ಚಿತ್ರದುರ್ಗದಿಂದ ಹಾರಿ ಅರಬ್ಬಿ ಸಮುದ್ರದಲ್ಲಿ ಇಳಿದ ತಪಸ್ಸ್: ಕಮಾಂಡ್ & ಕಂಟ್ರೋಲ್ ಸಾಮರ್ಥ್ಯ
ಕಾರವಾರ, ಜೂನ್ 19: ತಪಸ್ಸ್-201 ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್) ನಿಂದ ಕಾರವಾರ ನೌಕಾನೆಲೆಯಿಂದ 148 ಕಿ.ಮೀ ದೂರದಲ್ಲಿದ್ದ ಐಎನ್ಎಸ್ ಸುಭದ್ರದಲ್ಲಿ ಸುರಕ್ಷಿತವಾಗಿ ಇಳಿಯುವ ಮೂಲಕ ಹೊಸ ಮೈಲುಗಲ್ಲು ಸಾಧಿಸಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್ಡಿಒ) ಮತ್ತು ಭಾರತೀಯ ನೌಕಾಪಡೆಯು ಏರಿಯಲ್ ವೆಹಿಕಲ್ನ(ಯುಎವಿ) ಕಮಾಂಡ್ ಮತ್ತು ಕಂಟ್ರೋಲ್ ಸಾಮರ್ಥ್ಯಗಳ ಪ್ರಾಯೋಗಿಕ ಪರೀಕ್ಷಾರ್ಥ ನಡೆಸಿದ ಈ ಪ್ರಯೋಗದಲ್ಲಿ ಯಶಸ್ವಿಯಾಗಿದೆ.

ಏರಿಯಲ್ ವೆಹಿಕಲ್ನ ಸಾಮರ್ಥ್ಯ ಪರೀಕ್ಷೆಗಾಗಿ 285 ಕಿ.ಮೀ. ದೂರದಲ್ಲಿರುವ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್)ನಿಂದ ಹಾರಾಟಕ್ಕೆ ಚಾಲನೆ ನೀಡಿತ್ತು. ಈ ಏರಿಯಲ್ ವೆಹಿಕಲ್ನ ನಿಯಂತ್ರಣಕ್ಕಾಗಿ ಐಎನ್ಎಸ್ ಸುಭದ್ರಾದಲ್ಲಿ ಒಂದು ಗ್ರೌಂಡ್ ಕಂಟ್ರೋಲ್ ಸ್ಟೇಷನ್ (ಜಿಸಿಎಸ್) ಮತ್ತು ಎರಡು ಶಿಪ್ ಡೇಟಾ ಟರ್ಮಿನಲ್ (ಎಸ್ಡಿಟಿ) ಸ್ಥಾಪಿಸಲಾಗಿತ್ತು.
20,000 ಅಡಿ ಎತ್ತರದಲ್ಲಿ ಹಾರಾಡಿದ ತಪಸ್-201 ಚಿತ್ರದುರ್ಗದಿಂದ 3.30 ಗಂಟೆಗಳ ತಡೆರಹಿತ ಹಾರಾಟ ನಡೆಸಿ ಕಾರವಾರದ ಅರಬ್ಬಿ ಸಮುದ್ರದಲ್ಲಿದ್ದ ಐಎನ್ಎಸ್ ಸುಭದ್ರಾ ಇಳಿದಾಣದ ಮೇಲೆ ಸುರಕ್ಷಿತವಾಗಿ ಇಳಿದಿದೆ. ಪ್ರಾಯೋಗಿಕ ಪರೀಕ್ಷೆಯ ಬಳಿಕ ಮತ್ತೆ ಚಿತ್ರದುರ್ಗದ ಎಟಿಆರ್ಗೆ ಸುರಕ್ಷಿತವಾಗಿ ತಲುಪಿದೆ.

ಮಧ್ಯಮ ಎತ್ತರದ ಈ ತಪಸ್- 201ನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಶ್ಮೆಂಟ್ (ಎಡಿಇ) ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ. ಈ ವೆಹಿಕಲ್, 24ರಿಂದ 30 ಗಂಟೆಗಳಷ್ಟು ಹಾರಾಟ ನಡೆಸುವ ಮೂಲಕ 3 ಸಶಸ್ತ್ರ ಪಡೆಗಳಿಗೆ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ ಪಾತ್ರಗಳನ್ನು ನಿರ್ವಹಿಸಲು ಅಭಿವೃದ್ಧಿಪಡಿಸಲಾಗಿದೆ.
ಪ್ರಿಡೇಟರ್ ಡ್ರೋನ್ಗಳ ಭಾರತೀಯ ಆವೃತ್ತಿ ಎಂದು ಕರೆಯಲ್ಪಡುವ ಈ ತಪಸ್, ಮಧ್ಯಮ ಶ್ರೇಣಿಯ ಎಲೆಕ್ಟ್ರೋ ಆಪ್ಟಿಕ್, ಲಾಂಗ್ ರೇಂಜ್ ಎಲೆಕ್ಟ್ರೋ ಆಪ್ಟಿಕ್, ಸಿಂಥೆಟಿಕ್ ಅಪರ್ಚರ್ ರಾಡಾರ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್, ಸಂವಹನ ಬುದ್ಧಿವಂತಿಕೆ ಮತ್ತು ದಿನವಿಡೀ ಕಾರ್ಯಕ್ಷಮತೆಯ ದಿನನಿತ್ಯದ ಪೇಲೋಡ್ಗಳಂತಹ ವಿಭಿನ್ನ ಸಂಯೋಜನೆಯ ಪೇಲೋಡ್ಗಳನ್ನು ಸಾಗಿಸಲು ಸಮರ್ಥವಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications