ರಾಹುಲ್ ಗಾಂಧಿ 'ಪಪ್ಪು' ಆಗಿರೋದೆ ಸೋಲಿಗೆ ಕಾರಣ: ಆನಂದ ಅಸ್ನೋಟಿಕರ್
ಕಾರವಾರ, ಡಿಸೆಂಬರ್ 13: 'ಜನತಾದಳ ರಾಜ್ಯದಲ್ಲಿ ಸೋಲಲು ಕಾರಣವೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು. ಸಿದ್ದರಾಮಯ್ಯ, ಡಿಕೆಶಿಯಿಂದ ಕಾಂಗ್ರೆಸ್ ಸೋತಿಲ್ಲ; ಅದಕ್ಕೆ ಪಪ್ಪು ರಾಹುಲ್ ಗಾಂಧಿ ಕಾರಣ" ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಯುವಕರಿಗೆ ಕಾಂಗ್ರೆಸ್ ಇದೆ ಅನ್ನೋದೇ ಗೊತ್ತಿಲ್ಲ. ಕಾಂಗ್ರೆಸ್ ಗಾಂಧಿ ಕುಟುಂಬದ ಮೊನಾಪಲಿಯಾಗಿದೆ. ಯುವಕರ ತಲೆಯಲ್ಲಿ ರಾಹುಲ್ ಗಾಂಧಿ ಎಂದರೆ ಪಪ್ಪು ಎಂಬ ಇಮೇಜ್ ಇದೆ. ಸೋಲು ನಮ್ಮದಲ್ಲ, ಮೈತ್ರಿಯದ್ದು" ಎಂದಿದ್ದಾರೆ.
'ಈ ಹಿಂದೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ರೋಲ್ ಕಾಲ್, ಅಧಿಕಾರಿಗಳ ಕಿರುಕುಳ ಶಿವರಾಮ ಹೆಬ್ಬಾರ್ ಅವರ ಜಿಲ್ಲಾ ಉಸ್ತುವಾರಿಯಲ್ಲಿ ಇರುವುದಿಲ್ಲ ಎಂಬ ನಂಬಿಕೆ' ಇದೆ ಎನ್ನುತ್ತಾ ಪರೋಕ್ಷವಾಗಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ತಿವಿದರು.
'ನಾನು ವರ್ಚಸ್ಸಿನ ರಾಜಕಾರಣ ಮಾಡುತ್ತಿಲ್ಲ. ರಾಜಕಾರಣ ಮಾಡಲು ಬಂದಿಲ್ಲ, ಜನಸೇವೆ ಮಾಡಲು ಬಂದವನು. ಜನರ ತೀರ್ಮಾನದ ಮೇಲೆ ಮೂರ್ನಾಲ್ಕು ತಿಂಗಳಲ್ಲಿ ಯಾವ ಪಕ್ಷಕ್ಕೆ ಸೇರಬೇಕು ಅಥವಾ ಜೆಡಿಎಸ್ ನಲ್ಲೇ ಇರಬೇಕೋ ಎನ್ನುವ ತೀರ್ಮಾನ ಮಾಡಲಿದ್ದೇನೆ. ಮಧು ಬಂಗಾರಪ್ಪನವರ ಅವಶ್ಯಕತೆ ಜನತಾ ದಳಕ್ಕೆ ಬಹಳ ಇದೆ. ಅವರು ಜೆಡಿಎಸ್ ಶಕ್ತಿ. ಕುಮಾರಣ್ಣನವರ ಜತೆ ಸೇರಿ ಅವರು ಪಕ್ಷ ಕಟ್ಟುತ್ತಾರೆ' ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕ ಉತ್ತರಿಸಿದರು.

'ಕಾರವಾರ ಶಾಸಕಿ ರೂಪಾಲಿ ನಾಯ್ಕ ರಾಜಕೀಯಕ್ಕೆ ಬಂದಿದ್ದೇ ವಸಂತ ಅಸ್ನೋಟಿಕರ್ ಅಭಿಮಾನಿ ಸಂಘದಿಂದ. ನಮಗೂ ಅವರಿಂದ ಸಾಕಷ್ಟು ನಿರೀಕ್ಷೆ ಇದೆ. ನೂರಾರು ಕೋಟಿ ಅನುದಾನ ತಂದಿದ್ದಾಗಿ ಅವರೀಗ ಹೇಳಿಕೊಳ್ಳುತ್ತಿದ್ದಾರೆ. 162 ಕೋಟಿಯ 300 ಬೆಡ್ ಆಸ್ಪತ್ರೆಗೆ ಮೆಡಿಕಲ್ ಕಾಲೇಜಿಗೆ ಅನುಮತಿ ಸಿಕ್ಕ ವೇಳೆಯಲ್ಲಿಯೇ ನೀಲನಕ್ಷೆ ತಯಾರಿಸಲಾಗಿತ್ತು. ಕುಮಾರಸ್ವಾಮಿ ಕ್ಯಾಬಿನೆಟ್ ನಲ್ಲಿ ಇದು ಅನುಮೋದನೆಗೊಂಡಿತ್ತು. ಇದುವರೆಗೂ 400 ಕೋಟಿ ಅನುದಾನ ತಂದಿದ್ದಾಗಿ ಶಾಸಕಿ ತೋರಿಸಿದ್ದಾರೆ. ಹಿಂದೆ ಇದ್ದ ಯೋಜನೆಗಳನ್ನೂ ತಮ್ಮ ಅಭಿವೃದ್ಧಿ ಎಂದು ಹೇಳಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.
'ಆನಂದ್ ಕಮಿಷನ್ ಪಡೆಯುತ್ತಿದ್ದರು ಎಂದು ರೂಪಾಲಿ ಆರೋಪ ಮಾಡಿದ್ದಾರೆ. ನನ್ನ ಅವಧಿಯಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷೆಯಾಗಿದ್ದವರಿಗೆ (ಈಗ ಶಾಸಕಿಯಾಗಿರುವ ರೂಪಾಲಿ ಅಂದು ತಾಲೂಕು ಪಂಚಾಯತಿ ಅಧ್ಯಕ್ಷರಿದ್ದರು) ಆನಂದ್ ಎಷ್ಟು ಪರ್ಸೆಂಟೇಜ್ ಪಡೆಯುತ್ತಿದ್ದರು ಅನ್ನೋದು ಗೊತ್ತಿದೆ' ಎಂದ ಅವರು, 'ನೆರೆಹಾವಳಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜಗದೀಶ ನಾಯ್ಕ ಒಂದೂವರೆ ಕೋಟಿ ಒಬ್ಬರೇ ಪಡೆದಿದ್ದಾರೆ' ಎಂದು ಗಂಭೀರ ಆರೋಪ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications