ಉತ್ತರ ಕನ್ನಡದಲ್ಲಿ ನಕಲಿ ಮತದಾರರು: 5,677 ಜನರಿಗೆ ನೋಟಿಸ್, ನಿಮ್ಮ ಮನೆಗೂ ಬಂದಿದ್ಯಾ ಚೆಕ್ ಮಾಡಿಕೊಳ್ಳಿ..!
ಕಾರವಾರ, ಡಿಸೆಂಬರ್ 06: ರಾಜ್ಯದಲ್ಲಿ ಲೋಕಸಭೆ ಚುಣಾವಣೆ ಸಮೀಪಿಸುತ್ತಿದ್ದಂತೆ ನಕಲಿ ಮತದಾರರ ಪತ್ತೆ ಮಾಡಲಾಗುತ್ತಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಸಾವಿರಾರು ನಕಲಿ ಮತದಾರರ ಚೀಟಿ ಇರುವುದು ಪತ್ತೆಯಾಗಿದೆ. ಇದೀಗ ಈ ನಕಲಿ ಮತದಾರರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನಕಲು ಮಾಡಿರುವ ಅಥವಾ ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ರಾಜ್ಯದ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪೀಡ್ ಪೋಸ್ಟ್ ಮೂಲಕ 40 ಲಕ್ಷ ಚುನಾವಣಾ ಫೋಟೋ ಗುರುತಿನ ಚೀಟಿಗಳನ್ನು (ಇಪಿಐಸಿ) ರವಾನಿಸುತ್ತಿದೆ.

ಇಪಿಐಸಿಗಳು ಮತ್ತು ನೋಟಿಸ್ಗಳ ಬುಕಿಂಗ್ ಮತ್ತು ವಿತರಣೆಗಾಗಿ ಅಂಚೆ ಇಲಾಖೆ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಡುವೆ ಈ ಹಿಂದೆ ಸಹಿ ಮಾಡಿದ ತಿಳುವಳಿಕಾ ಒಪ್ಪಂದವನ್ನು ಅನುಸರಿಸುತ್ತಿದೆ. ನಕಲಿ ಅಥವಾ ಎರಡು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಸಾಧ್ಯತೆ ಹೆಚ್ಚಾಗಿರುವವರ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 5,677 ಜನರನ್ನು ಚುನಾವಣಾ ಇಲಾಖೆ ಪತ್ತೆ ಮಾಡಿದೆ. ಇವರು ನೋಟಿಸ್ ಜಾರಿ ಮಾಡುವ ಪ್ರಕ್ರಿಯೇ ಆರಂಭಗೊಂಡಿದೆ.
ಜಿಲ್ಲೆಯಲ್ಲಿ ಆರು ವಿಧಾನ ಸಭಾ ಕ್ಷೇತ್ರಗಳಿದ್ದು ಇವುಗಳ ಪೈಕಿ ಕಾರವಾರದಲ್ಲಿ ಅತೀ ಹೆಚ್ಚು ನಕಲಿ ಅಥವಾ ಎರಡು ಕಡೆ ಹೆಸರು ನೋಂದಣಿ ಹೊಂದಿರುವವರು ಇದ್ದಾರೆ. ಕಾರವಾರ-ಅಂಕೋಲಾ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ 1325, ಕುಮಟಾದಲ್ಲಿ 832, ಭಟ್ಕಳ ಕ್ಷೇತ್ರದಲ್ಲಿ 1264, ಶಿರಸಿಯಲ್ಲಿ 992, ಯಲ್ಲಾಪುರದಲ್ಲಿ 510 ಹಾಗೂ ಹಳಿಯಾಳ ಕ್ಷೇತ್ರದಲ್ಲಿ 754 ಜನರನ್ನು ಚುನಾವಣಾ ಆಯೋಗವು ಪತ್ತೆ ಮಾಡಿದೆ.
ಜಿಲ್ಲೆಗೆ ಸಂಬಂಧಿಸಿದಂತೆ 5677 ನಕಲಿ ಮತಗಳು ನಿರ್ಣಾಯಕ ಪಾತ್ರ ವಹಿಸಬಹುದಾಗಿದೆ. ಒಬ್ಬನೇ ಮತದಾರ ಎರಡು ಕಡೆಗಳಲ್ಲಿ ಹೆಸರು ನೊಂದಾಯಿಸಿದವರ ಹೆಸರನ್ನು ಯಾವುದಾರರೂ ಒಂದು ಮತದಾರ ಪಟ್ಟಿಯಿಂದ ತೆಗೆದು ಹಾಕಲು ವ್ಯವಸ್ಥೆ ಮಾಡಲಾಗುತ್ತಿದೆ. ಚುನಾವಣಾ ಆಯೋಗವು ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮಾಹಿತಿಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ನಕಲಿ ಮತದಾರನ್ನು ಪತ್ತೆ ಮಾಡಿದೆ.
2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಈ ನಕಲಿಗಳು ಎರಡು ಕಡೆಗಳಲ್ಲಿ ಮತ ಚಲಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಹೀಗೆ ನಕಲು ಮಾಡಿದ ಹೆಸರುಗಳನ್ನು ಆಯೋಗ ಮತದಾರ ಪಟ್ಟಿಯಿಂದಲೇ ತೆಗೆದು ಹಾಕಲಿದೆ.
ಮತದಾರರ ಪಟ್ಟಿಯಲ್ಲಿ ಎರಡು ಕಡೆಗಳಲ್ಲಿ ಹೆಸರು ಹೊಂದರಿರುವುದ ಕಾನೂನಿಗೆ ಬಾಹಿರವಾಗಿದೆ. ಆದರೆ ಈವರೆಗೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಕಟ್ಟುಕಟ್ಟಿನ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ನಕಲಿ ಮತದಾರರನ್ನು ಪತ್ತೆ ಕಾರ್ಯ ನಡೆಸಿದೆ.
ಈ ಬಗ್ಗೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ), ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದು, 'ಒಬ್ಬ ವ್ಯಕ್ತಿ ಒಂದಕ್ಕಿಂದ ಹೆಚ್ಚು ಗುರುತಿನ ಚೀಟಿ, ಅಥವಾ ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬಂದಿವೆ. ರಾಜ್ಯದಾದ್ಯಂತ ಮತದಾರರ ಯಾವುದೇ ರೀತಿಯ ನಕಲು ತೆಗೆದುಹಾಕುವ ಕ್ರಮ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಹೆಸರುಗಳನ್ನು ಹೊಂದಿರುವ ಎಲ್ಲಾ ಮತದಾರರಿಗೆ ನೋಟಿಸ್ಗಳನ್ನು ನೀಡಿದ್ದೇವೆ' ಎಂದು ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications