ದಟ್ಟ ಕಾಡಿನ ಮಧ್ಯೆ ಪುಟ್ಟ ಶಾಲೆ; ಮಕ್ಕಳಿಗೆ 14 ವರ್ಷಗಳಿಂದ ಪಾಠದ ಜೊತೆ ಪರಿಸರ ಕಾಳಜಿ
ಕಾರವಾರ, ಜೂನ್ 8 : ಅದು ದಟ್ಟ ಅರಣ್ಯದ ನಡುವೆ ಇರುವ ಪುಟ್ಟದಾದ ಸುಂದರ ಶಾಲೆ. ಶಾಲಾ ಆವರಣದಲ್ಲಿ ಹತ್ತಾರು ಬಗೆಯ ಹಣ್ಣಿನ ಹೂವಿನ ಗಿಡಗಳು ರಾರಾಜಿಸುತ್ತಿವೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ಆ ಶಾಲೆಯಲ್ಲಿ ವಿದ್ಯಾಭ್ಯಾಸದ ಮಾಡುವ ಮಕ್ಕಳಿಗೆ ಪಾಠದ ಜೊತೆಗೆ ಪರಿಸರ ಜ್ಞಾನ, ಪ್ರೇಮವನ್ನು ತುಂಬಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬಗೆಗಿನ ಕಾಳಜಿಯ ಬಗ್ಗೆ ಜಾಗೃತಿ ನೀಡುತ್ತಿದೆ. ಈ ಶಾಲೆಯಲ್ಲಿ ಮಕ್ಕಳಿಗೆ ಪಾಠದ ಜೊತೆಗೆ ಪರಿಸರ ಜ್ಞಾನವನ್ನೂ ಸಹ ನೀಡಲಾಗುತ್ತಿದೆ. ಇಡೀ ಶಾಲಾ ಆವರಣವೇ ತೋಟದ ರೀತಿಯಲ್ಲಿ ವಿವಿಧ ಬಗೆಯ ಗಿಡ-ಮರಗಳಿಂದ ತುಂಬಿದ್ದು, ಇವುಗಳ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಗಿದೆ.
ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಇದ್ದು ಒಟ್ಟು 18 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇನ್ನು ವಿಶೇಷ ಅಂದರೆ ಶಾಲೆಗೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗಿಡವನ್ನು ನೆಟ್ಟು ಪೋಷಣೆ ಮಾಡಬೇಕಾಗಿದೆ. ಶಾಲೆಯ ವ್ಯಾಪ್ತಿಯಲ್ಲಿರುವ ಒಂದೂವರೆ ಎಕರೆ ಪ್ರದೇಶದಲ್ಲಿ ಕಳೆದ 14 ವರ್ಷದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳು ನೆಟ್ಟ ಮಾವು, ಹಲಸು, ತೆಂಗಿನ ಮರಗಳು ಇಂದು ಫಲ ನೀಡುತ್ತಿದ್ದು ಶಾಲೆಯ ಅಂದವನ್ನು ಹೆಚ್ಚಿಸಿವೆ.

ತೋಟಗಾರಿಕೆ ಬೆಳೆಗೂ ಸೈ
ಇನ್ನು ಈ ಶಾಲೆಯಲ್ಲಿ ಜೇನುಸಾಕಾಣಿಕೆ ಕೂಡ ನಡೆಸಲಾಗುತ್ತದೆ. ಮಕ್ಕಳು ಯಾವುದೇ ಭಯವಿಲ್ಲದೆ ಜೇನು ಪೆಟ್ಟಿಗೆ ತೆಗೆದು ಹುಳುಗಳ ಕಾರ್ಯವೈಕರಿಯನ್ನು ಗಮನಿಸುತ್ತಾರೆ. ಮಾತ್ರವಲ್ಲದೆ ಶಾಲಾ ಆವರಣದಲ್ಲಿ ಗೆಡ್ಡೆ ಗೆಣಸು ಹಾಗೂ ತೋಟಗಾರಿಕಾ ಬೆಳೆಗಳನ್ನು ಸಹ ಬೆಳೆಯಲಾಗುತ್ತಿದ್ದು, ಮಕ್ಕಳೇ ಗಿಡವನ್ನು ನೆಟ್ಟು ಪೋಷಣೆ ಮಾಡುತ್ತಾರೆ. ಜೊತೆಗೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ತೋರಿಸಿಕೊಡುತ್ತಾರೆ ಎಂದು ಇಲ್ಲಿನ ಅತಿಥಿ ಶಿಕ್ಷಕರಾದ ನಿವಾಸರಾಯ ಗೌಡ ತಿಳಿಸಿದರು.

14 ವರ್ಷಗಳಿಂದಲೂ ಪರಿಸರ ಪಾಠ
ಇನ್ನು ಕಳೆದ 14 ವರ್ಷಗಳ ಹಿಂದೆ ಈ ಶಾಲೆಗೆ ಶಿಕ್ಷಕರಾಗಿ ಆಗಮಿಸಿದ್ದ ಲೀಲಾದರ್ ಮೊಗೇರ್ ಎನ್ನುವ ಶಿಕ್ಷಕರಿಂದ ಇದೆಲ್ಲವೂ ಸಾಧ್ಯವಾಗಿದೆ. ಮಕ್ಕಳಿಗೆ ಪಾಠದ ಜೊತೆಗೆ ಕೃಷಿ, ಗಿಡ ಮರಗಳನ್ನು ಬೆಳೆಸುವ ಬಗ್ಗೆ ಹಾಗೂ ಶಾಲೆಯಲ್ಲಿ ಮಕ್ಕಳಿಂದಲೇ ತೋಟ ನಿರ್ಮಿಸುವ ಕಾರ್ಯವನ್ನು ಮೊದಲು ಪ್ರಾರಂಭಿಸಿದ್ದರು. ಆದರೆ ಅವರು ವರ್ಗಾವಣೆಗೊಂಡ ನಂತರವೂ ಅವರು ಹೇಳಿಕೊಟ್ಟ ಪರಿಸರವನ್ನು ಇಲ್ಲಿಯವರೆಗೂ ಮಕ್ಕಳು, ಶಾಲಾ ಶಿಕ್ಷಕರು ಮತ್ತು ಊರಿನವರು ಚಾಚು ತಪ್ಪದೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಮಾದರಿ ಶಾಲೆ
ಶಾಲಾ ಮಕ್ಕಳೇ ಬೆಳೆದ ತರಕಾರಿಗಳನ್ನ ಬಿಸಿಯೂಟಕ್ಕೆ ಬಳಸಲಾಗುತ್ತದೆ. ಅಲ್ಲದೇ ಶಾಲಾ ಆವರಣದಲ್ಲಿ ಬೆಳೆದ ಹಣ್ಣುಗಳನ್ನ ಮಕ್ಕಳಿಗೆ ನೀಡಿ, ಉಳಿದದ್ದನ್ನು ಮಾರಾಟ ಮಾಡಿ ಬಂದ ಹಣವನ್ನು ಮಕ್ಕಳಿಗಾಗಿ, ಶಾಲೆಯ ಅಭಿವೃದ್ದಿಗಾಗಿ ಬಳಸಲಾಗುತ್ತಿದೆ. ಇನ್ನು ಈ ಶಾಲೆಗೆ ಹಸಿರು ಶಾಲೆ ಎಂಬ ರಾಜ್ಯ ಪ್ರಶಸ್ತಿಯೂ ಕೂಡ ದೊರೆತಿದ್ದು, ರಾಜ್ಯದ ಇತರೆ ಶಾಲೆಗಳಿಗೂ ಮಾದರಿಯಾಗಿ ನಿಂತಿದೆ.

ಖಾಯಂ ಶಿಕ್ಷಕರಿಲ್ಲ
ಲೀಲಾದರ್ ಮೊಗೇರ್ ವರ್ಗಾವಣೆಗೊಂಡು 3 ವರ್ಷಗಳಾಗಿವೆ. ಆದರೂ ಕೂಡ ಇದುವರೆಗೂ ಯಾವುದೇ ಖಾಯಂ ಶಿಕ್ಷಕರನ್ನು ನೇಮಿಸಿಲ್ಲ. ಓರ್ವ ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ್ದು, ಸದ್ಯ ಅವರಿಂದಲೇ ಶಾಲೆ ನಡೆಯುತ್ತಿದೆ. ಸರ್ಕಾರ ಕೂಡ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವುದರ ಜೊತೆಗೆ ಶಾಲೆಯನ್ನು ಅಭಿವೃದ್ದಿಪಡಿಸಲು ಇನ್ನಷ್ಟು ಸಹಕಾರ ನೀಡಬೇಕು ಎಂಬುದು ಎಸ್ಡಿಎಂಸಿ ಸದಸ್ಯರಾದ ಯೋಗೇಶ ಡೇರೇಕರ್ ಒತ್ತಾಯಿಸಿದ್ದಾರೆ.
ಒಟ್ಟಾರೆ ಶಾಲೆ ಎಂದಾಕ್ಷಣ ಶಿಕ್ಷಕರ ಪಾಠಕ್ಕೆ ಮಾತ್ರ ಸೀಮಿತವಾಗಿರುವ ಇಂದಿನ ದಿನದಲ್ಲಿ ಮಕ್ಕಳಿಗೆ ಕೃಷಿ ಹಾಗೂ ಪರಿಸರದ ಕುರಿತು ಪ್ರಾಯೋಗಿಕವಾಗಿಯೇ ಜ್ಞಾನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆ ಇಡೀ ರಾಜ್ಯಕ್ಕೇ ಮಾದರಿಯಾಗಿದೆ.
(ಒನ್ಇಂಡಿಯಾ ಸುದ್ದಿ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications