ಉತ್ತರ ಕನ್ನಡ ಜಿಲ್ಲೆಗೆ ‘ಏಮ್ಸ್’ ಬೇಕು: ಪ್ರಧಾನಿಗೆ ಟ್ವೀಟ್ ಮಾಡಿದ ಡಾ. ಕಾಮತ್
ಕಾರವಾರ, ಆಗಸ್ಟ್ 15: "ನನ್ನನ್ನು ಕೇಳಿದರೆ ಉತ್ತರ ಕನ್ನಡ ಜಿಲ್ಲೆಗೆ ಒಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಕೊಡಿ ಎಂದು ವಿನಂತಿಸುತ್ತೇನೆ ಪ್ರಧಾನಿಗಳೇ.." ಎಂದು ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಪ್ರಧಾನಿಗಳಿಗೆ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇತ್ತೀಚೆಗೆ ಪ್ರಧಾನಿಗಳನ್ನು ಭೇಟಿಯಾದಾಗ ಹುಬ್ಬಳ್ಳಿ- ಧಾರವಾಡಕ್ಕೆ ಒಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಬೇಕು ಎಂದು ಕೇಳಿದ್ದು, 'ದಿ ಹಿಂದು' ಪತ್ರಿಕೆಯ ವೆಬ್ಸೈಟ್ನಲ್ಲಿ ವರದಿಯಾಗಿತ್ತು. ಆ ಸುದ್ದಿಯ ಲಿಂಕ್ ಶೇರ್ ಮಾಡುವ ಮೂಲಕ ಡಾ. ಕಾಮತ್ ಮರು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಪ್ರಧಾನಮಂತ್ರಿಗಳ ಮನ್ ಕೀ ಬಾತ್ನಲ್ಲಿ ಪಾಲ್ಗೊಂಡಿದ್ದ ಡಾ. ಕಾಮತ್ರವರ ಸೇವೆಯನ್ನು ಪ್ರಧಾನಿಗಳು ಮುಕ್ತಕಂಠದಿಂದ ಪ್ರಶಂಸಿಸಿದ ಹಿನ್ನೆಲೆಯಲ್ಲಿ ಡಾ.ಕಾಮತ್ರ ಮಾತುಗಳು ಗಮನ ಸೆಳೆದಿವೆ. ಇದಕ್ಕೆ ಜನರ ಆಗ್ರಹವೂ ಅಗತ್ಯವಾಗಿದೆ. "ಉತ್ತರ ಕನ್ನಡ ಜಿಲ್ಲೆಗೆ ಟ್ರಾಮಾ ಸೆಂಟರ್ ಬೇಕು, ಮೆಡಿಕಲ್ ಕಾಲೇಜು ಆಸ್ಪತ್ರೆ ಪರಿಪೂರ್ಣವಾಗಬೇಕು, ಇತ್ಯಾದಿ ಬೇಡಿಕೆಗಳು ಬಹಳ ವರ್ಷಗಳಿಂದ ಇವೆ. ಇತ್ತೀಚೆಗೆ ಈ ಕುರಿತು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಲ್ಲಿ ವಿನಂತಿಸಿದಾಗ, ಮಣಿಪಾಲ ಹತ್ತಿರವಾಗುತ್ತದೆ, ಟ್ರಾಮಾ ಸೆಂಟರ್ ಮಾಡಿದರೆ ಅವರು ಮಾಡಬಹುದು, ನಾನೂ ಒಂದು ಮಾತು ಹೇಳುತ್ತೇನೆ," ಅಂದಿದ್ದರು.

ಡಾ. ಕಾಮತ್ರು ಇತ್ತೀಚೆಗೆ ಪತ್ರಿಕೆಯೊಂದರೊಂದಿಗೆ ಮಾತನಾಡುತ್ತಾ, "ಸರ್ಕಾರಿ ಮೆಡಿಕಲ್ ಕಾಲೇಜು ಆದರೂ ಎಲ್ಲ ಸೌಲಭ್ಯ ಒದಗಿಸಿಕೊಡುವುದು ರಾಜ್ಯ ಸರ್ಕಾರದಿಂದ ಸಾಧ್ಯವಾಗುವುದಿಲ್ಲ. ಸಾಕಷ್ಟು ವೈದ್ಯರ ಲಭ್ಯತೆಯೂ ಇಲ್ಲ. ಖಾಸಗಿಯವರು ಆಸ್ಪತ್ರೆಗೆ ಹಣ ಹೂಡಿದರೆ ನಿರೀಕ್ಷಿಸಿದ ಲಾಭ ಬರದ ಕಾರಣ ಅವರು ಹಿಂದೇಟು ಹಾಕುತ್ತಾರೆ. ಆದ್ದರಿಂದ ಭಾರತ ಸರ್ಕಾರವೇ ಮನಸ್ಸು ಮಾಡಿದರೆ ಕೆಲಸ ಸುಲಭ," ಎಂದು ಹೇಳಿದ್ದರು.
"ಹೃದಯಾಘಾತದ ತುರ್ತು ಸಂದರ್ಭದಲ್ಲಿ ಎಂಜಿಯೋಗ್ರಾಂ ಮಾಡಿ ಸ್ಟಂಟ್ ಅಳವಡಿಸಿ ಜೀವ ಉಳಿಸಲು ಜಿಲ್ಲೆಯಲ್ಲಿ ವೈದ್ಯರಿಲ್ಲ, ಕ್ಯಾಥ್ ಲ್ಯಾಬ್ಗಳೂ ಇಲ್ಲ. ಆದ್ದರಿಂದ ತುರ್ತು ಒಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ, ಜಿಲ್ಲೆಯವರಾಗಿ ಜಿಲ್ಲೆಯ ಹೊರಗೆ ಸಾಕಷ್ಟು ಜನ ಹೃದಯ ಚಿಕಿತ್ಸೆಯ ತಜ್ಞರು ಇದ್ದಾರೆ. ನಾನೇ ಹಲವರನ್ನು ತರಬೇತಿಗೊಳಿಸಿ ಪದವಿ ಕೊಟ್ಟಿದ್ದೇನೆ. ಯಾರಾದರೂ ಬರುವಂತೆ ವಿನಂತಿಸಿಕೊಳ್ಳಿ, ಅವರೊಂದಿಗೆ ಸಹಕರಿಸಿ," ಎಂದಿದ್ದರು.
"ನಾನು ಸುಮ್ಮನೆ ಹೇಳುತ್ತಿಲ್ಲ, ನಮ್ಮ ಸಿಎಡಿ (ಕಾರ್ಡಿಯಾಕ್ ಎಟ್ ಡೋರ್ ಸ್ಟೆಪ್) ಮುಖಾಂತರ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಜನೌಷಧಿ ಕೇಂದ್ರಕ್ಕೆ ಮತ್ತು ಕೆಲವು ಖಾಸಗಿ ವೈದ್ಯರಿಗೆ, ಒಟ್ಟು 27ಕ್ಕೂ ಹೆಚ್ಚು ಇಸಿಜಿ ಉಪಕರಣಗಳನ್ನು ದಾನಿಗಳ ನೆರವಿನಿಂದ ಒದಗಿಸಿದೆ. ಇತ್ತೀಚೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ದೂರವಿರುವ ಹೊನ್ನಾವರ ತಾಲೂಕಿನ ಹಡಿನಬಾಳ, ಮಾವಿನಕುರ್ವಾ, ಗೇರಸೊಪ್ಪಾ ಪಂಚಾಯತಗಳಿಗೆ, ಕುಮಟಾದ ಮಿರ್ಜಾನ ಮತ್ತು ಹಿರೇಗುತ್ತಿಗಳಿಗೆ ಉಚಿತ ಇಸಿಜಿ ಉಪಕರಣ ನೀಡಿದ್ದೇವೆ."

"ಅಂಗನವಾಡಿ ಶಿಕ್ಷಕಿಯರಿಗೆ ಮಾತ್ರವಲ್ಲ, ಅಂಬುಲೆನ್ಸ್ ಚಾಲಕರಿಗೂ ಸಿಎಡಿ ತರಬೇತಿ ನೀಡಿದೆ. ಉತ್ತರ ಕನ್ನಡದವರಿಗಾಗಿ ಸಿಎಡಿ ಕೋವಿಡ್ ಸಮಯದಲ್ಲೂ ಸೇವೆ ನೀಡಿದೆ. ಇಷ್ಟಾದರೂ ತುರ್ತು ಸೇವೆ ದೊರೆಯದೆ ಹಲವು ಜೀವಗಳು ಮಾರ್ಗ ಮಧ್ಯೆಯಲ್ಲಿ ಹೊರಟು ಹೋಗುವುದನ್ನು ನೋಡಲಾಗುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆಗೆ ಬೇಗ ವೈದ್ಯಕೀಯ ಸೌಲಭ್ಯ ಸಿಗಲಿ ಎಂಬ ಕಾರಣಕ್ಕಾಗಿ ಈ ಮಾತು ಹೇಳಿದ್ದೇನೆ," ಎಂದಿದ್ದಾರೆ.
Recommended Video
ನೌಕಾನೆಲೆ, ವಾಣಿಜ್ಯ ಬಂದರು, ಅಣು ವಿದ್ಯುತ್ ಸ್ಥಾವರ, ಜಲವಿದ್ಯುತ್ ಯೋಜನೆಗಳಿಗಾಗಿ ಸಾಕಷ್ಟು ಆಸ್ತಿಪಾಸ್ತಿ ಕಳೆದುಕೊಂಡ ದೊಡ್ಡ ಸಮುದಾಯ ಇರುವುದರ ಜೊತೆಯಲ್ಲಿ ಅಡಿಕೆ, ಏಲಕ್ಕಿ, ಕಾಳು ಮೆಣಸು ಮೊದಲಾದ ಹಣದ ಬೆಳೆ ಬೆಳೆಯುವ, ಪ್ರವಾಸೋದ್ಯಮದ ಕೇಂದ್ರವಾಗುತ್ತಿರುವ ಉತ್ತರ ಕನ್ನಡಕ್ಕೆ ಒಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಭಾರತ ಸರ್ಕಾರ ನೀಡಿದರೆ ಜಿಲ್ಲೆ ಸಹಿತ ಸುತ್ತಮುತ್ತಲಿನ ಜಿಲ್ಲೆಗಳಿಗೂ ಅನುಕೂಲವಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications