ಕೈಗಾದಲ್ಲಿ 5, 6ನೇ ಘಟಕ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ
ಉತ್ತರ ಕನ್ನಡ, ಸೆಪ್ಟೆಂಬರ್ 08 : ಕೇಂದ್ರ ಸರ್ಕಾರ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ಸ್ಥಾಪನೆಗೆ ಒಪ್ಪಿಗೆ ಕೊಟ್ಟಿದೆ. ಪರಿಸರವಾದಿಗಳು ಮತ್ತು ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೋ ಯೋಜನೆ ಅನುಮೋದನೆ ನೀಡಲಾಗಿದೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕೈಗಾ ಅಣು ವಿದ್ಯುತ್ ಸ್ಥಾವರ ಯೋಜನೆ ವಿಸ್ತರಣೆಗೆ ಒಪ್ಪಿಗೆ ಕೊಟ್ಟಿದೆ. 5 ಮತ್ತು 6ನೇ ಹೊಸ ಘಟಕಗಳ ಸ್ಥಾಪನೆಗೆ ಭಾರತೀಯ ಅಣು ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಬಿ. ಸಿ. ಪಾಠಕ್ ಸಚಿವಾಲಯಕ್ಕೆ ಮನವಿ ಮಾಡಿದ್ದರು.
ಪರಿಸರ ವಿಭಾಗದ ಹೆಚ್ಚುವರಿ ನಿರ್ದೇಶಕಿ ಡಾ. ಶ್ರುತಿ ರೈ ಭರದ್ವಾಜ್ ಸೆಪ್ಟೆಂಬರ್5ರಂದು ಬಿ. ಸಿ. ಪಾಠಕ್ಗೆ ಪತ್ರ ಬರೆದಿದ್ದಾರೆ. ಕೇಂದ್ರ ಹಣಕಾಸು ಸಲಹಾ ಸಮಿತಿ 17 ನಿರ್ದಿಷ್ಟ ಮತ್ತು 19 ಸಾಮಾನ್ಯ ಷರತ್ತುಗಳನ್ನು ವಿಧಿಸಿ ಯೋಜನೆಗೆ ಒಪ್ಪಿಗೆ ನೀಡಿದೆ.

ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ಉತ್ಪಾದನೆ ಮಾಡುವ ಒಟ್ಟು ವಿದ್ಯುತ್ನಲ್ಲಿ ಅರ್ಧದಷ್ಟನ್ನು ರಾಜ್ಯಕ್ಕೆ ನೀಡಬೇಕಾಗುತ್ತದೆ. ಆದರೆ, ಹೊಸ ಘಟಕದ ಸ್ಥಾಪನೆಗೆ ಪರಿಸರವಾದಿಗಳು ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.
ಈ ಯೋಜನೆಗಾಗಿ ಸುಮಾರು 8700 ಮರಗಳನ್ನು ಕಡಿಯಬೇಕಾಗುತ್ತದೆ. ಒಟ್ಟಾರೆ 120 ಹೆಕ್ಟೇರ್ ಪ್ರದೇಶದಲ್ಲಿ ಮರಗಳನ್ನು ಕಡಿಯಬೇಕಾಗಿದ್ದು, ಇದಕ್ಕೆ ಪ್ರತಿಯಾಗಿ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ 732 ಹೆಕ್ಟೇರ್ ಅರಣ್ಯವನ್ನು ಅಭಿವೃದ್ಧಿ ಮಾಡಬೇಕು ಎಂದು ಸಚಿವಾಲಯ ಹೇಳಿದೆ.
ನಿರ್ದಿಷ್ಟ ಷರತ್ತುಗಳು
* ಕಾಮಗಾರಿ ಆರಂಭಕ್ಕೂ ಮೊದಲು ಪರಮಾಣು ಶಕ್ತಿ ನಿಯಂತ್ರಣ ಮಂಡಳಿಯ ಅನುಮತಿ ಕಡ್ಡಾಯ
* ರೇಡಿಯೋ ಆಕ್ಟಿವ್ ಕಣಗಳ ಮಾಲಿನ್ಯ ಕುರಿತು ನಿರಂತರ ಪರಿಶೀಲನೆ
* ಘಟಕಗಳಿಂದ ಹೊರಬಿಡುವ ಗಾಳಿಯನ್ನು ನಿಯಂತ್ರಿಸಿ, ಸೂಚಿಸಿದ ಎತ್ತರಕ್ಕೆ ಬಿಡಬೇಕು
* ವಿಪತ್ತು ನಿರ್ವಹಣೆ, ತುರ್ತು ಸಂದರ್ಭಕ್ಕೆ ಸೂಕ್ತ ಯೋಜನೆ ರೂಪಿಸುವುದು
* ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ಕಡ್ಡಾಯ
* ಘಟಕದಿಂದ ಹೊರಬರುವ ರೇಡಿಯೋ ಆಕ್ಟಿವ್ ನೀರಿನ ಸೂಕ್ತ ವಿಲೇವಾರಿ
* ಘಟಕದಿಂದ 20 ಕಿ. ಮೀ. ವ್ಯಾಪ್ತಿಯ ಜನರ ನಿಯಮಿತ ಆರೋಗ್ಯ ತಪಾಸಣೆ
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications