ಯಲ್ಲಾಪುರದ ಸರ್ಕಾರಿ ಕಾಲೇಜಿನಲ್ಲಿ ಲ್ಯಾಬ್ ನಿರ್ಮಿಸಲಿದೆ ಟೊಯೋಟಾ
ಉತ್ತರ ಕನ್ನಡ, ಅಕ್ಟೋಬರ್ 25; ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲ್ಯಾಬ್ ಅಭಿವೃದ್ಧಿಪಡಿಸಲು ಮತ್ತು ನಿರ್ಮಿಸಲು 3.2 ಲಕ್ಷ ರೂ.ಗಳಿಗೂ ಹೆಚ್ಚು ಹೂಡಿಕೆಯನ್ನು ಟೊಯೋಟಾ ಮಾಡುತ್ತಿದೆ. ಈ ಟಿಕೆಎಂ ಸಿಎಸ್ಆರ್ ಕಾರ್ಯಕ್ರಮದಿಂದ 730ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.
ಕಾರ್ಮಿಕ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಲ್ಯಾಬ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು. ಟಿಕೆಎಂ ಹಿರಿಯ ಅಧಿಕಾರಿ ಕೆ. ವಿ. ರಾಜೇಂದ್ರ ಹೆಗ್ಡೆ, ಜನರಲ್ ಮ್ಯಾನೇಜರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಗುಣಮಟ್ಟದ ಶಿಕ್ಷಣ ಒದಗಿಸಲು ಸಹಕಾರ ನೀಡಲು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಯಲ್ಲಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಯೋಗಾಲಯ ಸೌಲಭ್ಯ ನಿರ್ಮಾಣ ಮಾಡುತ್ತಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜು ಗುಮಟ್ಟದ ಶಿಕ್ಷಣವನ್ನು ಒದಗಿಸಲು ಹೆಸರುವಾಸಿಯಾಗಿದೆ. ಆದರೆ ದಾಖಲಾತಿಗಳ ಹೆಚ್ಚಳ ಮೂಲಸೌಕರ್ಯಗಳ ಸವಾಲುಗಳಿಗೆ ಕಾರಣವಾಗಿದೆ, ಇದರಿಂದಾಗಿ ಕಾಲೇಜು ಲ್ಯಾಬ್ಗಳನ್ನು ತರಗತಿಗಳಿಗೆ ಸ್ಥಳಾಂತರಿಸಬೇಕಾಯಿತು, ಇದರಿಂದಾಗಿ ಬೋಧನಾ ಸ್ಥಳದ ಕೊರತೆ ಉಂಟಾಯಿತು.

ಟೊಯೋಟಾ ತನ್ನ ಸಿಎಸ್ಆರ್ ಕಾರ್ಯಕ್ರಮಗಳ ಭಾಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲ್ಯಾಬ್ ಕಟ್ಟಡವನ್ನು 3.2 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಸ್ವಯಂಪ್ರೇರಿತವಾಗಿ ಮುಂದೆ ಬಂದಿದೆ. ಹೊಸ ಲ್ಯಾಬ್ ಸೌಲಭ್ಯಗಳ ನಿರ್ಮಾಣವು ಏಪ್ರಿಲ್ 2022ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಲ್ಯಾಬ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿ ಮಾತನಾಡಿದ ಸಚಿವ ಶಿವರಾಂ ಹೆಬ್ಬಾರ್, "ಶಿಕ್ಷಣವು ಯಾವುದೇ ದೇಶದ ಪ್ರಗತಿಗೆ ಮೂಲ ಪ್ರಮೇಯವಾಗಿದೆ ಮತ್ತು ನಮ್ಮ ದೇಶದ ದೂರದ ಪ್ರದೇಶದಲ್ಲಿ ಉತ್ತಮ ಶಾಲಾ ಮೂಲಸೌಕರ್ಯವನ್ನು ಒದಗಿಸುವುದು ನಿಸ್ಸಂದೇಹವಾಗಿ ಉತ್ತಮ ಕಲಿಕೆ ಮತ್ತು ಉಜ್ವಲ ಭವಿಷ್ಯವನ್ನು ಪೋಷಿಸುತ್ತದೆ" ಎಂದರು.
"ಟೊಯೋಟಾದಂತಹ ಕಾರ್ಪೊರೇಟ್ ಸಂಸ್ಥೆಗಳು ಗ್ರಾಮೀಣ ಕರ್ನಾಟಕದಲ್ಲಿ ಗುಣಮಟ್ಟದ ಶಾಲಾ ಮೂಲಸೌಕರ್ಯಕ್ಕಾಗಿ ನಿರಂತರವಾಗಿ ಕೆಲಸ ಮಾಡುತ್ತಿವೆ ಎಂದು ಸಂತಸದ ವಿಚಾರವಾಗಿದೆ. ಕಾಲೇಜು ವಿದ್ಯಾರ್ಥಿಗಳು ಕಲಿಯಲು ಮತ್ತು ಬೆಳೆಯಲು ಉತ್ತಮ ಕಲಿಕೆ ಮತ್ತು ಶಿಕ್ಷಣವನ್ನು ಪೋಷಿಸಲು ಹೊಸ ಲ್ಯಾಬ್ ಸೌಲಭ್ಯವು ಸಹಾಯ ಮಾಡುತ್ತದೆ" ಎಂದು ಹೇಳಿದರು.

ಯೋಜನೆಯ ಬಗ್ಗೆ ಮಾತನಾಡಿದ ಟಿಕೆಎಂನ ಪ್ರಧಾನ ವ್ಯವಸ್ಥಾಪಕ ಕೆ. ವಿ. ರಾಜೇಂದ್ರ ಹೆಗ್ಡೆ, "ಗ್ರಾಮೀಣ ಶಿಕ್ಷಣದ ಅಭಿವೃದ್ಧಿಯು ಜನರ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಜವಾಬ್ದಾರಿಯುತ ಕಾರ್ಪೊರೇಟ್ ಆಗಿ, ದೇಶದ ಒಟ್ಟಾರೆ ಪ್ರಗತಿಗೆ ಸರಿಯಾದ ಮೂಲಸೌಕರ್ಯವನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕಾರ್ಯಸೂಚಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಶಾಲೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದೇವೆ" ಎಂದು ತಿಳಿಸಿದರು.
"ಭಾರತದ ದೂರದ ಹಳ್ಳಿಗಳಲ್ಲಿ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಪಡೆಯುವ ಗುರಿಯನ್ನು ಹೊಂದಿದ್ದೇವೆ, ಅದು ಅವರಿಗೆ ವೈವಿಧ್ಯಮಯ ಸಂಸ್ಕೃತಿ ಮತ್ತು ಜ್ಞಾನದ ಸರಣಿಗೆ ಅವಕಾಶ ನೀಡುತ್ತದೆ. ಹೊಸ ಲ್ಯಾಬ್ ಸೌಲಭ್ಯವು ಕಾಲೇಜು ವಿದ್ಯಾರ್ಥಿಗಳ ಉಳಿಸಿಕೊಳ್ಳುವಿಕೆಯನ್ನು ಸುಧಾರಿಸುವಾಗ ಉತ್ತಮ ಕಲಿಕೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ" ಎಂದರು.
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಹಲವು ವರ್ಷಗಳಲ್ಲಿ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಹಾಯ ಮಾಡುತ್ತಿದೆ. ಹಲವಾರು ಯೋಜನೆಗಳನ್ನು ಪ್ರಾರಂಭಿಸಿದೆ. ಒಟ್ಟು 11 ಶಾಲೆಗಳನ್ನು ನಿರ್ಮಿಸಲಾಗಿದೆ, ಜೊತೆಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ, ಅಂಗನವಾಡಿ ಅಭಿವೃದ್ಧಿ ಕಾರ್ಯಕ್ರಮ ಮುಂತಾದ ಉಪಕ್ರಮಗಳೊಂದಿಗೆ ಒಟ್ಟು 1,16,396 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ.
ಟೊಯೋಟಾ ಸಮುದಾಯದ ಸದಸ್ಯರ ಸಮಗ್ರ ಅಭಿವೃದ್ಧಿಗಾಗಿ ಹೆಚ್ಚು ಶ್ರೀಮಂತ ಮತ್ತು ಸುಸ್ಥಿರ ಸಿಎಸ್ಆರ್ ಯೋಜನೆಗಳನ್ನು ತರಲು ಬದ್ಧವಾಗಿದೆ, ಹೀಗಾಗಿ ಸಕಾರಾತ್ಮಕ ಸಾಮಾಜಿಕ ಅಭಿವೃದ್ಧಿಯ ಮೂಲ ಉದ್ದೇಶಕ್ಕೆ ಪರಿಣಾಮಕಾರಿಯಾಗಿ ಕೊಡುಗೆ ನೀಡುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications