ಅಮೆರಿಕದಲ್ಲಿ ಉದ್ಯೋಗದ ಆಮಿಷ; ಯುವತಿಗೆ 57.14 ಲಕ್ಷ ರೂ. ವಂಚನೆ
ಕಾರವಾರ, ಫೆಬ್ರವರಿ 12: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ 57.14 ಲಕ್ಷ ರೂ. ವಂಚನೆ ಮಾಡಲಾಗಿದೆ. ಹಣ ಕಳೆದುಕೊಂಡ ಹೊನ್ನಾವರ ತಾಲೂಕಿನ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಹೊನ್ನಾವರ ತಾಲೂಕಿನ ಗುಣವಂತೆಯ ನೇತ್ರಾವತಿ ಗೌಡ ಎಂಬ ಯುವತಿ ಹಣ ಕಳೆದುಕೊಂಡವರು. ಈ ಬಗ್ಗೆ ಕಾರವಾರ ಸಿಇಎನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಮೇಲ್ ಮೂಲಕ ಸಂಪರ್ಕಿಸಿದ್ದ ವ್ಯಕ್ತಿ ಅಮೆರಿಕಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದ. ಅದನ್ನು ನಂಬಿದ ಯುವತಿಯು ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಿದ್ದಾಳೆ. ಬಳಿಕ ವಂಚಕರು ಯುವತಿಯ ವಾಟ್ಸಾಪ್ಗೆ ಪ್ರಶ್ನೆ ಪತ್ರಿಕೆಯೊಂದನ್ನು ಕಳಿಸಿ ಅದಕ್ಕೆ ಉತ್ತರಿಸುವಂತೆ ತಿಳಿಸಿದ್ದರು.

ಯುವತಿಯು ಅವರಿಗೆ ತನ್ನ ಉತ್ತರವನ್ನು ಕಳುಹಿಸಿಕೊಟ್ಟಿದ್ದಾರೆ. ಈ ಸೈಬರ್ ವಂಚಕರು ಯುವತಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ, ಅವರಿಂದ ಪಾಸ್ಪೋರ್ಟ್ ಚಾರ್ಜ್, ವಿಸಾ ಚಾರ್ಜ್, ಮೆಡಿಕಲ್ ರಿಪೋರ್ಟ್ ಅಪ್ಲಿಕೇಶನ್ ಫೀಸ್, ಎನ್.ಓ.ಸಿ ಫೀಸ್, ಹೆಲ್ತ್ ಇನ್ಸುರೆನ್ಸ್ ಫೀಸ್ ಇತ್ಯಾದಿ ಹೀಗೆ ವಿವಿಧ ತೆರಿಗೆ, ಸುಂಕ ಕಟ್ಟುವಂತೆ ತಿಳಿಸಿದ್ದಾರೆ.
ಅವರನ್ನು ನಂಬಿದ್ದ ಯುವತಿಯು ಅವರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ 2020ರ ಆಗಸ್ಟ್ 13 ರಿಂದ 2021ರ ಜನವರಿ 17ರ ವರೆಗೆ 5 ತಿಂಗಳ ಅವಧಿಯಲ್ಲಿ ಒಟ್ಟು 57,14,749 ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆದರೆ, ಇದುವರೆಗೂ ಯಾವುದೇ ಉದ್ಯೋಗ ಕೊಡಿಸದೆ ಮೋಸ ಮಾಡಿದ್ದಾರೆ ಎಂದು ಯುವತಿಯು ಬುಧವಾರದಂದು ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸಿಇಎನ್ ಅಪರಾಧ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications