Get Updates
Get notified of breaking news, exclusive insights, and must-see stories!

ಬೀಡಿ ಎಲೆ ಸಾಗಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿ: ಲಕ್ಷಾಂತರ ರೂ. ನಷ್ಟ

ಕಾರವಾರ, ಫೆಬ್ರವರಿ 1: ಬೀಡಿ ಎಲೆ ಸಾಗಿಸುತ್ತಿದ್ದ ಲಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಘಟನೆ ಅಂಕೋಲಾ ತಾಲೂಕಿನ ಕಂಚಿನ ಬಾಗಿಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.

ಸೋಮವಾರ ಸಂಜೆ ವೇಳೆಗೆ ಗುಜರಾತ್ ನಿಂದ ಮಂಗಳೂರು ಕಡೆ ತೆರಳುತ್ತಿದ್ದ ಲಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಲಾರಿಯಲ್ಲಿ ಬೀಡಿ ಎಲೆ ತೆಗೆದುಕೊಂಡು ಹೋಗುತ್ತಿದ್ದು, ತಕ್ಷಣ ಎಲೆಗಳಿಗೂ ಬೆಂಕಿ ಹರಡಿದ ಪರಿಣಾಮ ಕ್ಷಣಾರ್ಧದಲ್ಲಿಯೇ ಬೆಂಕಿ ಲಾರಿಗೆ ಹರಡಿತ್ತು.

Karwar: The Lorry Carrying The Beedi Leaf Was Burned By Fire

ಇನ್ನು ಹೆದ್ದಾರಿಯಲ್ಲಿಯೇ ಲಾರಿ ಹತ್ತಿ ಉರಿದಿದ್ದು, ಬೆಂಕಿ ತಗುಲಿದ ತಕ್ಷಣ ಲಾರಿಯಲ್ಲಿದ್ದ ಚಾಲಕ ಕೆಳಗೆ ಇಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಸುಮಾರು ಒಂದು ಘಂಟೆಗಳ ಕಾಲ ಲಾರಿಗೆ ಬೆಂಕಿ ಹತ್ತಿ ಉರಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

Karwar: The Lorry Carrying The Beedi Leaf Was Burned By Fire

ಲಾರಿ ಬೆಂಕಿ ಆಹುತಿಗೀಡಾದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ ನಂತರ, ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recommended Video

      Union Budget 2021 : ಆರೋಗ್ಯ ಕೇಂದ್ರದಲ್ಲಿ ಸಾಕಷ್ಟು ಬದಲಾವಣೆ! | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+