ಕಾರವಾರ; ನಿಸರ್ಗ ರಂಗಕರ್ಮಿ, ಪತ್ರಕರ್ತ ಕೆ.ಆರ್.ಪ್ರಕಾಶ ನಿಧನ
ಕಾರವಾರ, ನವೆಂಬರ್ 19: ಜಿಲ್ಲೆಯ ಖ್ಯಾತ ರಂಗಕರ್ಮಿ, ಪತ್ರಕರ್ತ ಹಾಗೂ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಕೆ.ಆರ್.ಪ್ರಕಾಶ (50) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಯಲ್ಲಾಪುರ ತಾಲೂಕಿನ ಹೆಮ್ಮಾಡಿ ಬಳಿಯ ಕಾನಕೊಡ್ಲು ಮೂಲದ ಅವರು, ಓರ್ವ ತಮ್ಮ, ತಂದೆ- ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಮೂರು ದಶಕಗಳಿಗೂ ಅಧಿಕ ಕಾಲ ತಮ್ಮ ಕ್ರಿಯಾಶೀಲ ವ್ಯಕ್ತಿತ್ವದ ಮೂಲಕ ಜಿಲ್ಲೆಯ ನದಿ ದಡದಲ್ಲಿ, ಪ್ರಪಾತದಲ್ಲಿ, ಕೆರೆಯ ಅಂಚಿನಲ್ಲಿ, ಮರದ ನೆರಳಲ್ಲಿ, ಸಮುದ್ರ ತೀರದಲ್ಲಿ ನಾಟಕ ಪ್ರಯೋಗ ಮಾಡುವುದರ ಮೂಲಕ ಹೊಸತನದ ರಂಗಕರ್ಮಿ ಎನಿಸಿದ್ದರು. ಹಲವು ನಾಟಕ ಕೃತಿಗಳನ್ನು ಬರೆದಿದ್ದ ಅವರಿಗೆ, ಪತ್ರಿಕೋದ್ಯಮದಲ್ಲಿನ ಸೇವೆಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಕೂಡ ಸಂದಿತ್ತು. ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಸಂಯುಕ್ತ ಕರ್ನಾಟಕದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಕೆ.ಆರ್.ಪ್ರಕಾಶ ಪ್ರಸ್ತುತ ಕರ್ನಾಟಕ ನಾಟಕ ಅಕಾಡಮಿಯ ಸದಸ್ಯರಾಗಿದ್ದರು. ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಯ ಗೀಳು ಹತ್ತಿಸಿಕೊಂಡಿದ್ದ ಪ್ರಕಾಶ್ ಉತ್ತಮ ನಟರಾಗಿದ್ದರು. ಅವರದೇ ಆದ ವಿಶಿಷ್ಟ ಶೈಲಿಯಲ್ಲಿ ನಾಟಕಗಳನ್ನು ಕಟ್ಟುತ್ತಿದ್ದರು. ಮುಖ್ಯವಾಗಿ ಹಳ್ಳಿಗಳ ತಂಡಗಳ ಜೊತೆ ನಾಟಕವಾಡುತ್ತ ಶಿರಸಿಯ ಸುತ್ತಮುತ್ತಲಿನ ಹಳ್ಳಿಗಳಲ್ಲಿ ರಂಗಾಸಕ್ತಿ ಬೆಳೆಯಲು ಕಾರಣರಾಗಿದ್ದರು.
'ಪ್ರಕೃತಿ ರಂಗಭೂಮಿ'ಯಲ್ಲಿ ಹಲವಾರು ಸಾಹಸಗಳನ್ನು ಮಾಡಿದ್ದ ಇವರು ಪ್ರತಿ ವರ್ಷ ತಮ್ಮದೇ ಹೆಸರಿನಲ್ಲಿ ರಂಗ ಪ್ರಶಸ್ತಿಯನ್ನೂ ಕೊಡುತ್ತಿದ್ದರು. ರಂಗಭೂಮಿಯ ಅನೇಕ ಹಿರಿಯರು ಪ್ರಶಸ್ತಿ ಸ್ವೀಕರಿಸಿದ್ದರು. ಶಿರಸಿಯ 'ರಂಗಸಂಗ'ಕ್ಕಾಗಿಯೂ ಮಕ್ಕಳ ನಾಟಕಗಳನ್ನು ನಿರ್ದೇಶಿಸಿದ್ದರು. ಇನ್ನೂ ಹಲವು ವರ್ಷ ರಂಗಕಾಯಕ ಮಾಡಬಹುದಾಗಿದ್ದ ಪ್ರಕಾಶ್ ಅನಾರೋಗ್ಯದಿಂದ ಹಠಾತ್ ನಿರ್ಗಮಿಸಿದ್ದಾರೆ.
ಪ್ರಕಾಶರ ಸಾವಿಗೆ ಶಿವಾನಂದ ಕಳವೆ ಸೇರಿದಂತೆ ಅವರ ಹಲವಾರು ಒಡನಾಡಿಗಳು ಕಂಬನಿ ಮಿಡಿದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications