ಸ್ವಾಮೀಜಿಗಳು ರಾಜಕೀಯದಲ್ಲಿ ಮೂಗು ತೂರಿಸುವುದೇಕೆ?; ಬಸವರಾಜ ಹೊರಟ್ಟಿ
ಕಾರವಾರ, ನವೆಂಬರ್ 30: ಸರ್ಕಾರ ವೀರಶೈವ ಲಿಂಗಾಯತ ನಿಗಮವನ್ನು ರಚಿಸಿದ್ದೇ ತಪ್ಪು. ಅದರಲ್ಲೂ ಮಠಾಧೀಶರು ಲಿಂಗಾಯತ ಮೀಸಲಾತಿ ವಿಚಾರದಲ್ಲಿ ಮೂಗು ತೂರಿಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಮಠಾದೀಶರು ತಮ್ಮ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ರಾಜಕಾರಣ ಮಾಡಲು ನಾವಿದ್ದೇವೆ. ಸ್ವಾಮೀಜಿಗಳು ಹದ್ದು ಮೀರಿ ನಡೆಯಬಾರದು. ಮಠಾಧೀಶರಿಗೆ ರಾಜಕೀಯ ಏಕೆ ಬೇಕು? ಅವರಿಗೆ ರಾಜಕಾರಣದಲ್ಲಿ ಅಷ್ಟು ಆಸಕ್ತಿಯಿದ್ದರೆ ನಮ್ಮ ಜೊತೆ ವಿಧಾನ ಸೌಧಕ್ಕೆ ಬರಲಿ" ಎಂದು ಸಿಡಿಮಿಡಿಗೊಂಡರು.
ಇದೇ ಸಂದರ್ಭ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, "ಬಿಜೆಪಿ ಆಂತರಿಕ ಕಲಹದಿಂದ ಸಿಎಂ ಬದಲಾವಣೆ ಮುನ್ನೆಲೆಗೆ ಬಂದಿದೆ. ಯಡಿಯೂರಪ್ಪ ಅವರನ್ನು ಸಮಾಧಾನ ಮಾಡಿಕೊಂಡು ಹೋದರೆ ಸರ್ಕಾರ ಉಳಿಯುತ್ತೆ. ಇಲ್ಲವೆಂದರೆ ಜೇನುಗೂಡಿಗೆ ಕಲ್ಲು ಹೊಡೆದ ಹಾಗೆ" ಎಂದು ಹೇಳಿದರು. "ಸರಕಾರ ರಚನೆ ಮಾಡಲು ತ್ಯಾಗ ಮಾಡಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಲೇಬೇಕು" ಎಂದೂ ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಶಿಕ್ಷಣ ವ್ಯವಸ್ಥೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸಂದರ್ಭದಲ್ಲಿ ಎಲ್ಲ ಕ್ಷೇತ್ರದ ಕಾರ್ಮಿಕರಿಗೆ ಸರ್ಕಾರ ಪ್ಯಾಕೇಜ್ ನೀಡಿದೆ. ಆದರೆ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಸರ್ಕಾರ ನೆರವು ನೀಡಿಲ್ಲ. ಶಿಕ್ಷಕರಿಗೆ ಕನಿಷ್ಠ 5 ಸಾವಿರ ನೀಡುವ ಸೌಜನ್ಯವನ್ನೂ ಸರ್ಕಾರ ತೋರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಸಾಕಷ್ಟು ಬಾರಿ ಶಿಕ್ಷಣದ ವಿಚಾರದಲ್ಲಿ ಸಲಹೆ ನೀಡಿದ್ದೇನೆ. ಆದರೆ ಸರ್ಕಾರ ಅನುಭವಸ್ಥರ ಸಲಹೆಗಳನ್ನು ತೆಗೆದುಕೊಳ್ಳುವುದಿಲ್ಲ. ಕೇವಲ ಆರೇ ದಿನ ಸಮಯ ಕೊಡಿ. ಇಡೀ ಶಿಕ್ಷಣ ವ್ಯವಸ್ಥೆಯನ್ನು ಸರ್ಜರಿ ಮಾಡುತ್ತೇನೆ ಎಂದರು. ಆನ್ ಲೈನ್ ತರಗತಿಗಳ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಹೇಳಿಕೆಗಳು ಗೊಂದಲವಾಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದರಲ್ಲಿ ತಪ್ಪೇನಿದೆ? ಶುಲ್ಕದ ಮೊತ್ತದಿಂದಲೇ ನಡೆಯುವ ಹಲವು ಶಾಲೆಗಳಿವೆ. ಕಾರಿನಲ್ಲಿ ಮಕ್ಕಳನ್ನು ಕರೆದುಕೊಂಡು ಬರುವ ಮಂದಿಯಿಂದ ಶುಲ್ಕ ಪಡೆದರೆ ತಪ್ಪೇನಿದೆ ಎಂದು ಪ್ರಶ್ನಿಸಿದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications