ದಟ್ಟ ಕಾಡಿನ ಮಧ್ಯೆ ಪುಟ್ಟ ಶಾಲೆ; ಮಕ್ಕಳಿಗೆ 14 ವರ್ಷಗಳಿಂದ ಪಾಠದ ಜೊತೆ ಪರಿಸರ ಕಾಳಜಿ
ಕಾರವಾರ, ಜೂನ್ 8 : ಅದು ದಟ್ಟ ಅರಣ್ಯದ ನಡುವೆ ಇರುವ ಪುಟ್ಟದಾದ ಸುಂದರ ಶಾಲೆ. ಶಾಲಾ ಆವರಣದಲ್ಲಿ ಹತ್ತಾರು ಬಗೆಯ ಹಣ್ಣಿನ ಹೂವಿನ ಗಿಡಗಳು ರಾರಾಜಿಸುತ್ತಿವೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ಆ ಶಾಲೆಯಲ್ಲಿ ವಿದ್ಯಾಭ್ಯಾಸದ ಮಾಡುವ ಮಕ್ಕಳಿಗೆ ಪಾಠದ ಜೊತೆಗೆ ಪರಿಸರ ಜ್ಞಾನ, ಪ್ರೇಮವನ್ನು ತುಂಬಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬಗೆಗಿನ ಕಾಳಜಿಯ ಬಗ್ಗೆ ಜಾಗೃತಿ ನೀಡುತ್ತಿದೆ. ಈ ಶಾಲೆಯಲ್ಲಿ ಮಕ್ಕಳಿಗೆ ಪಾಠದ ಜೊತೆಗೆ ಪರಿಸರ ಜ್ಞಾನವನ್ನೂ ಸಹ ನೀಡಲಾಗುತ್ತಿದೆ. ಇಡೀ ಶಾಲಾ ಆವರಣವೇ ತೋಟದ ರೀತಿಯಲ್ಲಿ ವಿವಿಧ ಬಗೆಯ ಗಿಡ-ಮರಗಳಿಂದ ತುಂಬಿದ್ದು, ಇವುಗಳ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಗಿದೆ.
ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಇದ್ದು ಒಟ್ಟು 18 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇನ್ನು ವಿಶೇಷ ಅಂದರೆ ಶಾಲೆಗೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗಿಡವನ್ನು ನೆಟ್ಟು ಪೋಷಣೆ ಮಾಡಬೇಕಾಗಿದೆ. ಶಾಲೆಯ ವ್ಯಾಪ್ತಿಯಲ್ಲಿರುವ ಒಂದೂವರೆ ಎಕರೆ ಪ್ರದೇಶದಲ್ಲಿ ಕಳೆದ 14 ವರ್ಷದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳು ನೆಟ್ಟ ಮಾವು, ಹಲಸು, ತೆಂಗಿನ ಮರಗಳು ಇಂದು ಫಲ ನೀಡುತ್ತಿದ್ದು ಶಾಲೆಯ ಅಂದವನ್ನು ಹೆಚ್ಚಿಸಿವೆ.

ತೋಟಗಾರಿಕೆ ಬೆಳೆಗೂ ಸೈ
ಇನ್ನು ಈ ಶಾಲೆಯಲ್ಲಿ ಜೇನುಸಾಕಾಣಿಕೆ ಕೂಡ ನಡೆಸಲಾಗುತ್ತದೆ. ಮಕ್ಕಳು ಯಾವುದೇ ಭಯವಿಲ್ಲದೆ ಜೇನು ಪೆಟ್ಟಿಗೆ ತೆಗೆದು ಹುಳುಗಳ ಕಾರ್ಯವೈಕರಿಯನ್ನು ಗಮನಿಸುತ್ತಾರೆ. ಮಾತ್ರವಲ್ಲದೆ ಶಾಲಾ ಆವರಣದಲ್ಲಿ ಗೆಡ್ಡೆ ಗೆಣಸು ಹಾಗೂ ತೋಟಗಾರಿಕಾ ಬೆಳೆಗಳನ್ನು ಸಹ ಬೆಳೆಯಲಾಗುತ್ತಿದ್ದು, ಮಕ್ಕಳೇ ಗಿಡವನ್ನು ನೆಟ್ಟು ಪೋಷಣೆ ಮಾಡುತ್ತಾರೆ. ಜೊತೆಗೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ತೋರಿಸಿಕೊಡುತ್ತಾರೆ ಎಂದು ಇಲ್ಲಿನ ಅತಿಥಿ ಶಿಕ್ಷಕರಾದ ನಿವಾಸರಾಯ ಗೌಡ ತಿಳಿಸಿದರು.

14 ವರ್ಷಗಳಿಂದಲೂ ಪರಿಸರ ಪಾಠ
ಇನ್ನು ಕಳೆದ 14 ವರ್ಷಗಳ ಹಿಂದೆ ಈ ಶಾಲೆಗೆ ಶಿಕ್ಷಕರಾಗಿ ಆಗಮಿಸಿದ್ದ ಲೀಲಾದರ್ ಮೊಗೇರ್ ಎನ್ನುವ ಶಿಕ್ಷಕರಿಂದ ಇದೆಲ್ಲವೂ ಸಾಧ್ಯವಾಗಿದೆ. ಮಕ್ಕಳಿಗೆ ಪಾಠದ ಜೊತೆಗೆ ಕೃಷಿ, ಗಿಡ ಮರಗಳನ್ನು ಬೆಳೆಸುವ ಬಗ್ಗೆ ಹಾಗೂ ಶಾಲೆಯಲ್ಲಿ ಮಕ್ಕಳಿಂದಲೇ ತೋಟ ನಿರ್ಮಿಸುವ ಕಾರ್ಯವನ್ನು ಮೊದಲು ಪ್ರಾರಂಭಿಸಿದ್ದರು. ಆದರೆ ಅವರು ವರ್ಗಾವಣೆಗೊಂಡ ನಂತರವೂ ಅವರು ಹೇಳಿಕೊಟ್ಟ ಪರಿಸರವನ್ನು ಇಲ್ಲಿಯವರೆಗೂ ಮಕ್ಕಳು, ಶಾಲಾ ಶಿಕ್ಷಕರು ಮತ್ತು ಊರಿನವರು ಚಾಚು ತಪ್ಪದೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಮಾದರಿ ಶಾಲೆ
ಶಾಲಾ ಮಕ್ಕಳೇ ಬೆಳೆದ ತರಕಾರಿಗಳನ್ನ ಬಿಸಿಯೂಟಕ್ಕೆ ಬಳಸಲಾಗುತ್ತದೆ. ಅಲ್ಲದೇ ಶಾಲಾ ಆವರಣದಲ್ಲಿ ಬೆಳೆದ ಹಣ್ಣುಗಳನ್ನ ಮಕ್ಕಳಿಗೆ ನೀಡಿ, ಉಳಿದದ್ದನ್ನು ಮಾರಾಟ ಮಾಡಿ ಬಂದ ಹಣವನ್ನು ಮಕ್ಕಳಿಗಾಗಿ, ಶಾಲೆಯ ಅಭಿವೃದ್ದಿಗಾಗಿ ಬಳಸಲಾಗುತ್ತಿದೆ. ಇನ್ನು ಈ ಶಾಲೆಗೆ ಹಸಿರು ಶಾಲೆ ಎಂಬ ರಾಜ್ಯ ಪ್ರಶಸ್ತಿಯೂ ಕೂಡ ದೊರೆತಿದ್ದು, ರಾಜ್ಯದ ಇತರೆ ಶಾಲೆಗಳಿಗೂ ಮಾದರಿಯಾಗಿ ನಿಂತಿದೆ.

ಖಾಯಂ ಶಿಕ್ಷಕರಿಲ್ಲ
ಲೀಲಾದರ್ ಮೊಗೇರ್ ವರ್ಗಾವಣೆಗೊಂಡು 3 ವರ್ಷಗಳಾಗಿವೆ. ಆದರೂ ಕೂಡ ಇದುವರೆಗೂ ಯಾವುದೇ ಖಾಯಂ ಶಿಕ್ಷಕರನ್ನು ನೇಮಿಸಿಲ್ಲ. ಓರ್ವ ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ್ದು, ಸದ್ಯ ಅವರಿಂದಲೇ ಶಾಲೆ ನಡೆಯುತ್ತಿದೆ. ಸರ್ಕಾರ ಕೂಡ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವುದರ ಜೊತೆಗೆ ಶಾಲೆಯನ್ನು ಅಭಿವೃದ್ದಿಪಡಿಸಲು ಇನ್ನಷ್ಟು ಸಹಕಾರ ನೀಡಬೇಕು ಎಂಬುದು ಎಸ್ಡಿಎಂಸಿ ಸದಸ್ಯರಾದ ಯೋಗೇಶ ಡೇರೇಕರ್ ಒತ್ತಾಯಿಸಿದ್ದಾರೆ.
ಒಟ್ಟಾರೆ ಶಾಲೆ ಎಂದಾಕ್ಷಣ ಶಿಕ್ಷಕರ ಪಾಠಕ್ಕೆ ಮಾತ್ರ ಸೀಮಿತವಾಗಿರುವ ಇಂದಿನ ದಿನದಲ್ಲಿ ಮಕ್ಕಳಿಗೆ ಕೃಷಿ ಹಾಗೂ ಪರಿಸರದ ಕುರಿತು ಪ್ರಾಯೋಗಿಕವಾಗಿಯೇ ಜ್ಞಾನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆ ಇಡೀ ರಾಜ್ಯಕ್ಕೇ ಮಾದರಿಯಾಗಿದೆ.
(ಒನ್ಇಂಡಿಯಾ ಸುದ್ದಿ)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications