ಉತ್ತರ ಕನ್ನಡದ ಕಟ್ಟೆಕೈ ಅದ್ಧೂರಿ ಹಾಲಬ್ಬದ ಬಗ್ಗೆ ನಿಮಗೆಷ್ಟು ಗೊತ್ತು..?
ಕಾರವಾರ, ಜನವರಿ 09: ಒಂದೆಡೆ ಬೆಂಕಿ ಜ್ವಾಲೆಗೆ ಕೆಂಪಾಗಿರುವ ಕೆಂಡವನ್ನು ರಾಶಿ ಮಾಡುತ್ತಿರುವ ಜನರು. ಇನ್ನೊಂದೆಡೆ ದೇವರು ಹಾಗೂ ದೇವರ ಪೆಟ್ಟಿಗೆಯನ್ನು ತಲೆ ಮೇಲೆ ಹೊತ್ತು ಬೆಂಕಿಯನ್ನು ಸುತ್ತುತ್ತಾ ಕೆಂಡದ ರಾಶಿ ಹಾಯುತ್ತಿರುವ ಗುನಗರು. ಮತ್ತೊಂದೆಡೆ ಈ ಭಕ್ತಿ ಪರಾಕಾಷ್ಠೆಯನ್ನು ಕಣ್ತುಂಬಿಕ್ಕೊಳ್ಳುತ್ತಿರೋ ಭಕ್ತರು. ಈ ಎಲ್ಲಾ ದೃಶ್ಯಗಳು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪದ ಕಟ್ಟೆಕೈ ಗ್ರಾಮದಲ್ಲಿ ಕಂಡುಬಂದಿದೆ.
ರೈತರು ಬೆಳೆದ ಹೊಸ ಬೆಳೆಗಳನ್ನು ತಾವು ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ಆಚರಿಸುವ ವಿಶಿಷ್ಟ ರೀತಿಯ ಹಾಲಬ್ಬವೊಂದು ಕಟ್ಟೆಕೈ ಗ್ರಾಮದಲ್ಲಿ ಇಂದು ನಡೆಯಿತು. ಹೊಸಕ್ಕಿ ಹಬ್ಬ ಇಲ್ಲವೇ ಹಾಲಬ್ಬ ಎಂದೇ ಕರೆಸಿಕೊಳ್ಳುವ ಈ ಹಬ್ಬವನ್ನು ತಲೆ ತಲಾಂತರಗಳಿಂದ ಆಚರಿಸಲಾಗುತ್ತದೆ. ಅದರಂತೆ ಕಳೆದ ಮೂರು ದಿನಗಳಿಂದ ಆಚರಿಸಲಾಗುವ ಹಬ್ಬವನ್ನು ಮೊದಲ ದಿನ ಮಹಾಸತಿ ದೇವಾಲಯದಿಂದ ದೇವರನ್ನು ಹುಲಿದೇವರ ಮನೆಗೆ ತಂದು ಪೂಜೆ ಸಲ್ಲಿಸಿದ ಗ್ರಾಮಸ್ಥರು, ತಾವು ಬೆಳೆದ ಹೊಸ ಬೆಳೆಗಳನ್ನು ದೇವರಿಗೆ ನೈವೇದ್ಯ ಮಾಡಿದರು.

ಎರಡನೇ ದಿನ ಬ್ರಹ್ಮದೇವರ ಕಾನಿನಲ್ಲಿ ಕೆಂಡದ ಸೇವೆಗೆ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರು ಸಂಜೆ ಹೊತ್ತಿಗೆ ದೇವರನ್ನು ಅರಣ್ಯಕ್ಕೆ ಕೊಂಡೊಯ್ದು ಜಾಗರಣ ನಡೆಸಿದರು. ಮೂರನೇ ದಿನವಾದ ಇಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಸಿದ್ದಗೊಂಡಿದ್ದ ಕೆಂಡದ ರಾಶಿಯ ಸುತ್ತ ಐದು ಸುತ್ತ ಸುತ್ತುವರಿದು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು.
ಇದು ಅನಾಧಿಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಹಬ್ಬವನ್ನು ಗ್ರಾಮಸ್ಥರೆಲ್ಲರೂ ಸೇರಿ ಆಚರಣೆ ಮಾಡುತ್ತೇವೆ ಎನ್ನುತ್ತಾರೆ ಗ್ರಾಮದ ಗುನಗರು.

ಇನ್ನು ಕಟ್ಟೆಕೈ ಹಾಲಬ್ಬ ಎಂದರೇ ಸುತ್ತೂರಿನ ಜನರಿಗೂ ಕೂಡ ವಿಶೇಷ. ಅದರಲ್ಲಿಯೂ ಹಬ್ಬದ ದಿನ ಬರಿ ಕಾಲಿನಲ್ಲಿ ದೇವರ ಪೆಟ್ಟಿಗೆ ಹಾಗೂ ದೇವರ ಮುಖಗಳನ್ನು ಹೊತ್ತುಕ್ಕೊಂಡು ಕೆಂಡಹಾಯುವುದನ್ನು ನೋಡುವುದಕ್ಕಾಗಿಯೇ ಗ್ರಾಮಸ್ಥರಲ್ಲದೇ ಅಕ್ಕಪಕ್ಕದ ಊರಿನಿಂದ ನೂರಾರು ಮಂದಿ ಆಗಮಿಸಿದ್ದರು.
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಹಬ್ಬ ರೈತ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ದೇವರಿಗೆ ನಡೆದುಕ್ಕೊಳ್ಳುವುದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಊರಿನ ಜನರಲ್ಲಿದೆ. ಇದೇ ಕಾರಣದಿಂದ ಪ್ರತಿ ವರ್ಷವೂ ಹಬ್ಬದ ದಿನ ದೇವರಿಗೆ ಪೂಜೆ ಸಲ್ಲಿಸಿ ತೆರಳುತ್ತಾರೆ.

ಒಟ್ಟಾರೆ ಕಟ್ಟೆಕೈ ಗ್ರಾಮದಲ್ಲಿ ವಿಶಿಷ್ಟವಾಗಿ ನಡೆಯುವ ಹಾಲಬ್ಬವೂ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು. ಮೂರು ದಿನವೂ ಸ್ಥಳೀಯವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ತಾವು ಬೆಳೆದ ಹೊಸ ಬೆಳೆಯ ಫಲವನ್ನು ದೇವರಿಗೆ ನೈವೇದ್ಯ ಮಾಡುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications