ಹಫ್ತಾಕ್ಕೆ ಬೇಡಿಕೆ ಆರೋಪದಲ್ಲಿ ಶ್ರೀರಾಮ ಸೇನಾ ಉಪಾಧ್ಯಕ್ಷನ ಬಂಧನ; ಮುತಾಲಿಕ್ ಹೇಳೋದೇನು?
ಕಾರವಾರ, ಫೆಬ್ರವರಿ 6: ಭಟ್ಕಳ ತಾಲ್ಲೂಕಿನ ಮುರುಡೇಶ್ವರದ ನೇತ್ರಾಣಿ ಸ್ಕೂಬಾ ಡೈವಿಂಗ್ ಮಾಲೀಕ ಗಣೇಶ ಹರಿಕಾಂತ ಅವರ ಬಳಿ ಹಫ್ತಾ ಕೇಳಿ, ಕೊಡದಿದ್ದಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ಪೊಲೀಸರು ಶ್ರೀರಾಮ ಸೇನೆಯ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕರನ್ನು ಬಂಧಿಸಿದ್ದಾರೆ.
'ಜ.2ರಂದು ಮುರುಡೇಶ್ವರದ ಸಮುದ್ರ ತೀರದಲ್ಲಿರುವುದನ್ನು ಗಮನಿಸಿದ ಆರೋಪಿಯು ನೇರವಾಗಿ ಬಂದು ಅವಾಚ್ಯ ಶಬ್ದದಿಂದ ಬೈಯ್ದು ನಿಂದಿಸಿದ್ದ. ಸ್ಕೂಬಾ ಡೈವಿಂಗ್ ಹಾಗೂ ಉತ್ತರ ಕನ್ನಡ ಸಿರಿ ಉತ್ಪನ್ನಗಳ ಮಳಿಗೆಯನ್ನು ನಡೆಸಬೇಕಾದರೆ ತಿಂಗಳಿಗೆ ಹಫ್ತಾ ನೀಡಬೇಕೆಂದು ಬೆದರಿಕೆಯೊಡ್ಡಿದ್ದ'.
ಒಂದು ವೇಳೆ ಹಣ ನೀಡದಿದ್ದಲ್ಲಿ ಅಂಗಡಿ ಹಾಗೂ ಸ್ಕೂಬಾ ಡೈವಿಂಗ್ ಮುಚ್ಚಿಸುವುದಾಗಿ ಬೆದರಿಸಿ, ಜಿಲ್ಲಾಧಿಕಾರಿಗೆ, ಪೊಲೀಸ್ ಇಲಾಖೆಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿ ಮುಚ್ಚಿಸುತ್ತೇನೆ ಎಂದು ಹೇಳಿದ್ದ' ಎಂದು ಗಣೇಶ ಹರಿಕಾಂತ ದೂರಿದ್ದಾರೆ.

'ಸ್ಕೂಬಾ ಡೈವಿಂಗ್ಗೆ ತರಬೇತಿ ನೀಡುವ ತರಬೇತುದಾರರಿಗೂ ಜೀವ ಬೆದರಿಕೆ ಹಾಕಿದ ಕಾರಣ ಅವರು ಸಹ ಕೆಲಸಕ್ಕೆ ಬರುತ್ತಿಲ್ಲ. ಮುರುಡೇಶ್ವರಕ್ಕೆ ಬರುವ ಪ್ರವಾಸಿಗರಿಗೆ ಸ್ಕೂಬಾ ಡೈವಿಂಗ್ ಬಗ್ಗೆ ತಪ್ಪು ಮಾಹಿತಿ ನೀಡಿ ಪ್ರವಾಸಿಗರು ಸ್ಕೂಬಾ ಡೈವಿಂಗ್ಗೆ ಬಾರದಂತೆ ಮಾಡಿ ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ' ಎಂದು ಗಣೇಶ ಹರಿಕಾಂತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪಿಎಸ್ಐ ಸಿ.ಆರ್.ಪುಟ್ಟಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿ, ಕಾರವಾರದ ಕಾರಾಗೃಹಕ್ಕೆ ರವಾನಿಸಿದ್ದಾರೆ.
ಈ ಬಗ್ಗೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು, ""ಗಣೇಶ ಹರಿಕಾಂತ ಕೆಲವೊಂದು ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಜಯಂತ್ ನಾಯ್ಕ ದಾಖಲೆ ಕಲೆ ಹಾಕಿದ್ದರು. ಈ ಬಗ್ಗೆ ದೂರು ಸಹ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯಂತ್ ಅವರನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಗಣೇಶ್ ನೀಡಿದ್ದಕ್ಕೆ ಜಯಂತ್ ಅವರನ್ನು ಬಂಧಿಸಿದ್ದಾರೆ'' ಎಂದಿದ್ದಾರೆ.
""ವ್ಯವಸ್ಥಿತವಾಗಿ ಜಯಂತರನ್ನು ಹತ್ತಿಕ್ಕುವ ಕೆಲಸವಾಗಿದೆ. ಶೀಘ್ರದಲ್ಲೇ ಭಟ್ಕಳಕ್ಕೆ ಬರಲಿದ್ದು, ಗಣೇಶ ಹರಿಕಾಂತ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಅವರನ್ನು ಬಂಧಿಸುವಂತೆ ಒತ್ತಾಯಿಸಲಿದ್ದೇವೆ. ನಮ್ಮ ಬಳಿ ದಾಖಲೆ ಇದ್ದು, ಪೊಲೀಸರು ಗಣೇಶ ಅವರ ಬಳಿ ಹಣ ಪಡೆದು ಜಯಂತರನ್ನು ಬಂಧಿಸಿದ್ದಾರೆ'' ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications