Get Updates
Get notified of breaking news, exclusive insights, and must-see stories!

ದಟ್ಟ ಕಾಡಿನ ಮಧ್ಯೆ ಪುಟ್ಟ ಶಾಲೆ; ಮಕ್ಕಳಿಗೆ 14 ವರ್ಷಗಳಿಂದ ಪಾಠದ ಜೊತೆ ಪರಿಸರ ಕಾಳಜಿ

ಕಾರವಾರ, ಜೂನ್ 8 : ಅದು ದಟ್ಟ ಅರಣ್ಯದ ನಡುವೆ ಇರುವ ಪುಟ್ಟದಾದ ಸುಂದರ ಶಾಲೆ. ಶಾಲಾ ಆವರಣದಲ್ಲಿ ಹತ್ತಾರು ಬಗೆಯ ಹಣ್ಣಿನ ಹೂವಿನ ಗಿಡಗಳು ರಾರಾಜಿಸುತ್ತಿವೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ಆ ಶಾಲೆಯಲ್ಲಿ ವಿದ್ಯಾಭ್ಯಾಸದ ಮಾಡುವ ಮಕ್ಕಳಿಗೆ ಪಾಠದ ಜೊತೆಗೆ ಪರಿಸರ ಜ್ಞಾನ, ಪ್ರೇಮವನ್ನು ತುಂಬಲಾಗುತ್ತಿದೆ.

ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬಗೆಗಿನ ಕಾಳಜಿಯ ಬಗ್ಗೆ ಜಾಗೃತಿ ನೀಡುತ್ತಿದೆ. ಈ ಶಾಲೆಯಲ್ಲಿ ಮಕ್ಕಳಿಗೆ ಪಾಠದ ಜೊತೆಗೆ ಪರಿಸರ ಜ್ಞಾನವನ್ನೂ ಸಹ ನೀಡಲಾಗುತ್ತಿದೆ. ಇಡೀ ಶಾಲಾ ಆವರಣವೇ ತೋಟದ ರೀತಿಯಲ್ಲಿ ವಿವಿಧ ಬಗೆಯ ಗಿಡ-ಮರಗಳಿಂದ ತುಂಬಿದ್ದು, ಇವುಗಳ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಗಿದೆ.

ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಇದ್ದು ಒಟ್ಟು 18 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇನ್ನು ವಿಶೇಷ ಅಂದರೆ ಶಾಲೆಗೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗಿಡವನ್ನು ನೆಟ್ಟು ಪೋಷಣೆ ಮಾಡಬೇಕಾಗಿದೆ. ಶಾಲೆಯ ವ್ಯಾಪ್ತಿಯಲ್ಲಿರುವ ಒಂದೂವರೆ ಎಕರೆ ಪ್ರದೇಶದಲ್ಲಿ ಕಳೆದ 14 ವರ್ಷದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳು ನೆಟ್ಟ ಮಾವು, ಹಲಸು, ತೆಂಗಿನ ಮರಗಳು ಇಂದು ಫಲ ನೀಡುತ್ತಿದ್ದು ಶಾಲೆಯ ಅಂದವನ್ನು ಹೆಚ್ಚಿಸಿವೆ.

ತೋಟಗಾರಿಕೆ ಬೆಳೆಗೂ ಸೈ

ತೋಟಗಾರಿಕೆ ಬೆಳೆಗೂ ಸೈ

ಇನ್ನು ಈ ಶಾಲೆಯಲ್ಲಿ ಜೇನುಸಾಕಾಣಿಕೆ ಕೂಡ ನಡೆಸಲಾಗುತ್ತದೆ. ಮಕ್ಕಳು ಯಾವುದೇ ಭಯವಿಲ್ಲದೆ ಜೇನು ಪೆಟ್ಟಿಗೆ ತೆಗೆದು ಹುಳುಗಳ ಕಾರ್ಯವೈಕರಿಯನ್ನು ಗಮನಿಸುತ್ತಾರೆ. ಮಾತ್ರವಲ್ಲದೆ ಶಾಲಾ ಆವರಣದಲ್ಲಿ ಗೆಡ್ಡೆ ಗೆಣಸು ಹಾಗೂ ತೋಟಗಾರಿಕಾ ಬೆಳೆಗಳನ್ನು ಸಹ ಬೆಳೆಯಲಾಗುತ್ತಿದ್ದು, ಮಕ್ಕಳೇ ಗಿಡವನ್ನು ನೆಟ್ಟು ಪೋಷಣೆ ಮಾಡುತ್ತಾರೆ. ಜೊತೆಗೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ತೋರಿಸಿಕೊಡುತ್ತಾರೆ ಎಂದು ಇಲ್ಲಿನ ಅತಿಥಿ ಶಿಕ್ಷಕರಾದ ನಿವಾಸರಾಯ ಗೌಡ ತಿಳಿಸಿದರು.

14 ವರ್ಷಗಳಿಂದಲೂ ಪರಿಸರ ಪಾಠ

14 ವರ್ಷಗಳಿಂದಲೂ ಪರಿಸರ ಪಾಠ

ಇನ್ನು ಕಳೆದ 14 ವರ್ಷಗಳ ಹಿಂದೆ ಈ ಶಾಲೆಗೆ ಶಿಕ್ಷಕರಾಗಿ ಆಗಮಿಸಿದ್ದ ಲೀಲಾದರ್ ಮೊಗೇರ್ ಎನ್ನುವ ಶಿಕ್ಷಕರಿಂದ ಇದೆಲ್ಲವೂ ಸಾಧ್ಯವಾಗಿದೆ. ಮಕ್ಕಳಿಗೆ ಪಾಠದ ಜೊತೆಗೆ ಕೃಷಿ, ಗಿಡ ಮರಗಳನ್ನು ಬೆಳೆಸುವ ಬಗ್ಗೆ ಹಾಗೂ ಶಾಲೆಯಲ್ಲಿ ಮಕ್ಕಳಿಂದಲೇ ತೋಟ ನಿರ್ಮಿಸುವ ಕಾರ್ಯವನ್ನು ಮೊದಲು ಪ್ರಾರಂಭಿಸಿದ್ದರು. ಆದರೆ ಅವರು ವರ್ಗಾವಣೆಗೊಂಡ ನಂತರವೂ ಅವರು ಹೇಳಿಕೊಟ್ಟ ಪರಿಸರವನ್ನು ಇಲ್ಲಿಯವರೆಗೂ ಮಕ್ಕಳು, ಶಾಲಾ ಶಿಕ್ಷಕರು ಮತ್ತು ಊರಿನವರು ಚಾಚು ತಪ್ಪದೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಮಾದರಿ ಶಾಲೆ

ಮಾದರಿ ಶಾಲೆ

ಶಾಲಾ ಮಕ್ಕಳೇ ಬೆಳೆದ ತರಕಾರಿಗಳನ್ನ ಬಿಸಿಯೂಟಕ್ಕೆ ಬಳಸಲಾಗುತ್ತದೆ. ಅಲ್ಲದೇ ಶಾಲಾ ಆವರಣದಲ್ಲಿ ಬೆಳೆದ ಹಣ್ಣುಗಳನ್ನ ಮಕ್ಕಳಿಗೆ ನೀಡಿ, ಉಳಿದದ್ದನ್ನು ಮಾರಾಟ ಮಾಡಿ ಬಂದ ಹಣವನ್ನು ಮಕ್ಕಳಿಗಾಗಿ, ಶಾಲೆಯ ಅಭಿವೃದ್ದಿಗಾಗಿ ಬಳಸಲಾಗುತ್ತಿದೆ. ಇನ್ನು ಈ ಶಾಲೆಗೆ ಹಸಿರು ಶಾಲೆ ಎಂಬ ರಾಜ್ಯ ಪ್ರಶಸ್ತಿಯೂ ಕೂಡ ದೊರೆತಿದ್ದು, ರಾಜ್ಯದ ಇತರೆ ಶಾಲೆಗಳಿಗೂ ಮಾದರಿಯಾಗಿ ನಿಂತಿದೆ.

ಖಾಯಂ ಶಿಕ್ಷಕರಿಲ್ಲ

ಖಾಯಂ ಶಿಕ್ಷಕರಿಲ್ಲ

ಲೀಲಾದರ್ ಮೊಗೇರ್ ವರ್ಗಾವಣೆಗೊಂಡು 3 ವರ್ಷಗಳಾಗಿವೆ. ಆದರೂ ಕೂಡ ಇದುವರೆಗೂ ಯಾವುದೇ ಖಾಯಂ ಶಿಕ್ಷಕರನ್ನು ನೇಮಿಸಿಲ್ಲ. ಓರ್ವ ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ್ದು, ಸದ್ಯ ಅವರಿಂದಲೇ ಶಾಲೆ ನಡೆಯುತ್ತಿದೆ. ಸರ್ಕಾರ ಕೂಡ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವುದರ ಜೊತೆಗೆ ಶಾಲೆಯನ್ನು ಅಭಿವೃದ್ದಿಪಡಿಸಲು ಇನ್ನಷ್ಟು ಸಹಕಾರ ನೀಡಬೇಕು ಎಂಬುದು ಎಸ್‌ಡಿಎಂಸಿ ಸದಸ್ಯರಾದ ಯೋಗೇಶ ಡೇರೇಕರ್ ಒತ್ತಾಯಿಸಿದ್ದಾರೆ.

ಒಟ್ಟಾರೆ ಶಾಲೆ ಎಂದಾಕ್ಷಣ ಶಿಕ್ಷಕರ ಪಾಠಕ್ಕೆ ಮಾತ್ರ ಸೀಮಿತವಾಗಿರುವ ಇಂದಿನ ದಿನದಲ್ಲಿ ಮಕ್ಕಳಿಗೆ ಕೃಷಿ ಹಾಗೂ ಪರಿಸರದ ಕುರಿತು ಪ್ರಾಯೋಗಿಕವಾಗಿಯೇ ಜ್ಞಾನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆ ಇಡೀ ರಾಜ್ಯಕ್ಕೇ ಮಾದರಿಯಾಗಿದೆ.

(ಒನ್ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+