ಚಿತ್ರದುರ್ಗದಿಂದ ಹಾರಿ ಅರಬ್ಬಿ ಸಮುದ್ರದಲ್ಲಿ ಇಳಿದ ತಪಸ್ಸ್: ಕಮಾಂಡ್ & ಕಂಟ್ರೋಲ್ ಸಾಮರ್ಥ್ಯ
ಕಾರವಾರ, ಜೂನ್ 19: ತಪಸ್ಸ್-201 ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್) ನಿಂದ ಕಾರವಾರ ನೌಕಾನೆಲೆಯಿಂದ 148 ಕಿ.ಮೀ ದೂರದಲ್ಲಿದ್ದ ಐಎನ್ಎಸ್ ಸುಭದ್ರದಲ್ಲಿ ಸುರಕ್ಷಿತವಾಗಿ ಇಳಿಯುವ ಮೂಲಕ ಹೊಸ ಮೈಲುಗಲ್ಲು ಸಾಧಿಸಿದೆ.
ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್ಡಿಒ) ಮತ್ತು ಭಾರತೀಯ ನೌಕಾಪಡೆಯು ಏರಿಯಲ್ ವೆಹಿಕಲ್ನ(ಯುಎವಿ) ಕಮಾಂಡ್ ಮತ್ತು ಕಂಟ್ರೋಲ್ ಸಾಮರ್ಥ್ಯಗಳ ಪ್ರಾಯೋಗಿಕ ಪರೀಕ್ಷಾರ್ಥ ನಡೆಸಿದ ಈ ಪ್ರಯೋಗದಲ್ಲಿ ಯಶಸ್ವಿಯಾಗಿದೆ.

ಏರಿಯಲ್ ವೆಹಿಕಲ್ನ ಸಾಮರ್ಥ್ಯ ಪರೀಕ್ಷೆಗಾಗಿ 285 ಕಿ.ಮೀ. ದೂರದಲ್ಲಿರುವ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್)ನಿಂದ ಹಾರಾಟಕ್ಕೆ ಚಾಲನೆ ನೀಡಿತ್ತು. ಈ ಏರಿಯಲ್ ವೆಹಿಕಲ್ನ ನಿಯಂತ್ರಣಕ್ಕಾಗಿ ಐಎನ್ಎಸ್ ಸುಭದ್ರಾದಲ್ಲಿ ಒಂದು ಗ್ರೌಂಡ್ ಕಂಟ್ರೋಲ್ ಸ್ಟೇಷನ್ (ಜಿಸಿಎಸ್) ಮತ್ತು ಎರಡು ಶಿಪ್ ಡೇಟಾ ಟರ್ಮಿನಲ್ (ಎಸ್ಡಿಟಿ) ಸ್ಥಾಪಿಸಲಾಗಿತ್ತು.
20,000 ಅಡಿ ಎತ್ತರದಲ್ಲಿ ಹಾರಾಡಿದ ತಪಸ್-201 ಚಿತ್ರದುರ್ಗದಿಂದ 3.30 ಗಂಟೆಗಳ ತಡೆರಹಿತ ಹಾರಾಟ ನಡೆಸಿ ಕಾರವಾರದ ಅರಬ್ಬಿ ಸಮುದ್ರದಲ್ಲಿದ್ದ ಐಎನ್ಎಸ್ ಸುಭದ್ರಾ ಇಳಿದಾಣದ ಮೇಲೆ ಸುರಕ್ಷಿತವಾಗಿ ಇಳಿದಿದೆ. ಪ್ರಾಯೋಗಿಕ ಪರೀಕ್ಷೆಯ ಬಳಿಕ ಮತ್ತೆ ಚಿತ್ರದುರ್ಗದ ಎಟಿಆರ್ಗೆ ಸುರಕ್ಷಿತವಾಗಿ ತಲುಪಿದೆ.

ಮಧ್ಯಮ ಎತ್ತರದ ಈ ತಪಸ್- 201ನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಶ್ಮೆಂಟ್ (ಎಡಿಇ) ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ. ಈ ವೆಹಿಕಲ್, 24ರಿಂದ 30 ಗಂಟೆಗಳಷ್ಟು ಹಾರಾಟ ನಡೆಸುವ ಮೂಲಕ 3 ಸಶಸ್ತ್ರ ಪಡೆಗಳಿಗೆ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ ಪಾತ್ರಗಳನ್ನು ನಿರ್ವಹಿಸಲು ಅಭಿವೃದ್ಧಿಪಡಿಸಲಾಗಿದೆ.
ಪ್ರಿಡೇಟರ್ ಡ್ರೋನ್ಗಳ ಭಾರತೀಯ ಆವೃತ್ತಿ ಎಂದು ಕರೆಯಲ್ಪಡುವ ಈ ತಪಸ್, ಮಧ್ಯಮ ಶ್ರೇಣಿಯ ಎಲೆಕ್ಟ್ರೋ ಆಪ್ಟಿಕ್, ಲಾಂಗ್ ರೇಂಜ್ ಎಲೆಕ್ಟ್ರೋ ಆಪ್ಟಿಕ್, ಸಿಂಥೆಟಿಕ್ ಅಪರ್ಚರ್ ರಾಡಾರ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್, ಸಂವಹನ ಬುದ್ಧಿವಂತಿಕೆ ಮತ್ತು ದಿನವಿಡೀ ಕಾರ್ಯಕ್ಷಮತೆಯ ದಿನನಿತ್ಯದ ಪೇಲೋಡ್ಗಳಂತಹ ವಿಭಿನ್ನ ಸಂಯೋಜನೆಯ ಪೇಲೋಡ್ಗಳನ್ನು ಸಾಗಿಸಲು ಸಮರ್ಥವಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications