ಕರ್ನಾಟಕ ಕರಾವಳಿಯಲ್ಲಿ ಮೂರು ಸೇನಾ ಪೂರ್ವ ತರಬೇತಿ ಶಾಲೆ ಆರಂಭ
ಕಾರವಾರ, ಜೂ28: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆ ಪರ-ವಿರೋಧವಾಗಿ ದೇಶದಲ್ಲಿ ಚರ್ಚೆಗಳು ನಡೆಯುತ್ತಿವೆ. ದೇಶದ ರಕ್ಷಣಾ ಪಡೆಗಳು ಯೋಜನೆ ಅನ್ವಯ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಿವೆ.
ಅಗ್ನಿಫಥ್ ಯೋಜನೆ ವಿರೋಧಿಸಿ ದೇಶದ ವಿವಿಧೆ ರಾಜ್ಯಗಳಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಕರ್ನಾಟಕದ ಕರಾವಳಿ ಭಾಗದ ಯುವಕರು ಸೇನೆಗೆ ಸೇರಲು ಅನುಕೂಲವಾಗುವಂತೆ ತರಬೇತಿ ನೀಡಲು ಶಾಲೆ ಆರಂಭಿಸಲಾಗುತ್ತಿದೆ.
ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿ ನೀಡಲು ಶಾಲೆಗಳನ್ನು ಆರಂಭಿಸುತ್ತಿದೆ. ಈ ಶಾಲೆಗಳಲ್ಲಿ ಉಚಿತವಾಗಿ ಯುವಕರಿಗೆ ತರಬೇತಿ ನೀಡಲಾಗುತ್ತದೆ.

ಸ್ಥಳೀಯ ಸ್ವತಂತ್ರ ಹೋರಾಟಗಾರರ ಹೆಸರಿನಲ್ಲಿ ಶಾಲೆ
ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಅಗ್ನಿಪಥ್ ಯೋಜನೆ ಹಿನ್ನಲೆಯಲ್ಲಿ ಆಕಾಂಕ್ಷಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ಸಲುವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತರಬೇತಿ ಶಾಲೆ ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದೆ. ಈ ಸಂಬಂಧ ಈಗಾಗಲೇ ಆದೇಶವನ್ನು ಹೊರಡಿಸಲಾಗಿದೆ. ಇನ್ನೊಂದು ತಿಂಗಳಲ್ಲೇ ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕರಾವಳಿ ಜಿಲ್ಲೆಯ ಸ್ಥಳೀಯ ಸ್ವತಂತ್ರ ಹೋರಾಟಗಾರರ ಹೆಸರಿನಲ್ಲಿ ಶಾಲೆ ತೆರೆಯಲು ನಿರ್ಧಾರ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಬ್ರಿಟಿಷರ ವಿರುದ್ಧ ಹೋರಾಡಿದ ಹೆಂಜಾ ನಾಯ್ಕ, ಉಡುಪಿ ಜಿಲ್ಲೆಯ ಕೋಟಿ ಚನ್ನಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ವೀರ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ತರಬೇತಿ ಶಾಲೆ ಇನ್ನೊಂದು ತಿಂಗಳಲ್ಲಿ ಪ್ರಾರಂಭವಾಗಲಿದೆ. ಸದ್ಯ ಈ ಶಾಲೆ ಪ್ರಾರಂಭಿಸಲು ಸೂಕ್ತ ಸ್ಥಳವನ್ನು ಶೋಧಿಸಲಾಗುತಿದೆ.

ನಿರುದ್ಯೋಗಿ ಯುವಕರಿಗೆ ಹೆಚ್ಚು ಅನುಕೂಲ: ಸಚಿವರು
"ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇನೆ, ಇತರ ಸೇವೆಗಳಿಗೆ ಆಯ್ಕೆಯಾಗಲು ಪ್ರೋತ್ಸಾಹಿಸುವ ಸಲುವಾಗಿ ಈ ತರಬೇತಿ ಶಾಲೆಯನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ. ಭಾರತೀಯ ಸೇನೆ ಮತ್ತು ಇತರ ಯುನಿಫಾರ್ಮ್ ಸೇವೆಗಳಿಗೆ ಸೇರಬಯಸುವ ರಾಜ್ಯದ ಎಲ್ಲಾ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಭಾಗವಾಗಿದ್ದು ಇವರ ತರಬೇತಿಗೆ ತಗಲುವ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭರಿಸಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರದಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವಕರಿಗೆ ಹೆಚ್ಚು ಅನುಕೂಲವಾಗಲಿದೆ" ಎಂದು ಜಿಲ್ಲಾ ಉಸ್ತುವಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರಿನಿವಾಸ್ ಪೂಜಾರಿ ಹೇಳಿದ್ದಾರೆ.

ನಗರಸಭೆ ಉಪಾಧ್ಯಕ್ಷರ ಪ್ರತಿಕ್ರಿಯೆ
ಉತ್ತರ ಕನ್ನಡದಲ್ಲಿ ಸ್ಥಾಪನೆಯಾಗುವ ಶಾಲೆಗೆ ಸ್ವತಂತ್ರ ಹೋರಾಟಗಾರರ ಹೆಸರನ್ನು ಇಡುತ್ತಿದೆ. ಕಾರವಾರದ ಕೋಡಿಬಾಗ ಗ್ರಾಮದಲ್ಲಿ 1736ರಲ್ಲಿ ಜನಿಸಿದ ವೀರ ಯೋಧ ಹೆಂಜಾ ನಾಯ್ಕ ಹೆಸರನ್ನು ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸಲಾಗುತ್ತಿರುವ ಸೈನಿಕ ಪೂರ್ವ ತರಬೇತಿ ಶಾಲೆ ಇಡಲಾಗುತ್ತಿದೆ.
ಕತ್ತಿ ಕಾಳಗ, ಗನ್ ಗುರಿ, ಸಮರ ಕಲೆ, ಈಜಾಡುವ ಕಲೆ ಸೇರಿದಂತೆ ಯುದ್ಧ ನಿಪುಣರಾಗಿದ್ದ ಹೆಂಜಾ ನಾಯ್ಕ ಅವರಿಗೆ ಚಾಣಕ್ಯ ಪದವಿಯನ್ನು ಆ ಕಾಲದಲ್ಲಿಯೇ ನೀಡಲಾಗಿತ್ತು. ಆದರೆ, 1801ರಲ್ಲಿ ಬ್ರಿಟಿಷರು ಕೋಡಿಬಾಗ ಸದಾಶಿವಗಡದಲ್ಲಿ ಹೆಂಜಾ ನಾಯ್ಕರನ್ನು ಹೊಂಚುಹಾಕಿ ಕೊಂದಿದ್ದರು. ಇಂತಹ ಮಹನೀಯನ ಹೆಸರನ್ನು ಇದೀಗ ಸೈನಿಕ ಶಾಲೆಗೆ ಇಡಲು ಮುಂದಾಗಿರುವುದಕ್ಕೆ ಸ್ಥಳೀಯ ನಗರಸಭೆ ಉಪಾಧ್ಯಕ್ಷ ಹೆಂಜಾ ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ಅವಕಾಶ
ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇನೆ, ಇತರ ಸೇವೆಗಳಿಗೆ ಆಯ್ಕೆಯಾಗಲು ಪ್ರೋತ್ಸಾಹಿಸುವ ಸಲುವಾಗಿ ತರಬೇತಿ ಶಾಲೆಯನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ. ಭಾರತೀಯ ಸೇನೆ ಮತ್ತು ಇತರ ಯುನಿಫಾರ್ಮ ಸೇವೆಗಳಿಗೆ ಸೇರಬಯಸುವ ರಾಜ್ಯದ ಎಲ್ಲಾ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಭಾಗವಾಗಿದ್ದು, ಸದ್ಯ ಕರಾವಳಿ ಜಿಲ್ಲೆಯಲ್ಲಿ ನೌಕಾದಳದ ಕೇಂದ್ರಗಳಿವೆ, ಬಂದರು ಸೇರಿದಂತೆ ಸೈನಿಕರಿಗೆ ತರಬೇತಿಗೆ ಬೇಕಾದ ಎಲ್ಲಾ ವಾತಾವರಣಗಳಿವೆ. ಹಿಂದುಳಿದ ಜಲ್ಲೆಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಗೆ ಈ ಮೂಲಕವಾದರೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಯೋಜನೆಗಳಲ್ಲಿ ಅವಕಾಶ ಮಾಡಿಕೊಟ್ಟಿರುವುದು ಕರಾವಳಿಗರ ಮೆಚ್ಚುಗೆಗೆ ಪಾತ್ರವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications