ತೌಕ್ತೆ ಅಬ್ಬರ; ಮುರುಡೇಶ್ವರದಲ್ಲಿ ಗೂಡಂಗಡಿಗಳು ನೀರುಪಾಲು
ಕಾರವಾರ, ಮೇ 16; ಸದಾ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಭಟ್ಕಳದ ಮುರುಡೇಶ್ವರದಲ್ಲಿ ಪ್ರವಾಸಿ ವಸ್ತುಗಳ ಮಾರಾಟ, ಮೀನುಗಾರಿಕೆಯೇ ಬದುಕಾಗಿತ್ತು. ಆದರೆ ಇತ್ತೀಚೆಗೆ ಘೋಷಿಸಿದ್ದ ಲಾಕ್ ಡೌನ್ನಿಂದಾಗಿ ಕೆಲಸವಿಲ್ಲದೇ ಕುಳಿತಿದ್ದವರಿಗೆ ಇದೀಗ ತೌಕ್ತೆ ಚಂಡಮಾರುತ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತೆ ಮಾಡಿದೆ.
ವಿಶ್ವಪ್ರಸಿದ್ಧ ಮುರುಡೇಶ್ವರ ಅತಿದೊಡ್ಡ ಶಿವನ ಮೂರ್ತಿಗೆ ಪ್ರಖ್ಯಾತಿ. ಇಲ್ಲಿ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ ಕೊರೊನಾ ಆರಂಭವಾದಾಗಿನಿಂದ ಲಾಕ್ ಡೌನ್, ಕರ್ಫ್ಯೂ ವಿಧಿಸುತ್ತಿದ್ದರಿಂದ ಪ್ರವಾಸಿಗರ ಸಂಖ್ಯೆ ಇಲ್ಲಿ ಇಳಿಮುಖವಾಗಿತ್ತು.
ಪ್ರವಾಸಿಗರನ್ನೇ ನಂಬಿಕೊಂಡು ಕಡಲತೀರದಲ್ಲಿ ಗೂಡಂಗಡಿಗಳನ್ನು ಇಟ್ಟುಕೊಂಡು ಫಾಸ್ಟ್ ಫುಡ್, ಫ್ಯಾನ್ಸಿ ಐಟಮ್, ಬಟ್ಟೆಗಳನ್ನು ಮಾರಾಟ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ವ್ಯಾಪಾರಿಗಳು ಕೂಡ ಪ್ರವಾಸಿಗರಿಲ್ಲದೇ ತಲೆ ಮೇಲೆ ಕೈಹೊತ್ತು ಕುಳಿತಿದ್ದರು.
ಕೆಲವು ಸಮಯ ಲಾಕ್ ಡೌನ್ ಸಡಿಲಗೊಳಿಸಿದ್ದ ಕಾರಣ ಒಂದಷ್ಟು ದಿನ ವ್ಯಾಪಾರ ನಡೆಸಿದ್ದವರಿಗೆ ಇತ್ತೀಚೆಗೆ ಮತ್ತೆ ಸರ್ಕಾರ ಲಾಕ್ ಡೌನ್ ಘೋಷಿಸಿ ಮನೆಯಲ್ಲಿ ಕೂರುವಂತೆ ಮಾಡಿತು. ಜೀವಕ್ಕಿಂತ ವ್ಯಾಪಾರ ದೊಡ್ಡದಲ್ಲ, ಜೀವವಿದ್ದರೆ ಇನ್ನು ಯಾವತ್ತಾದ್ರು ದುಡಿಯಬಹುದೆಂದು ತಮ್ಮಷ್ಟಕ್ಕೆ ವ್ಯಾಪಾರಿಗಳು ಮನೆಯಲ್ಲಿದ್ದರು.


ತೌಕ್ತೆ ಚಂಡಮಾರುತದಿಂದ ಆತಂಕ
ಮೇ 24ರ ತನಕ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದ್ದರಿಂದ ಹೊರಗಡೆ ಓಡಾಡುವಂತಿಲ್ಲ. ಇದರಿಂದಾಗಿ ವ್ಯಾಪಾರಿಗಳು ಅಂಗಡಿಗಳಲ್ಲಿದ್ದ ವಸ್ತುಗಳನ್ನೆಲ್ಲ ಪ್ಯಾಕ್ ಮಾಡಿ ಅಂಗಡಿಗಳೊಳಗೆ ಇಟ್ಟು, ಬೀಗ ಹಾಕಿ ಮನೆಯಲ್ಲಿದ್ದರು. ಆದರೆ ತೌಕ್ತೆ ಚಂಡಮಾರುತ ವ್ಯಾಪಾರಿಗಳಿಗೆ ಮತ್ತಷ್ಟು ಸಂಕಷ್ಟ ತಂದಿದೆ.

ಅಲೆಗಳ ಹೊಡೆತಕ್ಕೆ ಸಮುದ್ರಕ್ಕೆ
ಮುರುಡೇಶ್ವರದ ಸಮುದ್ರದ ದಡದಲ್ಲಿ ನಿಲ್ಲಿಸಿದ್ದ ಗೂಡಂಗಡಿಗಳು ಅಲೆಗಳ ಹೊಡೆತಕ್ಕೆ ಸಮುದ್ರ ಸೇರಿದ್ದು, ಅದರಲ್ಲಿದ್ದ ಲಕ್ಷಗಟ್ಟಲೆ ಸಾಮಗ್ರಿಗಳು ಸಮುದ್ರ ಪಾಲಾಗಿವೆ. ರಂಜಾನ್ ಹಬ್ಬವಿದೆ, ಜನ ಹೆಚ್ಚು ಬರ್ತಾರೆ ಎಂದು ತಿಂಗಳ ಹಿಂದೆ ಸಾಮಗ್ರಿಗಳನ್ನೆಲ್ಲ ಖರೀದಿಸಿಟ್ಟಿದ್ದರು.

ವಸ್ತುಗಳೆಲ್ಲ ನೀರು ಪಾಲು
ವ್ಯಾಪಾರಿಗಳು ಲಾಕ್ ಡೌನ್ ಸಮಯದಲ್ಲಿ ಹೊರಗಡೆ ಹೋದರೆ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆಯಬಹುದು ಎಂದು ಎಲ್ಲೂ ಹೋಗದೆ ಮನೆಯಲ್ಲಿದ್ದರು, ರಾತ್ರೋರಾತ್ರಿ ಅಂಗಡಿಗಳೆಲ್ಲ ನೀರು ಪಾಲಾಗಿವೆ. ಸಂಗ್ರಹ ಮಾಡಿಟ್ಟ ವಸ್ತುಗಳು ಸಮುದ್ರದ ಪಾಲಾಗಿವೆ.
Recommended Video

ದಡದಲ್ಲಿಡುವ ಕಾರ್ಯ
ಅಂಗಡಿಗಳೆಲ್ಲ ನೀರು ಪಾಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಂಗಾಲಾದ ವ್ಯಾಪಾರಿಗಳು ಸಮುದ್ರ ತೀರಗಳತ್ತ ಧಾವಿಸಿದ್ದು, ಸಮುದ್ರ ಪಾಲಾದ ಅಂಗಡಿಗಳನ್ನು ಎತ್ತಿ ಮತ್ತೆ ದಡದಲ್ಲಿಡುವ ಕಾರ್ಯ ಮಾಡುತ್ತಿದ್ದಾರೆ. ಇನ್ನು ಕೆಲವರು ಅಂಗಡಿಗಳಲ್ಲಿದ್ದ ವಸ್ತುಗಳನ್ನೆಲ್ಲ ತಮ್ಮ ಮನೆಗಳತ್ತ ಸಾಗಿಸುವ ಕಾರ್ಯಕ್ಕಿಳಿದಿದ್ದು, ಚಂಡಮಾರುತ ಮತ್ತಷ್ಟು ನಷ್ಟ ತಂದೊಡ್ಡಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications