ಹಳಿಯಾಳದಲ್ಲಿ ಬಾಲ್ಯದ ಶಾಲೆ ಕಂಡು ಭಾವುಕರಾದ ದೇಶಪಾಂಡೆ
ಹಳಿಯಾಳ, ಜನವರಿ 31: ಆರು ದಶಕಗಳ ಹಿಂದಿನ ಹಳೆಯ ಮಧುರ ನೆನಪುಗಳನ್ನು ನೆನೆದು ಇಲ್ಲಿನ ಶಾಸಕ ಹಾಗೂ ಮಾಜಿ ಸಚಿವರೂ ಆಗಿರುವ ಆರ್.ವಿ.ದೇಶಪಾಂಡೆ ಅರೆ ಕ್ಷಣ ಭಾವುಕರಾದರು. ಬಾಲ್ಯದಲ್ಲಿ ಕಲಿತ ಶಾಲೆಯನ್ನು ಕಂಡು ಸಂತಸಪಟ್ಟರು.
ಶಿಥಿಲಗೊಂಡು ಮುಚ್ಚಲಾಗಿದ್ದ ಪಟ್ಟಣದ ಸರ್ಕಾರಿ ಮರಾಠಿ ಮಾಧ್ಯಮದ ಶಾಲೆಯ ಕಟ್ಟಡವನ್ನು ಮರು ನವೀಕರಣಗೊಳಿಸಿ ಇತ್ತೀಚಿಗೆ ಲೋಕಾರ್ಪಣೆ ಮಾಡಿದ್ದ ಅವರು ತಾವು ಕಲಿತ ಶಾಲೆಯ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ, ಇದೇ ಸಮಯದಲ್ಲಿ ತಮ್ಮ ಬಾಲ್ಯ ಜೀವನವನ್ನು ಮೆಲುಕು ಹಾಕಿದ್ದಾರೆ.

ಐದನೇ ತರಗತಿವರೆಗೆ ಆ ಶಾಲೆಯಲ್ಲಿ ಓದಿದ್ದ ದೇಶಪಾಂಡೆ
ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿರುವ ಸರ್ಕಾರಿ ಮರಾಠಿ ಮಾಧ್ಯಮದ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ ಹಿನ್ನೆಲೆ 2005 ರಲ್ಲಿ ಬೀಗ ಹಾಕಲಾಗಿತ್ತು. 1932ರಲ್ಲಿ ಪ್ರಾರಂಭವಾಗಿದ್ದ ಇದೇ ಶಾಲೆಯಲ್ಲಿ 1952 ರಿಂದ 1957ರವರೆಗೆ ದೇಶಪಾಂಡೆ ಅವರು ಐದನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದರು. ಒಂದು ಕಾಲದಲ್ಲಿ ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದ ಈ ಶಾಲೆ ಉತ್ತಮ ಶಾಲೆ ಎನ್ನುವ ಹೆಸರನ್ನೂ ಗಳಿಸಿಕೊಂಡಿತ್ತು. ಆದರೆ, ಕ್ರಮೇಣ ಮರಾಠಿ ಮಾಧ್ಯಮಕ್ಕೆ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದ್ದರಿಂದ ಶಾಲೆಯನ್ನು ಮುಚ್ಚಿ, ಕೇವಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಯಗಳಿಗೆ ಕಟ್ಟಡವನ್ನು ಬಳಕೆ ಮಾಡಿಕೊಳ್ಳಲಾಗುತ್ತಿತ್ತು.

ಶಾಲಾ ಕಟ್ಟಡ ನವೀಕರಣಕ್ಕೆ ಮುಂದಾಗಿದ್ದ ಆರ್ ವಿಡಿ
ಶಿಥಿಲಗೊಂಡು ಮುಚ್ಚಲಾದ ಈ ಶಾಲೆಯ ಕುರಿತು ಪತ್ರಿಕೆಗಳಲ್ಲಿ ವರದಿಗಳು ಬಂದಿದ್ದವು. ಬಂದ ವರದಿಯನ್ನು ಓದಿದ ದೇಶಪಾಂಡೆಯವರು, ತಾವು ಓದಿದ ಶಾಲೆಯ ದುಃಸ್ಥಿತಿ ಕಂಡು ಬೇಸರಗೊಂಡಿದ್ದಲ್ಲದೇ ಅದನ್ನು ನವೀಕರಣ ಮಾಡಲು ಮುಂದಾಗಿದ್ದರು. ಅದರಂತೆ ಅವರ ಮನವಿ ಮೇರೆಗೆ ಆದಿತ್ಯ ಬಿರ್ಲಾ ಪ್ರೈವೇಟ್ ಲಿಮಿಟೆಡ್ ಕಂಪೆನಿ ಸಿಎಸ್ ಆರ್ ಯೋಜನೆಯಡಿಯಲ್ಲಿ ಕಟ್ಟಡದ ನವೀಕರಣ ಕಾರ್ಯವನ್ನು ಮಾಡಿದೆ. ಅದರಂತೆ ನವೀಕರಣಗೊಂಡ ಕಟ್ಟಡವನ್ನು ಜನವರಿ 27ರಂದು ಲೋಕಾರ್ಪಣೆ ಮಾಡಿ, ಶಾಲೆಯ ತರಗತಿಯೊಳಗೆ ಓಡಾಡುವ ಮೂಲಕ ಆರ್.ವಿ.ದೇಶಪಾಂಡೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

5001 ರೂ ದೇಣಿಗೆ ನೀಡಿದ್ದ ದೇಶಪಾಂಡೆ ಪೋಷಕರು
ಈ ಹಿಂದೆ ಹಳೆ ಕಟ್ಟಡದ ನಿರ್ಮಾಣದ ಸಂದರ್ಭದಲ್ಲಿ 1974ರಲ್ಲಿ ದೇಶಪಾಂಡೆಯವರ ಪಾಲಕರು ಕಟ್ಟಡ ನಿರ್ಮಾಣಕ್ಕೆಂದು ಇವರ ಅಜ್ಜ- ಅಜ್ಜಿಯ ಹೆಸರಿನಲ್ಲಿ 5,001 ರೂ.ಗಳ ದೇಣಿಗೆ ನೀಡಿದ್ದು, ಅದರ ನಾಮಫಲಕ ಇಂದಿಗೂ ಕಟ್ಟಡದ ಗೋಡೆಯ ಮೇಲೆ ಇರುವುದನ್ನು ಕಂಡು ಬೆರಗಾದರು. ಸಮಾಜ ಸೇವೆಯ ಮೊದಲ ಪಾಠವನ್ನು ತಂದೆ ತಾಯಿ ಈ ಮೂಲಕ ಕಲಿಸಿಕೊಟ್ಟಿದ್ದರು ಎಂದರು ದೇಶಪಾಂಡೆ. ಸದ್ಯ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮರಾಠಿ ಶಾಲೆ ನಡೆಯುತ್ತಿಲ್ಲವಾದ್ದರಿಂದ ಕಟ್ಟಡವನ್ನು ಶಿಕ್ಷಕರ ತರಬೇತಿ ಹಾಗೂ ಕಾರ್ಯಾಗಾರಕ್ಕೆ ಬಳಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೇಶಪಾಂಡೆ ಸೂಚನೆ ನೀಡಿದ್ದಾರೆ.

ಬಾಲ್ಯದ ನೆನಪಿಗೆ ಜಾರಿದ ದೇಶಪಾಂಡೆ
ತಾವು ಕಲಿತಿದ್ದ ಶಾಲಾ ಕಟ್ಟಡ ಮರುನವೀಕರಣಗೊಂಡಿದ್ದನ್ನು ಕಣ್ತುಂಬಿಕೊಂಡ ಆರ್.ವಿ.ದೇಶಪಾಂಡೆ, ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ನನ್ನ ಜೀವನದಲ್ಲಿ ಇದೊಂದು ಬಹು ಅಪರೂಪದ ಗಳಿಗೆ. ಆರು ದಶಕಗಳ ಹಿಂದಿನ ಮಧುರ ನೆನಪುಗಳು. ಸ್ನೇಹಿತರ ಒಡಗೂಡಿ ಆಡಿದ ಆಟ, ಶಿಕ್ಷಕರ ಪಾಠ ಎಲ್ಲವೂ ಒಮ್ಮೆಲೇ ನೆನಪಿಗೆ ಬಂತು, ಒಂದು ಕ್ಷಣ ನನ್ನ ಕಣ್ಣಾಲಿಗಳು ಒದ್ದೆಯಾದವು, ನನ್ನನ್ನು ಬಾಲ್ಯಕ್ಕೆ ಮತ್ತೆ ಕರೆದೊಯ್ದ ಅನುಭವವಾಯಿತು. ನನ್ನ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆ, ಮೊದಲ ಅಕ್ಷರ, ಶಿಕ್ಷಕರ ಮೊದಲ ಏಟಿಗೆ ಮೂಕ ಸಾಕ್ಷಿಯಾಗಿದೆ ಇದೇ ಕಟ್ಟಡ' ಎಂದು ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications