ಕಾರವಾರ: ಸಾಮಾಜಿಕ ಚಿಂತಕ, ಶ್ರೀಕೃಷ್ಣಾ ಗ್ರೂಪ್ ಸಂಸ್ಥಾಪಕ ಪುತ್ತು ಪೈ ನಿಧನ
ಕಾರವಾರ, ಆಗಸ್ಟ್ 31: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮದೇ ಆದ ಸ್ವಂತ ಉದ್ಯೋಗವನ್ನು ಮಾಡಿಕೊಂಡು ಅನೇಕ ಜನರಿಗೆ ಉದ್ಯೋಗ ಒದಗಿಸಿ ಆಸರೆಯಾಗಿದ್ದ ಮಾದರಿ ವ್ಯಕ್ತಿತ್ವದ ಶ್ರೀಕೃಷ್ಣಾ ಗ್ರೂಪ್ನ ಸಂಸ್ಥಾಪಕ ಅಧ್ಯಕ್ಷ, ಶ್ರೀಕೃಷ್ಣಾ ಮಿಲ್ಕ್ಸ್ ಲಿ. ಅಧ್ಯಕ್ಷರಾಗಿದ್ದ ಪುತ್ತು (ಹನುಮಂತ) ಪೈ ಸೋಮವಾರ ರಾತ್ರಿ ಭಟ್ಕಳ ತಾಲ್ಲೂಕಿನ ಕಿರವತ್ತಿಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತ ಪುತ್ತು (ಹನುಮಂತ) ಪೈಯವರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಸೋಮವಾರ ಕಿರುವತ್ತಿಯ ತಮ್ಮ ನಿವಾಸದಲ್ಲಿ ಶ್ರೀಕೃಷ್ಣಾಷ್ಟಮಿಯ ಪೂಜೆಯನ್ನು ನೇರವರಿಸಿದ್ದರು. ಪೂಜೆಯ ಬಳಿಕ ಇವರಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಶ್ರೀಕೃಷ್ಣಾ ಮಿಲ್ಕ್ ಸಂಸ್ಥಾಪಕರಾಗಿದ್ದ ಪುತ್ತು ಪೈ ಸದಾ ಸಾಮಾಜಿಕ, ಧಾರ್ಮಿಕ ಚಿಂತನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಗೋಕರ್ಣದ ಪರ್ತಗಾಳಿ ಶ್ರೀಮದ್ ವಿದ್ಯಾಧಿರಾಜ ಶ್ರೀಪಾದ ಒಡೆಯರ ಸ್ವಾಮೀಜಿಯ ಪ್ರಿಯ ಶಿಷ್ಯರಲ್ಲಿ ಪುತ್ತು ಪೈ ಒಬ್ಬರಾಗಿದ್ದರು. ಗೋಕರ್ಣ ಪರ್ತಗಾಳಿ ಮಠಕ್ಕಾಗಿ ಹಗಲಿರುಳು ಸೇವೆ ಸಲ್ಲಿಸಿದ್ದಾರೆ.

ಬದರಿನಾಥ ಚಾತುರ್ಮಾಸ ವ್ರತ ಸೇರಿದಂತೆ ವಿವಿಧೆಡೆ ಸ್ವಾಮೀಜಿಯವರ ಚಾತುರ್ಮಾಸದಲ್ಲಿ ಅವರೊಂದಿಗೆ ವಾಸ್ತವ್ಯ ಹೂಡಿದ್ದರು. ಭಟ್ಕಳ ಶ್ರೀಶಾಂತೇರಿ ಕಾಮಾಕ್ಷೀ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಭಿವೃದ್ಧಿಗೆ ತನ್ನದೆ ಕೊಡುಗೆ ನೀಡಿದ್ದರು. ಪುತ್ತು ಪೈ ಅಕಾಲಿಕ ಮರಣದಿಂದ ಉತ್ತರ ಕನ್ನಡ ಜಿಲ್ಲೆಯ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಶೋಕ ಸಾಗರದಲ್ಲಿ ಮುಳುಗಿದ್ದು, ಭಟ್ಕಳ ಜಿಎಸ್ಬಿ ಸಮಾಜದ ಅಂಗಡಿ ಮಳಿಗೆಗಳು ಬಂದ ಮಾಡಿ ಗೌರವ ಸೂಚಿಸಿದೆ.
ಮೃತರ ಅಂತಿಮ ದರ್ಶನಕ್ಕಾಗಿ ಭಟ್ಕಳದ ಅವರ ನಿವಾಸದಲ್ಲಿ ೧೨ ಗಂಟೆಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಂತಿಮ ಸಂಸ್ಕಾರವನ್ನು ಭಟ್ಕಳದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications