ಹಾಲಕ್ಕಿ ಸಂಸ್ಕೃತಿ ಸಂವರ್ಧನೆಗೆ ತುಳಸಿ ಗುರುಕುಲ ಸ್ಥಾಪನೆ
ಕಾರವಾರ, ಫೆಬ್ರವರಿ 12: ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ಹಾಲಕ್ಕಿ ಸಂಸ್ಕೃತಿಯ ಸಂರಕ್ಷಣೆ ಮತ್ತು ಸಂವರ್ಧನೆಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಉದ್ದೇಶಿಸಿರುವ ಗುರುಕುಲಕ್ಕೆ ತುಳಸಿ ಗುರುಕುಲ ಎಂದು ನಾಮಕರಣ ಮಾಡಲಾಗಿದೆ.
ತುಳಸೀಕಟ್ಟೆ ಇಡೀ ಹಾಲಕ್ಕಿ ಸಂಸ್ಕೃತಿಯ ಜೀವಾಳವಾಗಿದ್ದು, ಭವಿಷ್ಯದಲ್ಲಿ ಈ ಗುರುಕುಲವನ್ನು ಹಾಲಕ್ಕಿ ಸಂಸ್ಕೃತಿಯ ಸಮಗ್ರ ಅಧ್ಯಯನ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಾಂಕೇತಿಕವಾಗಿ ತುಳಸಿ ಹೆಸರನ್ನೇ ಗುರುಕುಲಕ್ಕೆ ಇಡಲಾಗಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಹಾಲಕ್ಕಿ ಸಮಾಜದಲ್ಲಿ ತುಳಸಿಗೆ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಮಹತ್ವವಿದ್ದು, ಸಮಗ್ರ ಹಿಂದೂ ಸಂಸ್ಕೃತಿಯಲ್ಲೂ ತುಳಸಿಗೆ ವಿಶೇಷ ಸ್ಥಾನವಿದೆ. ಹಾಲಕ್ಕಿ ಸಮಾಜದ ಮಕ್ಕಳಲ್ಲಿ ತವರು ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವ ಜತೆಗೆ ಹಿಂದೂ ಸಂಸ್ಕೃತಿಯ ಒಳ್ಳೆಯ ಅಂಶಗಳನ್ನು ಹಾಗೂ ಉತ್ಕೃಷ್ಟ ಸಮಕಾಲೀನ ಶಿಕ್ಷಣವನ್ನೂ ನೀಡುವ ಉದ್ದೇಶದಿಂದ ಗುರುಕುಲ ಸ್ಥಾಪನೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಂಸ್ಕೃತಿ ಸಂಗಮದ ಪ್ರತೀಕವಾಗಿ, ಇಲ್ಲಿ ನೀಡುವ ಮೌಲಿಕ ಶಿಕ್ಷಣಕ್ಕೆ ಸಾಂಕೇತಿಕ ಎಂಬಂತೆ ತುಳಸಿ ಹೆಸರಿನಲ್ಲೇ ಗುರುಕುಲ ಆರಂಭಿಸಲಾಗುತ್ತಿದೆ ಎಂದು ಪ್ರಕಟಣೆ ವಿವರಿಸಿದೆ.
ಮುಂದಿನ ಶೈಕ್ಷಣಿಕ ವರ್ಷ ತುಳಸಿ ಗುರುಕುಲದಲ್ಲಿ ಆರನೇ ತರಗತಿ ಆರಂಭಿಸಲಾಗುತ್ತಿದ್ದು, ಐದನೇ ತರಗತಿ ಉತ್ತೀರ್ಣರಾದವರು ಹಾಗೂ ಅರ್ಧಕ್ಕೆ ಶಾಲೆಬಿಟ್ಟ, 12 ವರ್ಷ ತುಂಬಿದವರು ಪ್ರವೇಶ ಪಡೆಯಬಹುದಾಗಿದೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications