ಕುಗ್ರಾಮದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ, ಗ್ರಾಮಸ್ಥರಲ್ಲಿ ಸಂತಸ
ಕಾರವಾರ, ಜನವರಿ 05: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೇದಿನಿ ಎಂಬ ಕುಗ್ರಾಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೇರಿದಂತೆ ಜಿಲ್ಲಾಡಳಿತವೇ ವಾಸ್ತವ್ಯ ಹೂಡಿದ್ದು, ಗ್ರಾಮಸ್ಥರಲ್ಲಿ ಸಂತಸದ ಜೊತೆಗೆ ಭರವಸೆ ಮೂಡಿದೆ.
ಆ ಗ್ರಾಮದ ಜನರು ಇಷ್ಟು ವರ್ಷಗಳ ಕಾಲ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದರು. ಹೀಗಾಗಿ ಕುಗ್ರಾಮವೆಂದೇ ಕರೆಯಿಸಿಕೊಳ್ಳುತ್ತಿದ್ದ ಈ ಗ್ರಾಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಹೋಗುವುದೂ ಅಪರೂಪದಲ್ಲಿ ಅಪರೂಪವಾಗಿತ್ತು.
ಗ್ರಾಮಸ್ಥರೇ ಹಲವು ಬಾರಿ ಮೂಲ ಸೌಕರ್ಯ ಒದಗಿಸುವಂತೆ ನೂರಾರು ಕಿ.ಮೀ. ದೂರದ ತಾಲೂಕು ಅಥವಾ ಜಿಲ್ಲಾ ಕೇಂದ್ರಕ್ಕೆ ತೆರಳಿ ಮನವಿ ಮಾಡಿದರೂ ಸ್ಪಂದನೆ ಬಾರದ ಕಾರಣ ಇತ್ತೀಚಿನ ವರ್ಷಗಳಲ್ಲಿ ಮನವಿ ಮಾಡುವುದನ್ನೂ ಬಿಟ್ಟಿದ್ದರು. ಆದರೆ, ಶನಿವಾರ ಇಡೀ ಜಿಲ್ಲಾಡಳಿತದ ಅಧಿಕಾರಿಗಳೇ ಗ್ರಾಮಸ್ಥರ ಕುಂದು-ಕೊರತೆ ಹಾಗೂ ಅಹವಾಲು ಸ್ವೀಕರಿಸಲು ಕುಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಮೊಗದಲ್ಲಿ ಭರವಸೆಯ ನಗು ತರಿಸಿದರು.

ಸಫಾರಿ ವಾಹನ ಬಿಟ್ಟು ಬೇರೆ ವಾಹನ ಹೋಗುವುದಿಲ್ಲ
ಇದು ಕಂಡುಬಂದಿದ್ದು ಕುಮಟಾ ತಾಲೂಕಿನಿಂದ ಸುಮಾರು 45 ಕಿ.ಮೀ. ದೂರ ಸಾಗಿದರೆ ಗುಡ್ಡಕ್ಕೆ ಹೋಗಲು ಮಣ್ಣಿನ ಕಾಲುದಾರಿಯೊಂದು ಕಾಣಿಸಲಿದೆ. ಈ ಕಾಲುದಾರಿ ಹಿಡಿದು ಎಂಟು ಕಿ.ಮೀ. ಸಾಗಿದರೆ ಸಿಗುವ ಗ್ರಾಮವೇ ಮೇದಿನಿ. ಈ ಎಂಟು ಕಿ.ಮೀ. ದೋಮಿ ಹತ್ತುವುದು ಅಷ್ಟೇನೂ ಸುಲಭದ ಮಾತಲ್ಲ.
ಈ ಪ್ರದೇಶದಲ್ಲಿ ಸಫಾರಿ ವಾಹನಗಳನ್ನು ಬಿಟ್ಟರೆ ಬೇರಾವ ವಾಹನಗಳೂ ಇಲ್ಲಿ ಜನರನ್ನು ಕೊಂಡೊಯ್ಯಲಾರದು. ಇಂಥ ಪರಿಸ್ಥಿತಿಯಲ್ಲಿ ಜೀವಿಸುತ್ತಿದ್ದ ಮೇದಿನಿ ಗ್ರಾಮದ ಗ್ರಾಮಸ್ಥರ ಅಹವಾಲು ಸ್ವೀಕರಿಸಲು ಯೋಜನೆ ರೂಪಿಸಿದ್ದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ.

ವಾಸ್ತವ್ಯದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ
ವಾರ್ತಾ ಇಲಾಖೆಯ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಗ್ರಾಮದಲ್ಲಿ ಒಂದು ರಾತ್ರಿ ವಾಸ್ತವ್ಯವಿದ್ದು, ಗ್ರಾಮಸ್ಥರ ಕುಂದು- ಕೊರತೆಗಳನ್ನು ಆಲಿಸಿದರು.
ಜಿಲ್ಲಾಧಿಕಾರಿಗೆ ಡೋಲು, ಕುಣಿತದ ಸ್ವಾಗತ:
ಮೇದಿನಿ ಗ್ರಾಮವು ಸಮುದ್ರ ಮಟ್ಟದಿಂದ ಸುಮಾರು 2,000 ಅಡಿ ಎತ್ತರದಲ್ಲಿದೆ. ಸುತ್ತಲೂ ದಟ್ಟ ಕಾಡು. ಹೀಗಾಗಿ ಸೂರ್ಯ ನೆತ್ತಿಯ ಮೇಲೆ ಬಂದಾಗಲೇ ಗ್ರಾಮದಲ್ಲಿ ಬೆಳಕು ಬೀಳುವುದು. ಇಲ್ಲಿ ಚಳಿ ಹೆಚ್ಚಾಗಿರುತ್ತದೆ. ಸುಮಾರು 60 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು, ಜಿಲ್ಲಾಧಿಕಾರಿ ಬರುತ್ತಾರೆಂಬ ಸುದ್ದಿ ತಿಳಿದು ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ಶಾಲೆಯಲ್ಲಿಯೇ ನಿದ್ರಿಸಿದ ಅಧಿಕಾರಿಗಳು
ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಶನಿವಾರ ಸಂಜೆ ಹೊತ್ತಿಗೆ ಗ್ರಾಮಕ್ಕೆ ಬಂದರು. ಗ್ರಾಮದ ಪ್ರವೇಶ ದ್ವಾರದಲ್ಲೇ ಅವರನ್ನು ತಡೆದ ಗ್ರಾಮಸ್ಥರು, ಆರತಿ ಬೆಳಗಿದರು. ಡೋಲು ಕುಣಿತದ ಮೂಲಕ ಅವರನ್ನು ಗ್ರಾಮದ ಒಳಗೆ ಬರಮಾಡಿಕೊಳ್ಳಲಾಯಿತು.
ರಾತ್ರಿಯ ಹೊತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಾಂಪ್ರದಾಯಿಕ ಡಮಾಮಿ ನೃತ್ಯ, ಗೊಂಬೆಯಾಟಗಳನ್ನು ಹಮ್ಮಿಕೊಳ್ಳಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಮೊದಲು ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಅಧಿಕಾರಿಗಳ ಎದುರು ತಮ್ಮ ಅಹವಾಲುಗಳನ್ನಿಟ್ಟರು.
ನಂತರದಲ್ಲಿ ರಾತ್ರಿ ನಡುಗುವ ಚಳಿಯಲ್ಲೂ ಗ್ರಾಮಸ್ಥರೊಂದಿಗೆ ಅಧಿಕಾರಿಗಳು ಚರ್ಚೆ ನಡೆಸಿದರು. ಗ್ರಾಮದ ಶಾಲೆಯಲ್ಲೇ ನಿದ್ರಿಸಿ, ಮುಂಜಾನೆ ಗ್ರಾಮದಿಂದ ಮತ್ತೆ ನಾಲ್ಕು ಕಿ.ಮೀ. ದೂರದಲ್ಲಿರುವ ಕೋಟೆ ವೀಕ್ಷಿಸಿ ಭಾನುವಾರ ಬೆಳಿಗ್ಗೆ ಕಾರವಾರಕ್ಕೆ ವಾಪಸಾದರು.

ಸಣ್ಣಕ್ಕಿ ವಿಶೇಷ ಪರಿಮಳ ಹೊಂದಿದೆ
ಹಿಂದುಳಿದ ಹಾಗೂ ಭೌಗೋಳಿಕವಾಗಿ ಅತಿ ಎತ್ತರದ ಪ್ರದೇಶದಲ್ಲಿರುವ ಮೇದಿನಿಯಲ್ಲಿ ಬೆಳೆಯುವ ವಿಶೇಷ ಪರಿಮಳದ ಸಣ್ಣಕ್ಕಿ ವಿಶೇಷವಾಗಿದೆ. ಯಾವುದೇ ಮಿಶ್ರ ತಳಿಯಲ್ಲದ ತನ್ನ ಅಪ್ಪಟ ಸಹಜತೆಯಿಂದಾಗಿಯೇ ಮೇದಿನಿ ಸಣ್ಣಕ್ಕಿ ವಿಶೇಷ ಪರಿಮಳ ಹೊಂದಿದೆ. ಮೇದಿನಿ ಸಣ್ಣಕ್ಕಿಯ ಪಾಯಸ, ಕೇಸರಿಬಾತ್ ಗೆ ತನ್ನದೇ ವಿಶಿಷ್ಟ ರುಚಿ, ಪರಿಮಳ ಇರುತ್ತದೆ. ವಿಶೇಷ ಅಡುಗೆ ಸಂದರ್ಭದಲ್ಲಿ ಅನ್ನ ಮಾಡುವಾಗ ಒಂದು ಮುಷ್ಠಿ ಮೇದಿನಿ ಸಣ್ಣಕ್ಕಿಯನ್ನು ಬೆರೆಸಿದರೆ ಎಲ್ಲ ಅನ್ನಕ್ಕೆ ವಿಶೇಷ ಪರಿಮಳ ಬರುತ್ತದೆ. ಇದು ಮೇದಿನಿ ಸಣ್ಣಕ್ಕಿ ವಿಶೇಷತೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications