ವಿಶ್ವ ಮಕ್ಕಳ ದಿನದಂದು ಪಾಲಕರಿಗೆ ಒಂದು ಕಿವಿಮಾತು...
ಸುಪ್ರಸಿದ್ಧ ಮನೋವಿಜ್ಞಾನಿ ಆಡ್ಲರನ ಪ್ರಕಾರ ಅಪರಾಧ ಮತ್ತು ಮನೋರೋಗಗಳಿಗೆ ಮುಖ್ಯ ಕಾರಣಗಳು ಎರಡು. 1. ಮಕ್ಕಳನ್ನು ಅತಿಮುದ್ದು ಮಾಡಿ ಬೆಳೆಸುವುದು. 2. ಮಕ್ಕಳನ್ನು ಪ್ರೇಮವಿಲ್ಲದೆ ಬೆಳೆಸುವುದು.
ಒಂದು ಮಗುವನ್ನು ಇನ್ನೊಂದು ಮಗುವಿನೆದುರು ಹೀಯಾಳಿಸಿ ಮಾತನಾಡಬಾರದು. ಹಾಗಿ ಮಾಡಿದರೆ ಮಗುವಿಗೆ ತಾನು ಇನ್ನೊಂದು ಮಗುವಿಗಿಂತ ಕೀಳೆಂಬ ಮನೋಭಾವ ಬೆಳೆಯುತ್ತದೆ. ಆತ್ಮ ಭರವಸೆ ಕುಗ್ಗಿ ಹೋಗಿ ಆ ಮಗು ಸ್ವತಂತ್ರವಾಗಿ ಏನನ್ನೂ ಮಾಡಲಾರದಂತಾಗುತ್ತದೆ.
ಮಕ್ಕಳ ಭವಿಷ್ಯತ್ತು ಅವರ ಮನಸ್ಸಿನ ಬೆಳವಣಿಗೆಯನ್ನು ಅವಲಂಬಿಸಿದೆ. ಮನಸ್ಸಿನ ಆರೋಗ್ಯ ಸರಿಯಿದ್ದರೆ, ದೇಹಾರೋಗ್ಯವೂ ಚೆನ್ನಾಗಿರುತ್ತದೆ. ಮಕ್ಕಳ ಮನೋವಿಜ್ಞಾನವು ಈ ದೃಷ್ಟಿಯಿಂದ ಮಹತ್ವ ಪಡೆದಿದೆ.
ವಿಶ್ವದಾದ್ಯಂತ ಮಕ್ಕಳ ದಿನಾಚರಣೆಯನ್ನು ನವೆಂಬರ್ 20 ರಂದು ಆಚರಿಸುತ್ತಾರೆ. ಭಾರತದಲ್ಲಿ ನವೆಂಬರ್ 14 ರಂದು ಜವಾಹರ್ ಲಾಲ್ ನೆಹರುರವರ ಹುಟ್ಟುಹಬ್ಬದಂದು ಮಕ್ಕಳ ದಿನಾಚರಣೆಯನ್ನು ನಮ್ಮ ದೇಶದಲ್ಲಿ ಆಚರಿಸಲಾಗುತ್ತದೆ. ಮಕ್ಕಳ ಹಕ್ಕು ಹಿತರಕ್ಷಣೆ ಮತ್ತು ಹೋಗಕ್ಷೇಮದ ಉದ್ದೇಶದೊಂದಿಗೆ ಜಗತ್ತಿನಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಾರೆ.

ವಿ.ಎನ್. ಕುಲಕರ್ಣಿ ಎನ್ನುವವರು 1951ರಲ್ಲಿ ವಿಶ್ವಸಂಸ್ಥೆಯ ಒಂದು ಯೋಜನೆಯಡಿಯಲ್ಲಿ ಇಂಗ್ಲೆಂಡಿನ ಮಕ್ಕಳ ಕಲ್ಯಾಣಕ್ಕಾಗಿ ದುಡಿಯುತ್ತಿದ್ದರು.
ಆ ದಿನಗಳಲ್ಲಿ ಬಡ ಮಕ್ಕಳ ಅಭಿವೃದ್ಧಿಗಾಗಿ ನಿಧಿ ಸಂಗ್ರಹಕ್ಕೆ ರಾಣಿ ಎಲಿಜಬೆತ್-2 ಅವರ ಜನ್ಮದಿನವನ್ನು ಧ್ವಜ ದಿನಾಚರಣೆಯನ್ನಾಗಿ ಆಚರಿಸುತ್ತಾ ಧನ ಸಂಗ್ರಹಿಸಲಾಗುತ್ತಿತ್ತು.
ಆ ಸಂದರ್ಭದಲ್ಲಿ ಕುಲಕರ್ಣಿಯವರು ಮನಸ್ಸು ಸಹಜವಾಗಿಯೇ ಭಾರತೀಯ ಮಕ್ಕಳ ಸ್ಥಿತಿಗತಿಯ ಬಗ್ಗೆ ಮಿಡಿಯಿತು. ಇಂತಹದೊಂದು ಯೋಜನೆ ಭಾರತದಲ್ಲೂ ನಡೆಯಬೇಕು. ಮಕ್ಕಳಿಗಾಗಿ ಧನ ಸಂಗ್ರಹಿಸಿ ವಿಶೇಷ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪವಿಟ್ಟರು.
ಮಕ್ಕಳ ಹಕ್ಕು ಹಿತರಕ್ಷಣೆ ಮತ್ತು ಯೋಗಕ್ಷೇಮದ ಉದ್ದೇಶದೊಂದಿಗೆ ಜಗತ್ತಿನಾದ್ಯಂತ ಮಕ್ಕಳ ದಿನಾಚರಣೆಯನ್ನು 20 ನವೆಂಬರ್ 1954 ರಂದು ಆಚರಿಸಲು ವಿಶ್ವಸಂಸ್ಥೆ ಕರೆನೀಡಿದರು. ಮಕ್ಕಳ ದಿನಾಚರಣೆಯ ಮುಖ್ಯ ಉದ್ದೇಶ ಮಕ್ಕಳ ಹಕ್ಕು, ಹಿತರಕ್ಷಣೆ, ಯೋಗಕ್ಷೇಮ, ಮಕ್ಕಳ ಆರೋಗ್ಯ, ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿಗೆ ಶ್ರಮಿಸುವುದು. "ಇಂದಿನ ಮಕ್ಕಳೆ ಮುಂದಿನ ಜನಾಂಗ". ಪಾಲಕರಿಗೆ ಒಂದು ಕಿವಿಮಾತು. "ಮಕ್ಕಳಿಗಾಗಿ ಆಸ್ತಿಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿಮಾಡಿ".
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications