ಕಾರವಾರ ಕಡಲ ತೀರದಲ್ಲಿ ಕ್ಷೀಣಿಸುತ್ತಿವೆ "ಸೀಬರ್ಡ್' ಪಕ್ಷಿಗಳು
ಕಾರವಾರ, ಜನವರಿ 27: ಪ್ರತಿವರ್ಷ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ವಿದೇಶದಿಂದ ಕಾರವಾರ ಕಡಲತೀರಕ್ಕೆ ಸೀಬರ್ಡ್ ಪಕ್ಷಿಗಳು ವಲಸೆ ಬಂದು ಕಾರವಾರದ ಕಡಲತೀರಗಳಲ್ಲಿ ತುಂಬಿಕೊಳ್ಳುತ್ತಿದ್ದವು. ಆದರೆ ಈ ಬಾರಿ ಬೆರಳೆಣಿಕೆಯಷ್ಟು ಪಕ್ಷಿಗಳು ಮಾತ್ರ ಆಗಮಿಸಿದ್ದು, ಕಾರವಾರ ಕಡಲತೀರದಲ್ಲಿ ಸೀಬರ್ಡ್ ಪಕ್ಷಿಗಳ ಕಲರವ ಕಾಣದಂತಾಗಿದೆ.
ರಷ್ಯಾ ಮೂಲದ ಸೀಬರ್ಡ್ ಪಕ್ಷಿಗಳು ದಶಕಗಳಿಂದಲೂ ಕಾರವಾರದ ಕಡಲತೀರಕ್ಕೆ ಪ್ರತಿವರ್ಷ ವಲಸೆ ಬರುತ್ತಿದ್ದವು. ಕಡಲತೀರದ ಬಳಿ ನಿಲ್ಲುವ ನಾಡದೋಣಿಗಳ ಮೇಲೆ ಕುಳಿತುಕೊಳ್ಳುವ ಪಕ್ಷಿಗಳ ಸಾಲು, ಕಡಲತೀರಕ್ಕೆ ಬರುವ ಪ್ರವಾಸಿಗರನ್ನೂ ಆಕರ್ಷಿಸುತ್ತಿದ್ದವು.
ಅಲ್ಲದೇ ಹಚ್ಚ ಹಸಿರಿನ ಮರಗಳ ಮೇಲೆ ಸಾಲು ಸಾಲಾಗಿ ಕುಳಿತುಕೊಳ್ಳುವ ಬೆಳ್ಳಕ್ಕಿಗಳ ಹಿಂಡು, ಮರಕ್ಕೆ ಬೆಳ್ಳನೆಯ ಹೊದಿಕೆ ಹೊದಿಸಿದಂತೆ ಕಾಣುತ್ತಿತ್ತು. ಆದರೆ ಈ ಬಾರಿ ಕಡಲತೀರದ ಒಂದು ತುದಿಯಲ್ಲಿ ಮಾತ್ರ ಕೆಲವೇ ಕೆಲವು ಸೀಬರ್ಡ್ ಪಕ್ಷಿಗಳು ಆಗಮಿಸಿದ್ದು ಬೆಳ್ಳಕ್ಕಿಗಳ ಸಂಖ್ಯೆ ಸಹ ಕಡಿಮೆಯಾಗಿದೆ.

ಪಕ್ಷಿಗಳನ್ನು ವೀಕ್ಷಿಸಿ ಆನಂದಪಡುತ್ತಿದ್ದ ಪ್ರವಾಸಿಗರಿಗೂ ಇದರಿಂದ ಬೇಸರವಾಗಿದ್ದು, ಹಕ್ಕಿಗಳನ್ನು ನೋಡಲು ಕಡಲತೀರಕ್ಕೆ ಬರುತ್ತಿದ್ದವರು ಬೇಸರ ಪಟ್ಟುಕೊಂಡು ವಾಪಸ್ ಹೋಗುವಂತಾಗಿದೆ.
ಪ್ರತಿ ವರ್ಷ ನವೆಂಬರ್ ತಿಂಗಳಿನಿಂದ ಈ "ಸೀ ಈಗಲ್' ಎಂದು ಕರೆಯುವ ಸೀಬರ್ಡ್ ಪಕ್ಷಿಗಳು ಹಾಗೂ ಬೆಳ್ಳಕ್ಕಿಗಳು ಕಡಲತೀರಕ್ಕೆ ವಲಸೆ ಬರುತ್ತಿದ್ದವು. ರಷ್ಯಾದಿಂದ ಹಾರಿಬರುವ ಈ ಪಕ್ಷಿಗಳು ಚಳಿಗಾಲದ ಎರಡು ಮೂರು ತಿಂಗಳ ಕಾಲ ಕಾರವಾರದಲ್ಲಿ ಬೀಡು ಬಿಟ್ಟು ಮರಿಗಳನ್ನು ಮಾಡಿಕೊಂಡ ಬಳಿಕ ಮತ್ತೆ ತಮ್ಮ ಮೂಲ ಸ್ಥಳಕ್ಕೆ ವಾಪಸ್ ತೆರಳುತ್ತಿದ್ದವು.

ಹೀಗಾಗಿ ಈ ಅವಧಿಯಲ್ಲಿ ಬಾನಾಡಿಗಳಿಂದ ತುಂಬಿರುತ್ತಿದ್ದ ಕಾರವಾರ ಕಡಲತೀರವು ಪಕ್ಷಿ ಪ್ರೇಮಿಗಳಿಗೆ, ವೈಲ್ಡ್ ಲೈಫ್ ಛಾಯಾಗ್ರಾಹಕರಿಗೆ ಈ ವಿಶಿಷ್ಟ ಪಕ್ಷಿಗಳ ಚಿತ್ರಪಟ ತೆಗೆಯಲು ಉತ್ತಮ ಅವಕಾಶ ದೊರೆಯುತ್ತಿತ್ತು ಅನ್ನೋದು ಸ್ಥಳೀಯರ ಅಭಿಪ್ರಾಯ.
ಇನ್ನು ಈ ಬಾರಿ ಉಂಟಾಗಿರುವ ಮತ್ಸ್ಯ ಕ್ಷಾಮ ಸೀಬರ್ಡ್ ಪಕ್ಷಿಗಳ ಸಂಖ್ಯೆ ಕಡಿಮೆಯಾಗಲು ಮುಖ್ಯ ಕಾರಣ ಎನ್ನಲಾಗಿದ್ದು, ಆಹಾರ ಸಿಗುವ ಪ್ರಮಾಣ ಕಡಿಮೆಯಾಗಿರುವುದರಿಂದ ಬೇರೆಡೆಗೆ ತೆರಳಿವೆ ಅನ್ನೋದು ಕಡಲ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕರ ಅಭಿಪ್ರಾಯವಾಗಿದೆ. ಈ ಹಿಂದೆ ಸಾವಿರ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದ ಈ ಸೀಬರ್ಡ್ ಪಕ್ಷಿಗಳನ್ನು ನೋಡಿಯೇ ಕಾರವಾರದ ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆ ಯೋಜನೆಗೆ "ಸೀಬರ್ಡ್ ನೌಕಾನೆಲೆ' ಎಂದು ಹೆಸರಿಡಲಾಗಿತ್ತು.

ಅಲ್ಲದೇ ಈ ಪಕ್ಷಿಗಳು ಹಾರಾಡುತ್ತಿದ್ದ ಪ್ರದೇಶದಲ್ಲೇ ಬಲೆಯನ್ನು ಹಾಕಿ ಮೀನುಗಾರರು ಹೆಚ್ಚಿನ ಮೀನು ಬೇಟೆಯನ್ನೂ ನಡೆಸುತ್ತಿದ್ದರು. ಆದರೆ ಇದೀಗ ಪಕ್ಷಿಗಳು ಆಗಮಿಸುವುದೇ ಕಡಿಮೆಯಾಗಿರುವುದರಿಂದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರಿದ್ದು, ಮೀನುಗಾರರಿಗೂ ಆತಂಕವನ್ನು ಉಂಟುಮಾಡಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications