ಸೋದರ ಮಾವನ ವಿರುದ್ದವೇ ಕುಮಾರ್ ಬಂಗಾರಪ್ಪ ಭರ್ಜರಿ ಪ್ರಚಾರ
ಹಾವೇರಿ, ನ 18: 'ಸಂಬಂಧ'ಗಳು ಆಮೇಲೆ, ಮೊದಲು ರಾಜಕೀಯ ಎನ್ನುವಂತೆ, ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರವೊಂದರಲ್ಲಿ, ಕಣದಲ್ಲಿರುವ ಸೋದರ ಮಾವನ ವಿರುದ್ದವೇ ಅಳಿಯ ಪ್ರಚಾರ ನಡೆಸುತ್ತಿದ್ದಾರೆ.
ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಮ ಹೆಬ್ಬಾರ್, ಕಾಂಗ್ರೆಸ್ಸಿನಿಂದ ಭೀಮಣ್ಣ ನಾಯ್ಕ್ ಮತ್ತು ಜೆಡಿಎಸ್ ನಿಂದ ಚೈತ್ರಾ ಗೌಡ ಸ್ಪರ್ಧಿಸುತ್ತಿದ್ದಾರೆ.
ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಕೆಯ ಕೊನೆಯ ದಿನ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಅನಂತ್ ಕುಮಾರ್ ಹೆಗಡೆ, ಶಾಸಕರಾದ ಕುಮಾರ್ ಬಂಗಾರಪ್ಪ, ರೂಪಾಲಿ ನಾಯ್ಕ, ಹರೀಶ್ ಪೂಂಜಾ ಮುಂತಾದವರು ಹಾಜರಿದ್ದರು.

ಕ್ಷೇತ್ರದಲ್ಲಿ ಶಿವರಾಮ ಹೆಬ್ಬಾರ್ ಅವರಿಗೆ ಪ್ರಮುಖ ಪ್ರತಿಸ್ಪರ್ಧಿಯಾಗಿರುವುದು ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ್. ಪಾಟೀಲ್ ಪರವಾಗಿ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಪ್ರಚಾರ ನಡೆಸುತ್ತಿದ್ದಾರೆ.
ಹಾಗಾಗಿ, ಇಲ್ಲಿ, ಕುಮಾರ್ ಬಂಗಾರಪ್ಪ ತಮ್ಮ ಸೋದರ ಮಾವ, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಭೀಮಣ್ಣ ನಾಯ್ಕ್ ಅವರ ವಿರುದ್ದ ಕ್ಯಾಂಪೇನ್ ಮಾಡುತ್ತಿದ್ದಾರೆ. ಕುಮಾರ್ ಬಂಗಾರಪ್ಪನವರ ತಾಯಿಯ ಸಹೋದರ ಭೀಮಣ್ಣ ನಾಯ್ಕ್.
ಕಳೆದ 2018ರ ಅಸೆಂಬ್ಲಿ ಚುನಾವಣೆಯಲ್ಲಿ, ಸೊರಬ ಕ್ಷೇತ್ರದಿಂದ, ಬಿಜೆಪಿಯಿಂದ ಸ್ಪರ್ಧಿಸಿದ್ದ ಕುಮಾರ್ ಬಂಗಾರಪ್ಪ, ತಮ್ಮ ಸಹೋದರ ಮಧು ಬಂಗಾರಪ್ಪ ವಿರುದ್ದ 13,286 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications