ಲೋಕಾ ಅಖಾಡದಲ್ಲಿ ಮೊದಲ ಬಾರಿ ಗೆದ್ದ ಸರದಾರನ ಹಿನ್ನೆಲೆ ಏನು ಗೊತ್ತಾ?
Uttara Kaannada Lok Sabha Election 2024 Result: ಉತ್ತರಕನ್ನಡದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ 3,37,428 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಗಾದರೆ ಇವರು ರಾಜಕೀಯ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕಳೆ ಮೂರು ದಶಕಗಳಿಂದ ಬಿಜೆಪಿ ಭದ್ರಕೋಟೆ ಆಗಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಭಾರೀ ಪೈಪೋಟಿ ನೀಡಿತ್ತು. ಪ್ರಬುದ್ಧ ಮತದಾರರಿರುವ ಈ ಕ್ಷೇತ್ರದಲ್ಲಿ ಈ ಬಾರಿ ವಿಶ್ಲೇಷಣೆ ಕಷ್ಟಸಾಧ್ಯ ಆಗುವಷ್ಟರ ಮಟ್ಟಿಗೆ ಪೈಪೋಟಿ ಇತ್ತು.

ಈ ಕ್ಷೇತ್ರಕ್ಕೆ ಮೇ 07ರಂದು ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನ ಆಗಿತ್ತು. ಇನ್ನು ಇಂದು (ಜೂನ್ 04) ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೆಲುವಿನ ಹಾರ ಹಾಕಿಕೊಳ್ಳುವ ಮೂಲಕ ಮತ್ತೆ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಸಾಬೀತುಮಾಡಿದ್ದಾರೆ.
ಬಿಜೆಪಿಯ ಭದ್ರಕೋಟೆಯಾಗಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್ ನಡುವೆ ಭಾರೀ ಜಿದ್ದಾಜಿದ್ದಿನ ಹಣಾಹಣೆ ಏರ್ಪಟ್ಟಿದೆ. 28 ವವರ್ಷಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿ ಬದಲಿಸಲಿದ್ದು, ಆರು ಬಾರಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಲಾಗಿದ್ದು, ಕಾಂಗ್ರೆಸ್ನಿಂದ ಖಾನಾಪುರ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಲ್ಲಿಂದ ಮೊದಲ ಬಾರಿ ಸ್ಪರ್ಧಿಸಿದ್ದರು.
1952ರಿಂದ ಕ್ಷೇತ್ರವನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಕಾಂಗ್ರೆಸ್ 1996ರಲ್ಲಿ ಸೋಲನುಭವಿಸಿದ್ದು, 1999ರಲ್ಲಿ ಪುನಃ ಗೆಲುವು ಸಾಧಿಸಿದರೂ 2004ರಿಂದ ಕ್ಷೇತ್ರ ಬಿಜೆಪಿಯ ತೆಕ್ಕೆಯಲ್ಲಿತ್ತು. ಬಿಜೆಪಿಯು ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆಲುವಿನತ್ತ ಸಾಗುತ್ತಾ ಬಂದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ 7,86,042 ಮತಗಳನ್ನು ಗಳಿಸುವ ಮೂಲಕ 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಮೂಲಕ 3,06,393 ಮತಗಳನ್ನು ಪಡೆದ ಜೆಡಿ (ಎಸ್)ನ ಆನಂದ್ ಅಸ್ನೋಟಿಕರ್ ಅವರನ್ನು ಅನಂತ್ ಕುಮಾರ್ ಹೆಗಡೆ ಸೋಲಿಸಿದರು. ಇನ್ನು ಈ ಕ್ಷೇತ್ರದಲ್ಲಿ 2019ರಲ್ಲಿ 74.10 ಮತದಾನವಾಗಿದೆ. ಒಟ್ಟಿನಲ್ಲಿ ಈ ಬಾರಿ ಬಿಜೆಪಿ ಭದ್ರಕೋಟೆಯನ್ನು ಹೊಡೆದು ತಾವು ಬೇರೂರಲು ಕಾಂಗ್ರೆಸ್ ಗ್ಯಾರಂಟಿಗಳ ಬಾಣಗಳನ್ನು ಬಿಟ್ಟಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications