ವಾಟೆಹೊಳೆ ಜಲಪಾತ ವೀಕ್ಷಣೆ ವೇಳೆ ದುರಂತ: ಇಬ್ಬರು ಯುವಕರು ಕಣ್ಮರೆ
ಉತ್ತರ ಕನ್ನಡ, ಫೆಬ್ರವರಿ 15: ಸಮುದ್ರ ತೀರಗಳಿಗೆ, ಜಲಪಾತಗಳ ಸಮೀಪ ತೆರಳಿದ ವೇಳೆ ಜಾಗ್ರತೆ ವಹಿಸಿ ಎಂದು ಎಷ್ಟೇ ಎಚ್ಚರಿಕೆ ನೀಡಿದರು ಸಹ ದುರಂತಗಳು ನಡೆಯುವುದು ಮಾತ್ರ ಕಮ್ಮಿಯಾಗುತ್ತಿಲ್ಲ. ಪ್ರವಾಸಕ್ಕೆಂದು ಬಂದವರು ಸಮುದ್ರಗಳಲ್ಲಿ, ಜಲಪಾತಗಳಲ್ಲಿ ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋಗುತ್ತಿರುವ ಅವಘಡಗಳು ಸಂಭವಿಸುತ್ತಲೇ ಇದೆ. ಇದೀಗ ಉತ್ತರ ಕನ್ನಡದ ಸಿದ್ಧಾಪುರದಲ್ಲಿಯೂ ಇಂತಹದ್ದೇ ಮತ್ತೊಂದು ದುರಂತ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತ ನೋಡಲು ಬಂದ ಇಬ್ಬರು ಯುವಕರು ಕಣ್ಮರೆಯಾಗಿದ್ದಾರೆ. ಅಕ್ಷಯ್ ಭಟ್ (21) ಹಾಗೂ ಸುಹಾಸ್ ಶೆಟ್ಟಿ (21) ನಾಪತ್ತೆಯಾದ ಯುವಕರು ಎಂದು ಗುರುತಿಸಲಾಗಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.

ಮೂಲತಃ ಶಿರಸಿಯವರೇ ಆದ ಅಕ್ಷಯ್ ಭಟ್ ಹಾಗೂ ಸುಹಾಸ್ ಶೆಟ್ಟಿ ಪ್ರೇಕ್ಷಣಿಯ ಸ್ಥಳವಾದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಸಮೀಪದ ವಾಟೆಹೊಳೆ ಜಲಪಾತ ವೀಕ್ಷಣೆಗೆಂದು ಬಂದಿದ್ದರು. ಅಕ್ಷಯ್ ಭಟ್ ಹಾಗೂ ಸುಹಾಸ್ ಶೆಟ್ಟಿ ಮಾತ್ರವಲ್ಲದೇ ಇನ್ನೂ ನಾಲ್ಕು ಜನ ಸ್ನೇಹಿತರು ಜೊತೆಯಾಗಿ ಈ ಪ್ರದೇಶದಲ್ಲಿ ಸಮಯ ಕಳೆಯಲು ಬಂದಿದ್ದರು. ಅಕ್ಷಯ್ ಭಟ್ ಹಾಗೂ ಸುಹಾಸ್ ಶೆಟ್ಟಿ ಸೇರಿದಂತೆ ಈ ಆರು ಮಂದಿ ಪದವಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ವಾಟೆಹೊಳೆ ಜಲಪಾತದಲ್ಲಿ ನೀರಿಗಿಳಿದು ಆಟವಾಡುವ ವೇಳೆ ಅಕ್ಷಯ್ ಭಟ್ ಹಾಗೂ ಸುಹಾಸ್ ಕಾಲು ಜಾರಿ ಇಬ್ಬರು ಬಿದ್ದಿದ್ದಾರೆ. ವಾಟೆಹೊಳೆ ಜಲಪಾತದ ಪ್ರಪಾತ ದೊಡ್ಡ ಮಟ್ಟದಲ್ಲಿದ್ದು, ನೋಡ ನೋಡುತ್ತಿದ್ದಂತೆ ಇಬ್ಬರೂ ಕೊಚ್ಚಿಹೋಗಿದ್ದಾರೆ. ಉಳಿದ ನಾಲ್ಕು ಮಂದಿ ಸ್ನೇಹಿತರ ಕಣ್ಣೆದುರೇ ಇಬ್ಬರು ಕಾಲು ಜಾರಿ ಬಿದ್ದು, ಕಣ್ಮರೆಯಾಗಿದ್ದಾರೆ. ಕೂಡಲೇ ಉಳಿದ ಯುವಕರು ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಕಣ್ಮರೆಯಾದ ಯುವಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications