೆ ಭೇಟಿ ನೀಡಲಿದೆ. ಸಂಸತ್ತಿನ ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿಯಲ್ಲಿ ಒಟ್ಟು 21 ಲೋಕಸಭಾ ಸದಸ್ಯರು ಹಾಗೂ 10 ರಾಜ್ಯಸಭಾ ಸದಸ್ಯರಿದ್ದು, ಇದರಲ್ಲಿ ಸದ್ಯದ ಮಾಹಿತಿಯ ಪ್ರಕಾರ ಸಮಿತಿಯ 12 ಸಂಸದರು ಆಗಮಿಸುವುದು ಖಚಿತವಾಗಿದೆ.
ಈ ತಂಡದಲ್ಲಿ ಎಐಸಿಸಿ ಮುಖಂಡರೂ ಆಗಿರುವ ರಾಹುಲ್ ಗಾಂಧಿ, ಎನ್ಸಿಪಿ ಮುಖಂಡರೂ ಆಗಿರುವ ಶರದ್ ಪವಾರ್, ಜುಯೆಲ್ ಓರಮ್, ಅಜಯ್ ಭಟ್, ಪ್ರೊ.ಡಾ.ರಾಮಶಂಕರ್ ಕಠೇರಿಯಾ, ಜುಗಲ್ ಕಿಶೋರ್ ಶರ್ಮ, ಡಾ.ಶ್ರೀಕಾಂತ್ ಏಕನಾಥ್ ಶಿಂಧೆ, ಪ್ರತಾಪ್ ಸಿಂಹ, ಪ್ರೇಮಚಂದ್ರ ಗುಪ್ತ, ಸಂಜಯ್ ರಾವತ್, ಕಾಮಖ್ಯ ಪ್ರಸಾದ್, ಸುಧಾನ್ಶು ತ್ರಿವೇದಿ ಆಗಮಿಸಲಿದ್ದಾರೆ.

ರಾಹುಲ್ ಗಾಂಧಿ ಹಾಗೂ ಶರದ್ ಪವಾರ್ಗೆ ಝಡ್ ಫ್ಲಸ್ ಸೆಕ್ಯುರಿಟಿ ಇದ್ದು, ಸಮಿತಿಯ ಆರು ಸಂಸದರಿಗೆ ವೈ ಫ್ಲಸ್ ಸೆಕ್ಯುರಿಟಿ ನೀಡಲಾಗಿದೆ. ಇನ್ನು ಮೂವರು ಸಂಸದರಿಗೆ ವೈ ಸೆಕ್ಯುರಿಟಿ ಇರುವ ಹಿನ್ನಲೆಯಲ್ಲಿ ಗೋವಾ ಗಡಿ ಮಾಜಾಳಿಯಿಂದ ಕಾರವಾರದ ಅರಗಾ ಗ್ರಾಮದವರೆಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲು ಸಿದ್ಧತೆ ನಡೆದಿದೆ.
ಬುಧವಾರ ಮಧ್ಯಾಹ್ನದ ವೇಳೆಗೆ ಸಂಸದರ ತಂಡ ಕದಂಬ ನೌಕಾನೆಲೆಗೆ ಆಗಮಿಸಿ ನೌಕಾನೆಲೆಯ ವೀಕ್ಷಣೆ ನಂತರ ಸಂಜೆ ವೇಳೆಗೆ ವಾಪಸ್ ಗೋವಾ ಮಾರ್ಗದ ಮೂಲಕ ತೆರಳಲಿದ್ದಾರೆ ಎನ್ನಲಾಗಿದ್ದು, ಸಂಸದರು ಬರುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಮಾಡಿ ಕರೆದುಕೊಂಡು ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕದಂಬ ನೌಕಾನೆಲೆಯಲ್ಲಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ನೌಕಾನೆಲೆಯಲ್ಲಿ ಆಗುತ್ತಿರುವ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಹಾಗೂ ನೂತನ ಇತರೆ ಕಾಮಗಾರಿಗಳ ಬಗ್ಗೆ ಸಂಸದರು ಭೇಟಿ ಸಂದರ್ಭದಲ್ಲಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ. ಇನ್ನು ಸಂಸದರ ತಂಡ ನೌಕಾನೆಲೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನೌಕಾನೆಲೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications