ಅಕ್ರಮ ಸಂಬಂಧದ ಕಿಚ್ಚಿಗೆ ವ್ಯಕ್ತಿ ಬಲಿ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪದಲ್ಲಿ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯವಾಗಿದೆ. ಪತ್ನಿಯ ನಡವಳಿಕೆಯ ಬಗ್ಗೆ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ಪತ್ನಿ, ಆಕೆಯ ತಂದೆ ಮತ್ತು ಪ್ರಿಯಕರ ಸೇರಿ ನಡೆಸಿದ ಹಲ್ಲೆಯಲ್ಲಿ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆ
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಮಹೇಶ್ ನಾಯ್ಕ್ ಅವರ ಪತ್ನಿ ಸುಚಿತ್ರಾ, ಸಿದ್ದಾಪುರದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸವಾಗಿದ್ದರು. ಇತ್ತೀಚೆಗೆ ಆಕೆಗೆ ಜ್ಯೋತಿಷಿ ಕಮಲಾಕರ್ ಭಟ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿದ್ದು, ಕಮಲಾಕರ್ ಭಟ್ ಆಗಾಗ ಸುಚಿತ್ರಾ ಮನೆಗೆ ಬಂದು ವಾಸ್ತವ್ಯ ಹೂಡುತ್ತಿದ್ದ ಎನ್ನಲಾಗಿದೆ. ಮನೆಯಲ್ಲಿ ತಾಯಿಯ ಈ ವರ್ತನೆಯನ್ನು ಗಮನಿಸಿದ ಹಿರಿಯ ಮಗಳು ಇದನ್ನು ಪ್ರಶ್ನಿಸಿದ್ದಾಳೆ. ಇದರಿಂದ ಕುಪಿತಗೊಂಡ ಸುಚಿತ್ರಾ ತನ್ನ ಸ್ವಂತ ಮಕ್ಕಳಿಗೇ ಹಿಂಸೆ ನೀಡಲು ಆರಂಭಿಸಿದ್ದಳು.

ತಾಯಿಯ ಕಿರುಕುಳ ತಾಳಲಾರದೆ ಹಿರಿಯ ಪುತ್ರಿ ಬೆಂಗಳೂರಿನಲ್ಲಿದ್ದ ತಂದೆ ಮಹೇಶ್ ನಾಯ್ಕ್ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ಊರಿಗೆ ಬಂದ ಮಹೇಶ್, ಪತ್ನಿಯ ನಡವಳಿಕೆ ಮತ್ತು ಜ್ಯೋತಿಷಿಯ ಹಸ್ತಕ್ಷೇಪದ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಮಹೇಶ್ ನಾಯ್ಕ್ ದೂರು ನೀಡಿ ತನ್ನ ಸಹೋದರ ವಸಂತ್ ನಾಯ್ಕ್ ಅವರ ಮನೆಗೆ ತೆರಳಿದ್ದರು. ತನ್ನ ವಿರುದ್ಧ ಪತಿ ದೂರು ನೀಡಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಸುಚಿತ್ರಾ ರೊಚ್ಚಿಗೆದ್ದಿದ್ದಾಳೆ. ತಕ್ಷಣವೇ ತನ್ನ ತಂದೆ ಲೋಕನಾಥ್ ಮತ್ತು ಪ್ರಿಯಕರ ಕಮಲಾಕರ್ ಭಟ್ ಹಾಗೂ ಇತರ ಸಹಚರರನ್ನು ಕರೆದುಕೊಂಡು ವಸಂತ್ ನಾಯ್ಕ್ ಅವರ ಮನೆಗೆ ನುಗ್ಗಿದ್ದಾಳೆ. ಅಲ್ಲಿ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ಈ ದಾಳಿಯಲ್ಲಿ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ವಸಂತ್ ನಾಯ್ಕ್ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಘಟನೆ ನಡೆದ ಬೆನ್ನಲ್ಲೇ ಆರೋಪಿಗಳು ತಲೆಮರೆಸಿಕೊಳ್ಳಲು ಯತ್ನಿಸಿದ್ದರು. ಆದರೆ ಸಿದ್ದಾಪುರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸಿದ್ದಾಪುರದಲ್ಲಿ ನಾಲ್ವರನ್ನು ಹಾಗೂ ಶಿವಮೊಗ್ಗದಲ್ಲಿ ಅವಿತಿದ್ದ ಮೂವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಲ್ಲಿ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಜ್ಯೋತಿಷಿ ಕಮಲಾಕರ್ ಭಟ್ ಪ್ರಮುಖರಾಗಿದ್ದಾರೆ. ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಹಲ್ಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಶಾಂತವಾಗಿದ್ದ ಮಲೆನಾಡು ಭಾಗದಲ್ಲಿ ಈ ಘಟನೆ ತೀವ್ರ ಸಂಚಲನ ಮೂಡಿಸಿದೆ.
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ












Click it and Unblock the Notifications