ಭಟ್ಕಳ- ಹೊನ್ನಾವರ ಶಾಸಕರ ಮೇಲೆ ಬಾಂಬ್ ದಾಳಿ ಯತ್ನ?
ಕಾರವಾರ, ಫೆಬ್ರವರಿ 26: ಭಟ್ಕಳ- ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರ ಮೇಲೆ ಬಾಂಬ್ ದಾಳಿ ಯತ್ನ ನಡೆದಿದೆ ಎಂದ ಸ್ಫೋಟಕ ಸುದ್ದಿ ಇದೀಗ ಉತ್ತರಕನ್ನಡ ಜಿಲ್ಲೆಯ ಜನರನ್ನು ತಲ್ಲಣಗೊಳಿಸಿದೆ.
ಹೊನ್ನಾವರದ ಹೊಸಾಡದಲ್ಲಿ ದುಷ್ಕರ್ಮಿಯ ಕೈಯಲ್ಲೇ ವಸ್ತುವೊಂದು ಸ್ಫೋಟವಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಸ್ಫೋಟವಾಗಿರುವ ವಸ್ತು ಯಾವುದು ಎಂಬುದು ಇನ್ನೂ ಖಚಿತ ಪಟ್ಟಿಲ್ಲ. ಆದರೆ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಸ್ಫೋಟಿಸಲು ಬಂದು ಗಾಯಗೊಂಡಿರುವ ವ್ಯಕ್ತಿಯನ್ನು ಉಡುಪಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಇನ್ನೊಂದು ಮೂಲಗಳ ಪ್ರಕಾರ ಹೊನ್ನಾವರದ ಹೊಸಾಡಿನಲ್ಲಿ ಭಾನುವಾರ ರಾತ್ರಿ ವಾಲಿಬಾಲ್ ಪಂದ್ಯಾವಳಿಯೊಂದು ನಡೆಯುತ್ತಿತ್ತು. ಅಲ್ಲಿ ಉದ್ಘಾಟನೆಗೆ ಶಾಸಕ ಮಂಕಾಳ ವೈದ್ಯ ಹೋಗಿದ್ದರು. ಅದೇ ಸ್ಥಳದ ಐವತ್ತೇ ಅಡಿ ಅಂತರದಲ್ಲಿ ಬಾಂಬ್ ಸಿಡಿದಂತೆ ಶಬ್ದವಾಗಿದೆ. ಈ ವೇಳೆ ಅಲ್ಲಿದ್ದವರು ಹೋಗಿ ನೋಡಿದಾಗ ಯುವಕನೋರ್ವನ ಕೈಗೆ ಗಾಯವಾಗಿತ್ತು.

ಉಡುಪಿಯ ಆಸ್ಪತ್ರೆಗೆ ಆತನನ್ನು ಸಾಗಿಸಲಾಗಿತ್ತು. ಆದರೆ ಅಲ್ಲಿದ್ದ ಕೆಲವರು, ಇದು ಶಾಸಕರ ಹತ್ಯೆಗೆ ನಡೆಸಿದ ಸಂಚು ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಅಂತಲೂ ಸುದ್ದಿ ಹರಡಿದೆ. ಗಾಯಗೊಂಡವನನ್ನು ರೊನಾಲ್ಡ್ ಮಿರಾಂಡ ಎಂದು ಗುರುತಿಸಲಾಗಿದ್ದು, ಆತನ ಕೈಗೆ ಗಂಭೀರವಾಗಿ ಗಾಯವಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ 'ಒನ್ಇಂಡಿಯಾ ಕನ್ನಡ'ಕ್ಕೆ ಪ್ರತಿಕ್ರಿಯೆ ನೀಡಿದ್ದು, 'ಘಟನೆಗೆ ಮೂಲ ಕಾರಣ ಇನ್ನೂ ತಿಳಿದು ಬಂದಿಲ್ಲ. ಗಾಯಗೊಂಡವನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಆದರೆ ಈ ಘಟನೆ ಸಂಭವಿಸಿರುವುದು ಪಂದ್ಯಾವಳಿ ನಡೆಯುತ್ತಿದ್ದ ಸ್ಥಳದ ಐವತ್ತು ಅಡಿ ಅಂತರದಲ್ಲಿ. ತನಿಖೆಯಿಂದಲೇ ಎಲ್ಲವೂ ತಿಳಿದು ಬರಬೇಕಿದೆ' ಎಂದಷ್ಟೇ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications