ನೌಕಾನೆಲೆ ನೋಡಲು ಬಂದರು ಸಾವಿರಾರು ಜನರು
ಕಾರವಾರ, ಜುಲೈ 20: ಇಲ್ಲಿನ ಅರಗಾ ಸೀಬರ್ಡ್ ನೌಕಾನೆಲೆಯು ಸಾರ್ವಜನಿಕರ ವೀಕ್ಷಣೆಗಾಗಿ ಶನಿವಾರ ಮುಕ್ತವಾಗಿತ್ತು. ಸಹಸ್ರಾರು ಜನರು ಭಾರತೀಯ ನೌಕಾಪಡೆಯ ಯುದ್ಧ ನೌಕೆಗಳನ್ನು ಕಣ್ತುಂಬಿಕೊಂಡರು.
ಜುಲೈ 26ರ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನೌಕಾನೆಲೆ ಪ್ರವೇಶಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಸಾವಿರಾರು ಜನರು ಇಲ್ಲಿಗೆ ಭೇಟಿ ನೀಡಿದರು. ಏಕೈಕ ಯುದ್ಧ ವಿಮಾನ ವಾಹಕ ನೌಕೆ 'ಐಎನ್ ಎಸ್ ವಿಕ್ರಮಾದಿತ್ಯ' ಹಾಗೂ 'ಐಎನ್ಎಸ್ ಸುವರ್ಣ'ದ ಒಳಗೆ ಈ ವೇಳೆ ಜನರಿಗೆ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.
ವಿವಿಧ ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳೂ ನೌಕಾನೆಲೆಗೆ ಭೇಟಿ ನೀಡಿದ್ದರು. ವೀಕ್ಷಣೆಗೆ ಬಂದವರಿಗೆ ನೌಕಾನೆಲೆಯ ಅಧಿಕಾರಿಗಳು ಯುದ್ಧದ ಸಂದರ್ಭದಲ್ಲಿ ಈ ನೌಕೆ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ವಿವರಿಸಿದರು. ಅದರ ಸಾಮರ್ಥ್ಯ, ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ನೌಕಾಸೇನೆಯ ಪಾತ್ರಗಳ ಬಗ್ಗೆಯೂ ಮಾಹಿತಿ ನೀಡಿದರು.

'ವಿಕ್ರಮಾದಿತ್ಯ ನೌಕೆ ಕುರಿತು ಟಿ.ವಿ, ಪತ್ರಿಕೆಗಳಲ್ಲಿ ನೋಡಿದ್ದೆವು. ಇದೀಗ ನೇರವಾಗಿ ನೋಡಲು ಅವಕಾಶ ಕಲ್ಪಿಸಿಕೊಟ್ಟಿದ್ದು ಖುಷಿ ತಂದಿದೆ. ನೌಕಾಸೇನೆಯ ಕಾರ್ಯವೈಖರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದೆವು' ಎಂದು ನೌಕೆ ವೀಕ್ಷಿಸಿದ ಮಾನಸ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications