ಹಿರಿಯ ಸಾಹಿತಿ, ಪತ್ರಕರ್ತ ನಾ.ಸು ಭರತನಹಳ್ಳಿ ನಿಧನ
ಕಾರವಾರ, ಡಿಸೆಂಬರ್ 25: ಹಿರಿಯ ಸಾಹಿತಿ, ಪತ್ರಕರ್ತ ನಾರಾಯಣ್ ಸುಬ್ರಾಯ್ ಹೆಗಡೆ(ನಾ.ಸು ಭರತನಹಳ್ಳಿ 84) ಶುಕ್ರವಾರ ನಿಧನ ಹೊಂದಿದ್ದಾರೆ. ಇವರು ಸೊಸೆ, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾ.ಸು ಕೇವಲ ಲೇಖಕ ಮಾತ್ರವಲ್ಲ. ಕೃಷಿಕ, ಸಂಘಟಕ, ರಂಗಕರ್ಮಿ, ಪತ್ರಕರ್ತ, ಪ್ರಕಾಶಕ ಎಲ್ಲವೂ ಹೌದು. 1954 ರಿಂದ ಬರೆಯಲು ಪ್ರಾರಂಭಿಸಿದ ಅವರು ಕೊನೆಯವರೆಗೂ ಬರವಣಿಗೆ ನಿಲ್ಲಿಸಿರಲಿಲ್ಲ. "ಬಯಲು ಬೆತ್ತಲೆ' ಕಥಾ ಸಂಕಲನ, ಭೂಮಿಕೆ, ಪರಿವೃತ ಕಾದಂಬರಿಗಳು, ಅವಾಂತರ ನಾಟಕ, ಆಕಾಶ ಹರಿದು ಬೀಳುತ್ತದೆ, ಪಂಜರದಲ್ಲಿ ಹುಲಿ, ರೊಬೊಟೊ ಮತ್ತು ಇತರ ಚಿಹ್ನೆಗಳು ಮಕ್ಕಳ ನಾಟಕಗಳುನ್ನು ಬರೆದಿದ್ದಾರೆ.
ತಾಲಿಬಾನ್ ಅಪಘಾನ್ ಮತ್ತು ನಾನು ಅನುವಾದ ಕೃತಿ, ಪೂರ್ವತಟದಿ ಪುಟ್ಟ ವಿಶ್ವ ಪ್ರವಾಸಿ ಕಥೆ, ಗೌರೀಶ ಕಾಯ್ಕಿಣಿ ಬದುಕು ಬರಹ ಸಾಹಿತ್ಯ ಪರಿಷತ್ತು ಪ್ರಕಟಣೆ, ಪರಂಪರೆ ಅಂಕಣ ಬರಹ ಸೇರಿದಂತೆ 30 ಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದಾರೆ.

ಕಳೆದ ಎರಡು ದಶಕಗಳ ಹಿಂದೆ ರಾಜ್ಯದಲ್ಲೇ ಮೊದಲ ಬಾರಿಗೆ ತಾಲೂಕಾ ಕೇಂದ್ರವೊಂದರಲ್ಲಿ ಕನ್ನಡ ಸಾಹಿತ್ಯ ಭವನವನ್ನು ಕಟ್ಟಿ ನಿಲ್ಲಿಸಿದ ಹೆಗ್ಗಳಿಕೆ ಇವರದು. ತನ್ಮೂಲಕ ಯಲ್ಲಾಪುರದ ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕಿದ್ದರು. ಪತ್ರಿಕಾ ಬರಹ, ಕಥಾ ಸಂಕಲನ, ಕಾದಂಬರಿ, ಅಂಕಣ ಬರಹ, ರಾಜ್ಯ ಮಟ್ಟದ ಪತ್ರಿಕೆಗಳಿಗೆ ವರದಿಗಾರಿಕೆ ಎಲ್ಲವನ್ನೂ ನಿಭಾಯಿಸಿದ್ದರು.
"ಮುನ್ನಡೆ' ವಾರಪತ್ರಿಕೆ, ದಿನಪತ್ರಿಕೆಯ ಸಂಪಾದಕರಾಗಿ, ಸ್ವರ್ಣವಲ್ಲಿ ಪ್ರಭಾದ ಸಂಪಾದಕತ್ವವನ್ನು 21 ವರ್ಷಗಳ ಕಾಲ ಯಶಸ್ವಿಯಾಗಿ ನಿರ್ವಹಿಸಿದ್ದರು. 70ನೇ ವರ್ಷದಲ್ಲಿ ಅವರಿಗೆ "ಸನ್ಮತಿ' ಎನ್ನುವ ಅಭಿನಂದನಾ ಗ್ರಂಥ ಅರ್ಪಿಸಲ್ಪಟ್ಟಿದೆ. ಪ್ರೊ.ಟಿ.ಜಿ.ಭಟ್ ಹಾಸಣಗಿ ಅವರು ನಾ.ಸು ಬಗ್ಗೆ "ಅವ್ಯಾಜ ಪ್ರೀತಿ' ಎಂಬ ಕೃತಿ ಬರೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ 14 ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ಯಲ್ಲಾಪುರ ತಾಲೂಕಾ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷ ಗೌರವ ಅವರಿಗೆ ಸಂದಿವೆ. ಯಲ್ಲಾಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 25 ವರ್ಷಗಳ ಕಾಲ ಅಧ್ಯಕ್ಷರಾಗಿ, ಸಾಹಿತ್ಯ ಪರಿಚಾರಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ನಾ.ಸು ಅವರಿಗೆ ಕೆ.ಶ್ಯಾಮರಾವ್ ದತ್ತಿ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಶ್ರೀ ಪ್ರಶಸ್ತಿ, ಕಾಸರಗೋಡಿನ ಕಯ್ಯಾರ ಕಿಂಞ್ಞಣ ರೈ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಗ್ರಂಥ ಪ್ರಶಸ್ತಿ, ಮುಂಬೈಯ ಸೂರಿ ವೆಂಕಟರಮಣ ಶಾಸ್ತ್ರಿ ಪ್ರಶಸ್ತಿ, ಶಿರಸಿಯ ಉಪಾಯನ ಪ್ರಶಸ್ತಿ, ಸ್ವರ್ಣವಲ್ಲೀ ಮಠದ ಸಾಹಿತ್ಯ ರತ್ನಾಕರ, ಸಾಹಿತ್ಯ ಅಕಾಡೆಮಿ ಸುವರ್ಣ ಗೌರವ ಸೇರಿದಂತೆ ವಿವಿಧ ಪ್ರಶಸ್ತಿಗಳು ಸಂದಿವೆ. ನೂರಾರು ಸಂಘಟನೆಗಳು ಅವರನ್ನು ಗುರುತಿಸಿ, ಗೌರವಿಸಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications