ಗೋಕರ್ಣ ದೇವಾಲಯದಲ್ಲಿ ರಾಮಚಂದ್ರಾಪುರ ಮಠದ ಅಧಿಕಾರ ಆಬಾಧಿತ
ಕಾರವಾರ, ಸೆ 7: ಗೋಕರ್ಣ ಶ್ರೀಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿದ್ದ ಆದೇಶವನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ರಾಮಚಂದ್ರಾಪುರ ಮಠ ಪ್ರಶ್ನಿಸಿದ್ದು, ಇಂದು (ಸೆ 7) ಮಠದ ಅರ್ಜಿಯನ್ನು ಮಾನ್ಯ ಮಾಡಿದ ಘನ ನ್ಯಾಯಾಲಯ ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು, ಮುಂದಿನ ಆದೇಶದವರೆಗೂ ಮುಂದುವರಿಸುವಂತೆ ಸೂಚಿಸಿದೆ.
ಇದರಿಂದಾಗಿ ಮಠಕ್ಕಿರುವ ದೇವಾಲಯದ ನಿರ್ವಹಣಾಧಿಕಾರ ಆಬಾಧಿತವಾಗಿ ಸದ್ಯಕ್ಕೆ ಮುಂದುವರಿಯಲಿದೆ. ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ಕಳೆದ ಆಗಸ್ಟ್ 10 ರಂದು ತೀರ್ಪು ನೀಡಿತ್ತು
ಮತ್ತು ಅದೇ ದಿನ ಮಧ್ಯಂತರ ಆದೇಶವನ್ನು ನೀಡಿ, ತೀರ್ಪಿನಲ್ಲಿ ಉಲ್ಲೇಖಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಸೆಪ್ಟೆಂಬರ್ 10 ನಂತರ ಕಾರ್ಯ ನಿರ್ವಹಿಸಲಿದೆ, ಸೆಪ್ಟೆಂಬರ್ 10ವರೆಗೆ ಶ್ರೀಮಠವೇ ಆಡಳಿತವನ್ನು ಸಡೆಸಲಿದೆ ಎಂದು ಮಧ್ಯಂತರ ಆದೇಶದಲ್ಲಿ ಹೇಳಿತ್ತು.

ಇಂದು ಈ ಪ್ರಕರಣದ ಮೇಲ್ಮನವಿಯ ವಿಚಾರಣೆ ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದಿದ್ದು, ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿ, ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡಿದೆ. ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ.
ಅಂದರೆ ಸೆಪ್ಟೆಂಬರ್ 10 ರ ನಂತರ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಅಧಿಕಾರ ವಹಿಸಿಕೊಳ್ಳುವುದನ್ನು ಮುಂದೂಡಿದಂತಾಗಿದ್ದು, ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನ ಆಗುವವರೆಗೂ ದೇವಾಲಯದ ಆಡಳಿತವನ್ನು ಶ್ರೀಮಠವೇ ನಿರ್ವಹಿಸಲಿದೆ.
ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಯ ಕುರಿತಾಗಿ ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ಆದೇಶಕ್ಕೆ ನ್ಯಾಯಾಲಯವೇ ಒಂದು ತಿಂಗಳ ತಡೆ ನೀಡಿತ್ತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications