ಅಂಗವಿಕಲರ ಐಪಿಸಿಎ ವಿಶ್ವ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಸಮರ್ಥ ಭಾಗಿ
ಕಾರವಾರ, ಜೂನ್.22: ಜೆಕ್ ಗಣರಾಜ್ಯದ ಪ್ರೇಗ್ ನಲ್ಲಿ ಆಯೋಜನೆಯಾಗಿರುವ ಅಂಗವಿಕಲರ ಐಪಿಸಿಎ ವಿಶ್ವ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಮರ್ಥ ಜಿ. ರಾವ್ ಪಾಲ್ಗೊಂಡಿದ್ದಾರೆ.
ಈ ಟೂರ್ನಿಯಲ್ಲಿ ಭಾರತದ ಒಟ್ಟು ಮೂವರು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಸಮರ್ಥ ಜೊತೆ ಪುಣೆಯ ಶಶಿಕಾಂತ ಕುತ್ವಾಲ್ ಹಾಗೂ ತಮಿಳುನಾಡಿನ ತಿರು ಚಿರಾಪಳ್ಳಿಯ ಕೆ.ಜೆನ್ನಿತಾ ಆಯಂಟೊ ತೆರಳಿದ್ದಾರೆ.
ಟೂರ್ನಿ ಜೂ. 21ರಂದು ಆರಂಭವಾಗಿದ್ದು 30ರ ವರೆಗೆ ನಡೆಯಲಿದೆ. ದೈಹಿಕವಾಗಿ ಓಡಾಡಲು ಹಾಗೂ ಸ್ಪಷ್ಟವಾಗಿ ಮಾತನಾಡಲು ಬರದ ಸಮರ್ಥ ಚದುರಂಗದ ಆಟದಲ್ಲಿ ಎಲ್ಲರಿಗಿಂತಲೂ ಸಮರ್ಥ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಎಂ.ಪಿ.ಇ ಸೊಸೈಟಿಯ ಎಸ್.ಡಿ.ಎಂ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಮರ್ಥ ಜೆ.ರಾವ್ ಎಂಥವರಿಗೂ ಕೂಡ ಸ್ಪೂರ್ತಿಯ ಮೂರ್ತಿ.
ಹುಟ್ಟಿದ ಬಳಿಕ ಸೆಲೆಬ್ರಲ್ ಪಾಲ್ಸಿಯಿಂದ ವಿಕಲಚೇತನಕ್ಕೆ ತುತ್ತಾದ ಸಮರ್ಥ, ಸರಾಗವಾಗಿ ನಡೆಯಲಾರ ಹಾಗೂ ಸ್ಪಷ್ಟವಾಗಿ ಮಾತನಾಡಲು ಕೂಡ ಈತನಿಂದ ಅಸಾಧ್ಯ. ಇದರಿಂದ ತಂದೆ ಅಥವಾ ತಾಯಿಯೇ ಈತನನ್ನು ಹೊತ್ತುಕೊಂಡೇ ಹೋಗ ಬೇಕು. ಶಾಲೆ, ಕಾಲೇಜಿಗೂ ಕೂಡ ಹೊತ್ತು ಕೊಂಡೇ ಹೋಗಿ ಬಿಟ್ಟುಬರಬೇಕು.
ಆದರೆ, ಚದುರಂಗದಲ್ಲಿ ಮಾತ್ರ ಈತ ಅಸಾಮಾನ್ಯ ಆಟಗಾರ. ಇದೀಗ ಅಂಗವಿಕಲರ ಐಪಿಸಿಎ ವಿಶ್ವ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಸಮರ್ಥ ಪಾಲ್ಗೊಂಡಿದ್ದು, ಅವರು ಗೆದ್ದು ಬರಲಿ ಎಂಬುದೇ ಎಲ್ಲರ ಆಶಯ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications