ಬಿಜೆಪಿಗೆ ಸೇರುವಂತೆ ಒತ್ತಾಯಿಸಿರುವುದು ನನ್ನ ಅಭಿಮಾನಿಗಳು: ಶಿವರಾಂ ಹೆಬ್ಬಾರ್
ಕಾರವಾರ, ಸೆಪ್ಟೆಂಬರ್.17: ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿಯು ಕಳೆದ ಹಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಹೆಬ್ಬಾರರು ಸ್ಪಷ್ಟನೆ ನೀಡಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ಷಣದವರೆಗೆ ರಾಜೀನಾಮೆ ಕೊಡುವ ಬಗ್ಗೆ ನಿರ್ಣಯವಾಗಿಲ್ಲ ಎಂದು ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ವರದಿಗಳಿಗೆ ಪದೇ ಪದೆ ಉತ್ತರ ಕೊಡಲು ನನ್ನಿಂದ ಸಾಧ್ಯವಿಲ್ಲ. ನನಗೆ ಗೊತ್ತಿಲ್ಲದ ಹಲವು ಸಂಗತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ.
30 ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರಷ್ಟೆ: ಕಮಲ್ ನಾಥ್
ಊಹೆಗೂ ನಿಲುಕದ ವಿಚಾರಗಳು ಮಾಧ್ಯಮಗಳಲ್ಲಿ ಭಿತ್ತರಗೊಳ್ಳುತ್ತಿರುವುದು ಆಶ್ಚರ್ಯ ತಂದಿದೆ. ಬಿಜೆಪಿಗೆ ಸೇರುವಂತೆ ನನ್ನ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಆದರೆ, ರಾಜಕೀಯ ಕ್ಷೇತ್ರದಲ್ಲಿ ಇದು ಸಾಮಾನ್ಯ ಎಂದು ತಿಳಿಸಿದ್ದಾರೆ.
ವಿಶ್ಲೇಷಣೆ : ಬಿಎಸ್ವೈ ನೇತೃತ್ವದಲ್ಲಿ ಅಲ್ಪಮತದ ಸರಕಾರ ರಚಿಸಲು ಬಿಜೆಪಿ ಸಿದ್ಧ?
ಕೆಲವು ಮಾಧ್ಯಮಗಳಲ್ಲಿ ಶಿವರಾಮ ಹೆಬ್ಬಾರ್ ಬಿಜೆಪಿ ಸೇರುವುದಾಗಿಯೂ, ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಬೆಂಗಳೂರಿಗೆ ತೆರಳುತ್ತಿರುವುದಾಗಿಯೂ ಸುದ್ದಿ ಬರುತ್ತಿದ್ದವು.
ಕಾಂಗ್ರೆಸ್ ಶಾಸಕರ ಬೆಂಬಲ ಸಿಕ್ಕರೆ ಬಿಜೆಪಿ ಸರ್ಕಾರ: ಆಪರೇಷನ್ಗೆ ಅಸ್ತು?
ಹೆಬ್ಬಾರರು, ಬೆಳಗ್ಗೆ ಪಟ್ಟಣದಲ್ಲಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಗಳ ದರ್ಶನ ಪಡೆದಿದ್ದಾರೆ. ಮಧ್ಯಾಹ್ನ ಬೆಂಗಳೂರಿಗೆ ತೆರಳಿ, ಸಭೆಯೊಂದರಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.