ಕರ್ನಾಟಕಕ್ಕೆ ಆಗಮಿಸುವ ಈ ರಾಜ್ಯದವರಿಗೆ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಕಾರವಾರ, ಮಾರ್ಚ್ 25: ಕೆಲವು ರಾಜ್ಯದಿಂದ ಕರ್ನಾಟಕಕ್ಕೆ ಬರುವವರು ಬಸ್ ಹಾಗೂ ರೈಲಿನಲ್ಲಿ ಪ್ರಯಾಣಿಸಲು ಇನ್ಮುಂದೆ ಆರ್ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಈ ಬಗ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಕೊಂಕಣ ರೈಲ್ವೆ ನಿಗಮ ಅಧಿಕೃತ ಆದೇಶ ಹೊರಡಿಸಿದೆ.
ಪ್ರತಿನಿತ್ಯ ವಾಯವ್ಯ ಸಾರಿಗೆಯ ಹಲವು ಬಸ್ಸುಗಳು ಗೋವಾ ಹಾಗೂ ಮಹಾರಾಷ್ಟ್ರಕ್ಕೆ ತೆರಳುತ್ತದೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ಹಲವರು ಗೋವಾಕ್ಕೆ ಬಂದು, ಅಲ್ಲಿಂದ ಕರ್ನಾಟಕದ ಸಾರಿಗೆ ಬಸ್ಸುಗಳಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆನ್ನಲಾಗಿದೆ.
ಹೀಗಾಗಿ ಗೋವಾ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಮಾಡಿಕೊಡಬೇಕು, ಇಲ್ಲದಿದ್ದರೆ ಅವಕಾಶ ಮಾಡಿಕೊಡಬೇಡಿ ಎಂದು ಎನ್ಡಬ್ಲುö್ಯಕೆಆರ್ಟಿಸಿ ಅಧಿಕಾರಿಗಳು ಆದೇಶಿಸಿದ್ದಾರೆ.

ಇನ್ನು ಕೊಂಕಣ ರೈಲ್ವೆಯಲ್ಲಿ ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ಚಂಡೀಗಡ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವವರಿಗೂ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕರ್ನಾಟಕ ಸರ್ಕಾರದ ಆದೇಶದ ಅನ್ವಯ, ರೈಲಿನಲ್ಲಿ ಪ್ರಯಾಣಿಸುವವರ ಸುರಕ್ಷತಾ ದೃಷ್ಟಿಯಿಂದ, ಸೋಂಕು ಹೆಚ್ಚಳಕ್ಕೆ ಆಸ್ಪದ ನೀಡಬಾರದೆಂಬ ಕಾರಣಕ್ಕೆ ಎಂದು ನಿಗಮದಿಂದ ಈ ಆದೇಶ ಮಾಡಲಾಗಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications