ಕಾರವಾರ; ಬೇರೆ ಖಾತೆಯಿಂದ ಹೆಂಡತಿ ಖಾತೆಗೆ 2.69 ಕೋಟಿ ವರ್ಗಾಯಿಕೊಂಡ ಬ್ಯಾಂಕ್ ಉದ್ಯೋಗಿ
ಕಾರವಾರ, ಸೆಪ್ಟೆಂಬರ್, 13: ಕುಮಾರ್ ಬೋನಾಲ ಎಂಬಾತ ಯಲ್ಲಾಪುರ ತಾಲೂಕಿನ ಬ್ಯಾಂಕ್ ಆಫ್ ಬರೋಡಾದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ. ಆತ ಬೇರೆಯವರ ಖಾತೆಯಿಂದ ತನ್ನ ಹೆಂಡತಿ ಖಾತೆಗೆ 2.69 ಕೋಟಿ ರೂಪಾಯಿ ಜಮಾ ಮಾಡಿಕೊಂಡು ನಾಪತ್ತೆಯಾದ ಬೆನ್ನಲ್ಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಆದರೆ ಹಣ ಕ್ರೆಡಿಟ್ ಆಗಿದ್ದ ಖಾತೆಯಲ್ಲಿ ಸದ್ಯ ಝೀರೋ ಬ್ಯಾಲೆನ್ಸ್ ಇರುವುದು ತನಿಖೆ ವೇಳೆ ತಿಳಿದುಬಂದಿದೆ. ಇದೀಗ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಯಲ್ಲಾಪುರ ಬ್ಯಾಂಕ್ ಆಫ್ ಬರೋಡಾದಲ್ಲಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕುಮಾರ್ ಬೋನಾಲ ಎಂಬಾತ ಐದು ತಿಂಗಳ ಹಿಂದೆ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸೇರಿಕೊಂಡಿದ್ದ. ಸೆಪ್ಟೆಂಬರ್ 5ರವರೆಗೆ ಬ್ಯಾಂಕ್ ಸಿಬ್ಬಂದಿ ಲಾಗಿನ್ ಮೂಲಕ ಕರೆಂಟ್ ಅಕೌಂಟ್ನಿಂದ ತನ್ನ ಪತ್ನಿಯ ಹೆಸರಿನ ಖಾತೆಗೆ ಆರೋಪಿ ಹಣವನ್ನು ವರ್ಗಾಯಿಸಿಕೊಂಡಿದ್ದಾನೆ. ಈ ಬಗ್ಗೆ ಬ್ಯಾಂಕ್ನ ಇತರ ಅಧಿಕಾರಿಗಳಿಗೆ ವಾರದ ಬಳಿಕ ತಿಳಿದಿದ್ದು, ಅಷ್ಟರಲ್ಲಿ ಆರೋಪಿ ನಾಪತ್ತೆ ಆಗಿದ್ದ. ಇನ್ನು ಈ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಂಚನೆ ಪ್ರಕರಣ ದಾಖಲಾಗುವ ಕೆಲ ದಿನಗಳ ಹಿಂದೆ ಆರೋಪಿ ಕಾಣೆ ಆಗಿರುವ ಕುರಿತು ಪ್ರಕರಣ ದಾಖಲಾಗಿತ್ತು.
ಇನ್ನು ಆರೋಪಿತ ಕುಮಾರ್ ಯಾರಿಗೂ ಅನುಮಾನ ಬರದಂತೆ ಹಂತ ಹಂತವಾಗಿ ಹಣವನ್ನು ತನ್ನ ಹೆಂಡತಿ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಬಳಿಕ ಹಣವನ್ನು ವರ್ಗಾವಣೆ ಮಾಡಿಕೊಂಡ ಖಾತೆಯನ್ನು ಪರಿಶೀಲಿಸಿದಾಗ ಯಾವುದೇ ಹಣ ಇಲ್ಲದಿರುವುದು ತಿಳಿದಿದೆ. ಇನ್ನು ಸದ್ಯ ಯಲ್ಲಾಪುರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಾಪತ್ತೆ ಆಗಿರುವ ಕುಮಾರ್ ಎಂಬಾತನ ಪತ್ತೆಗಾಗಿ ಬಲೆ ಬೀಸಿದ್ದಾರೆ. ಆರೋಪಿಯನ್ನು ಬಂಧಿಸಿದ ನಂತರ, ಹಣವನ್ನು ಎಲ್ಲಿ ಇಟ್ಟಿದ್ದಾನೆ ಎನ್ನುವ ಮಾಹಿತಿಯನ್ನು ಕಲೆಹಾಕಲಾಗುತ್ತದೆ. ಮತ್ತೆ ಹಣವನ್ನು ಆರೋಪಿಯಿಂದ ಭರಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ನಾ ಫೆನ್ನೇಕರ್ ತಿಳಿಸಿದ್ದಾರೆ.

ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದು ಏಕೆ?
ಮತ್ತೊಂದು ಪ್ರಕರಣದಲ್ಲಿ ಆರೋಪಿಯೋರ್ವ ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ. ಆತ ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ಕಾರವಾರ ತಾಲ್ಲೂಕಿನ ಸದಾಶಿವಗಡದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಅವರ ಮಾಹಿತಿಯಂತೆ ಸಿಬ್ಬಂದಿಗಳು ಗೋವಾ ಮದ್ಯ ಸಾಗಿಸುತ್ತಿದ್ದಾ ಕಾರನ್ನು ಹಿಂಬಾಲಿಸಿದ್ದಾರೆ. ವರಿಷ್ಠಾಧಿಕಾರಿ ಎಸ್.ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ ಜಿ,, ಪೊಲೀಸ್ ಕಾನ್ಸ್ಟೇಬಲ್ಗಳಾದ ಭಗವಾನ ಗಾಂವಕರ, ಸಂತೋಷ್ ಕುಮಾರ್, ಮಹಾದೇವ ಸಿದ್ದಿ ಅವರ ತಂಡವನ್ನು ರಚಿಸಲಾಗಿತ್ತು.

ಖಚಿತ ಮಾಹಿತಿ ಆಧಾರದಲ್ಲಿ ಗೋವಾ ರಾಜ್ಯದಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ, ಹ್ಯಂಡೈ ವೆರ್ನ ಕಾರನ್ನು ಪರಿಶೀಲಿಸಲು ಸದಾಶಿವಗಡದ ದೇವಭಾಗ ಕ್ರಾಸ್ನಲ್ಲಿ ಬ್ಯಾರಿಕೇಡ್ ಹಾಕಿ ನಿಂತಿದ್ದರು. ಪೊಲೀಸರನ್ನು ದೂರದಿಂದಲೇ ಕಂಡು ಭಯಭೀತನಾದ ಚಾಲಕ ಕಾರನ್ನು ಹೆದ್ದಾರಿಯಲ್ಲೇ ಬಿಟ್ಟು ಪರಾರಿ ಆಗಿದ್ದಾನೆ. ಬಳಿಕ ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಸುಮಾರು 1.5 ಲಕ್ಷ ಬೆಲೆಯ 27 ಪಾಲಿಥಿನ್ ಚೀಲಗಳಲ್ಲಿ 770 ಲೀಟರ್ ಗೋವಾ ರಾಜ್ಯದ ಮದ್ಯದ ಬಾಟಲಿಗಳು ಪತ್ತೆ ಆಗಿವೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications