ಸ್ಮಶಾನ ಜಾಗದಲ್ಲಿ ನೌಕಾನೆಲೆ ಕಾಮಗಾರಿ ವಿಸ್ತರಣೆ: ಶವಸಂಸ್ಕಾರಕ್ಕೆ ಪರದಾಡಿದ ಗ್ರಾಮಸ್ಥರು
ಕಾರವಾರ, ನವೆಂಬರ್ 27: ನೌಕಾನೆಲೆಯಿಂದ ಸ್ಮಶಾನಕ್ಕೆ ತೆರಳುವ ರಸ್ತೆಯಲ್ಲಿ ಆಳೆತ್ತರದ ಕಂದಕ ನಿರ್ಮಾಣ ಮಾಡಲಾಗಿದ್ದು, ಶವ ಸಂಸ್ಕಾರಕ್ಕೆ ಜನ ಪರದಾಡಿರುವ ಘಟನೆ ಕಾರವಾರದ ತಾಲೂಕಿನ ತೋಡುರು ಗ್ರಾಮದಲ್ಲಿ ನಡೆದಿದೆ.
ತೋಡುರು ಗ್ರಾಮದ ಯುವಕ ರವಿಕಾಂತ ಗೌಡ ಎಂಬಾತ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತನ ಶವಸಂಸ್ಕಾರ ಮಾಡಲು ಊರವರು ತಯಾರಿ ಮಾಡಿಕೊಂಡಿದ್ದರು. ಆದರೆ ಕಟ್ಟಿಗೆಗಳನ್ನು ಸ್ಮಶಾನಕ್ಕೆ ಸಾಗಿಸಲು ಮುಂದಾದಾಗ ರಸ್ತೆ ಇಲ್ಲದಿರುವುದನ್ನು ಕಂಡು ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕೊನೆಗೆ ರಾತ್ರಿ ಕಳೆಯುವವರೆಗೂ ಮೃತದೇಹವನ್ನು ಮನೆಯಲ್ಲೇ ಇರಿಸಿಕೊಂಡಿದ್ದಾರೆ.
ಸೀಬರ್ಡ್ ನೌಕಾನೆಲೆ ಯೋಜನೆಯ ಎರಡನೇ ಹಂತದ ಕಾಮಗಾರಿ ನಡೆಸುತ್ತಿರುವ ಕಾರಣ ಕಾರವಾರ ತಾಲೂಕಿನ ಅಲಿಗದ್ದಾದಿಂದ ಅಂಕೋಲಾ ತಾಲೂಕಿನ ಬೇಲೇಕೇರಿಯವರೆಗೆ ಬೃಹತ್ ಕಂದಕದ ಕಾಲುವೆ ನಿರ್ಮಿಸಲಾಗುತ್ತಿದೆ. ನಿತ್ಯವೂ ಜೆಸಿಬಿ ಮೂಲಕ ಕಂದಕ ನಿರ್ಮಾಣ ಮಾಡಿ ಬೇಲಿ ನಿರ್ಮಾಣ ಮಾಡಲಾಗುತ್ತಿದೆ ಎನ್ನಲಾಗಿದೆ.

ಆದರೆ ಕಂದಕ ನಿರ್ಮಾಣ ಮಾಡಿದ ತೊಡೂರು ವ್ಯಾಪ್ತಿಯ ಗುಡ್ಡದ ಮೇಲೆ ಸ್ಮಶಾನ ಭೂಮಿ ಇದ್ದು ಅನಾದಿಕಾಲದಿಂದಲೂ ಊರಿನಲ್ಲಿ ಯಾರೇ ಸಾವನ್ನಪ್ಪಿದ್ದರು ಇಲ್ಲಿಯೇ ಶವ ಸಂಸ್ಕಾರ ಮಾಡಲಾಗುತ್ತದೆ. ಆದರೆ ಈ ಬಾರಿ ನೌಕಾನೆಲಯವರು ಕಂದಕ ನಿರ್ಮಾಣ ಮಾಡಿದ ಪರಿಣಾಮ ಸ್ಮಶಾನ ಹಾಗೂ ತೊಡೂರು ಗ್ರಾಮ ಬೇರೆ ಬೇರೆಯಾಗಿದೆ. ಸ್ಮಶಾನಕ್ಕೆ ಶವ ಸಂಸ್ಕಾರಕ್ಕೆ ತೆರಳಬೇಕೆಂದರೆ ಆಳೆತ್ತರದ ಕಂದಕ ದಾಟಿ ಹರಸಾಹಸಪಟ್ಟು ತೆರಳಬೇಕಿದೆ.
ಅನಾದಿ ಕಾಲದಿಂದ ಊರ ಪಕ್ಕದಲ್ಲಿ ಸ್ಮಶಾನ ಭೂಮಿ ಇದ್ದು, 36 ಗುಂಟೆ ಜಾಗಕ್ಕೆ 2016- 17ರಲ್ಲಿ ಹಕ್ಕುಪತ್ರ ನೀಡಲಾಗಿದೆ. ಆದರೆ ಇದೇ ಭೂಮಿಯನ್ನು ಆವರಿಸಿ ನೌಕಾನೆಲೆ ಟ್ರೆಂಚ್ ನಿರ್ಮಿಸಿಕೊಂಡಿದ್ದು, ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದೆ. ಈ ಬಗ್ಗೆ ನೌಕಾನೆಲೆಯ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಮುಂದೆ ಇಲ್ಲಿ ಬೇಲಿಯನ್ನೂ ಅಳವಡಿಸುವುದಾಗಿ ತಿಳಿಸಿದ್ದು, ಗ್ರಾಮಸ್ಥರಲ್ಲಿ ಮುಂದೆ ಶವಸಂಸ್ಕಾರ ಎಲ್ಲಿ ಮಾಡಬೇಕೆಂಬ ಗೊಂದಲ ಮೂಡಿಸಿದೆ.
ಶನಿವಾರ ಬೆಳಗ್ಗೆ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಾಗ ಸ್ಥಳಕ್ಕೆ ಧಾವಿಸಿದ ಕಾರವಾರ ತಹಶೀಲ್ದಾರ್ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಾತ್ಕಾಲಿಕವಾಗಿ ಶವ ಸಂಸ್ಕಾರ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಹಶೀಲ್ದಾರ್ ಎನ್.ಎಫ್.ನರೋನಾ, "ಸ್ಮಶಾನ ಭೂಮಿಗೆ ಸಾಗಲು ಗ್ರಾಮಸ್ಥರಿಗೆ ತೊಂದರೆಯಾಗಿರುವ ಬಗ್ಗೆ ನಮ್ಮ ಗಮನಕ್ಕೆ ಬಂದು ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಲಾಗಿದೆ. ಸ್ಮಶಾನ ಭೂಮಿ ಇರುವ ಜಾಗವನ್ನು ನೌಕಾನೆಲೆಗೆ 1986- 87ರಲ್ಲಿ ಅರಣ್ಯ ಇಲಾಖೆಯಿಂದ ಲಾಗಣಿ ನೀಡಲಾಗಿತ್ತು. ಸದ್ಯ ಯೋಜನೆ ವಿಸ್ತರಣೆಗೊಳ್ಳುತ್ತಿರುವುದರಿಂದ ಈಗ ಬೇಲಿ ನಿರ್ಮಿಸಿಕೊಳ್ಳಲು ಅವರು ಮುಂದಾಗಿದ್ದಾರೆ. ಆದರೆ ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications