ಸತತ 9ನೇ ಬಾರಿಗೆ ಗೆದ್ದ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರು
ಕಾರವಾರ, ಡಿಸೆಂಬರ್ 30: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರುವೊಬ್ಬರು ಸತತ 9ನೇ ಬಾರಿಗೆ ಗ್ರಾಮ ಪಂಚಾಯಿತಿಗೆ ಎಂಟ್ರಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಳ್ಳಾಪುರ ವಾರ್ಡ್ ನ ಅಭ್ಯರ್ಥಿಯಾಗಿದ್ದ ಶ್ರೀಕಾಂತ ಶೆಟ್ಟಿ ಅವರು ಸತತ 9 ನೇ ಬಾರಿಗೆ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಈ ಹಿಂದೆ 6 ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದ ಶ್ರೀಕಾಂತ ಶೆಟ್ಟಿ ಅವರು, ಈ ಚುನಾವಣೆ ಸೇರಿ ಮೂರು ಬಾರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಅರಬೈಲ್ ಹಾಗೂ ಇಡಗುಂದಿ ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಮ ಹೆಬ್ಬಾರ್ ಅವರ ರಾಜಕೀಯ ಗುರುವಾಗಿದ್ದಾರೆ. ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಕೂಡ ಹಲವು ಬಾರಿ ಉಚ್ಚರಿಸಿದ್ದರು.
Comments
English summary
Uttar Kannada district in charge Minister Shivram Hebbar's political guru has entered the Gram panchayat for the 9th consecutive time.