ರೆಸಾರ್ಟ್ ರಾಜಕೀಯ ನಾಡಿನ ಸಂಸ್ಕೃತಿ ಎಂದ ಸಚಿವ ಹೆಬ್ಬಾರ್
ಕಾರವಾರ, ನವೆಂಬರ್ 1: ರೆಸಾರ್ಟ್ ರಾಜಕೀಯ ಎನ್ನುವುದು ಕಾಂಗ್ರೆಸ್, ಬಿಜೆಪಿಯ ಸಂಸ್ಕೃತಿಯಾಗಿ ಉಳಿದಿಲ್ಲ. ಈಗ ಅದು ನಾಡಿನ ಸಂಸ್ಕೃತಿಯೇ ಆಗಿದೆ ಎಂದು ಕಾರ್ಮಿಕ ಹಾಗೂ ಸಕ್ಕರೆ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಹತಾಶೆಯ ಸ್ಥಿತಿಗೆ ಅನುಗುಣವಾಗಿ ಬಿಜೆಪಿ ತನ್ನ ಸದಸ್ಯರನ್ನು ತನ್ನ ಬಳಿ ಇಟ್ಟುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ರೆಸಾರ್ಟ್ ನಲ್ಲಿ ಇಟ್ಟುಕೊಂಡಿದ್ದೇವೆ. ಹಾಗಂತ ಸೋತ ರಾಜಕಾರಣ ಹಿಂದೆಯೂ ಆಗಿದೆ, ಮುಂದೆಯೂ ಆಗಲಿದೆ ಎಂದಿದ್ದಾರೆ.
ಯಾವ ಪಕ್ಷದಲ್ಲಿ ರೆಸಾರ್ಟ್ ರಾಜಕಾರಣ ಆಗಿಲ್ಲ? ಈ ಹಿಂದೆ ನಾನೇ ಕಾಂಗ್ರೆಸ್ ನಲ್ಲಿದ್ದಾಗ, ಬಿ.ಎಸ್ ಯಡಿಯೂರಪ್ಪ ಅವರು ಪರಾಭವಗೊಂಡಾಗ, ಬಹುಮತ ಸಾಬೀತುಪಡಿಸಲು ಕಾಂಗ್ರೆಸ್ ನವರು ನಮ್ಮನ್ನೂ ಹೈದರಾಬಾದ್ ರೆಸಾರ್ಟ್ ನಲ್ಲಿಟ್ಟುಕೊಂಡಿದ್ದರು. ರೆಸಾರ್ಟ್ ರಾಜಕಾರಣ ಎನ್ನುವುದು ಕಾಂಗ್ರೆಸ್ ಸಂಸ್ಕೃತಿ, ಬಿಜೆಪಿ ಸಂಸ್ಕೃತಿಯಲ್ಲ. ಈಗ ಅದು ನಾಡಿನ ಸಂಸ್ಕೃತಿಯಾಗಿಬಿಟ್ಟಿದೆ ಎಂದು ಹೇಳಿದರು.

ಕಾರವಾರ ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಅಂಕೋಲಾ ಹಾಗೂ ಕಾರವಾರದ ನಗರಸಭೆ ಸದಸ್ಯರನ್ನು ಗೋವಾದ ಕಾನಕೋಣ ರೆಸಾರ್ಟ್ ನಲ್ಲಿ ಇಡಲಾಗಿದೆ. ನವೆಂಬರ್ ಒಂದರಂದು ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯುವ ಕಾರಣ ಈ ಕ್ರಮಕ್ಕೆ ಶಾಸಕಿ ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಚಿವ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications