ಉತ್ತರ ಕನ್ನಡದ ಕಟ್ಟೆಕೈ ಅದ್ಧೂರಿ ಹಾಲಬ್ಬದ ಬಗ್ಗೆ ನಿಮಗೆಷ್ಟು ಗೊತ್ತು..?
ಕಾರವಾರ, ಜನವರಿ 09: ಒಂದೆಡೆ ಬೆಂಕಿ ಜ್ವಾಲೆಗೆ ಕೆಂಪಾಗಿರುವ ಕೆಂಡವನ್ನು ರಾಶಿ ಮಾಡುತ್ತಿರುವ ಜನರು. ಇನ್ನೊಂದೆಡೆ ದೇವರು ಹಾಗೂ ದೇವರ ಪೆಟ್ಟಿಗೆಯನ್ನು ತಲೆ ಮೇಲೆ ಹೊತ್ತು ಬೆಂಕಿಯನ್ನು ಸುತ್ತುತ್ತಾ ಕೆಂಡದ ರಾಶಿ ಹಾಯುತ್ತಿರುವ ಗುನಗರು. ಮತ್ತೊಂದೆಡೆ ಈ ಭಕ್ತಿ ಪರಾಕಾಷ್ಠೆಯನ್ನು ಕಣ್ತುಂಬಿಕ್ಕೊಳ್ಳುತ್ತಿರೋ ಭಕ್ತರು. ಈ ಎಲ್ಲಾ ದೃಶ್ಯಗಳು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪದ ಕಟ್ಟೆಕೈ ಗ್ರಾಮದಲ್ಲಿ ಕಂಡುಬಂದಿದೆ.
ರೈತರು ಬೆಳೆದ ಹೊಸ ಬೆಳೆಗಳನ್ನು ತಾವು ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ಆಚರಿಸುವ ವಿಶಿಷ್ಟ ರೀತಿಯ ಹಾಲಬ್ಬವೊಂದು ಕಟ್ಟೆಕೈ ಗ್ರಾಮದಲ್ಲಿ ಇಂದು ನಡೆಯಿತು. ಹೊಸಕ್ಕಿ ಹಬ್ಬ ಇಲ್ಲವೇ ಹಾಲಬ್ಬ ಎಂದೇ ಕರೆಸಿಕೊಳ್ಳುವ ಈ ಹಬ್ಬವನ್ನು ತಲೆ ತಲಾಂತರಗಳಿಂದ ಆಚರಿಸಲಾಗುತ್ತದೆ. ಅದರಂತೆ ಕಳೆದ ಮೂರು ದಿನಗಳಿಂದ ಆಚರಿಸಲಾಗುವ ಹಬ್ಬವನ್ನು ಮೊದಲ ದಿನ ಮಹಾಸತಿ ದೇವಾಲಯದಿಂದ ದೇವರನ್ನು ಹುಲಿದೇವರ ಮನೆಗೆ ತಂದು ಪೂಜೆ ಸಲ್ಲಿಸಿದ ಗ್ರಾಮಸ್ಥರು, ತಾವು ಬೆಳೆದ ಹೊಸ ಬೆಳೆಗಳನ್ನು ದೇವರಿಗೆ ನೈವೇದ್ಯ ಮಾಡಿದರು.

ಎರಡನೇ ದಿನ ಬ್ರಹ್ಮದೇವರ ಕಾನಿನಲ್ಲಿ ಕೆಂಡದ ಸೇವೆಗೆ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರು ಸಂಜೆ ಹೊತ್ತಿಗೆ ದೇವರನ್ನು ಅರಣ್ಯಕ್ಕೆ ಕೊಂಡೊಯ್ದು ಜಾಗರಣ ನಡೆಸಿದರು. ಮೂರನೇ ದಿನವಾದ ಇಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಸಿದ್ದಗೊಂಡಿದ್ದ ಕೆಂಡದ ರಾಶಿಯ ಸುತ್ತ ಐದು ಸುತ್ತ ಸುತ್ತುವರಿದು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು.
ಇದು ಅನಾಧಿಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಹಬ್ಬವನ್ನು ಗ್ರಾಮಸ್ಥರೆಲ್ಲರೂ ಸೇರಿ ಆಚರಣೆ ಮಾಡುತ್ತೇವೆ ಎನ್ನುತ್ತಾರೆ ಗ್ರಾಮದ ಗುನಗರು.

ಇನ್ನು ಕಟ್ಟೆಕೈ ಹಾಲಬ್ಬ ಎಂದರೇ ಸುತ್ತೂರಿನ ಜನರಿಗೂ ಕೂಡ ವಿಶೇಷ. ಅದರಲ್ಲಿಯೂ ಹಬ್ಬದ ದಿನ ಬರಿ ಕಾಲಿನಲ್ಲಿ ದೇವರ ಪೆಟ್ಟಿಗೆ ಹಾಗೂ ದೇವರ ಮುಖಗಳನ್ನು ಹೊತ್ತುಕ್ಕೊಂಡು ಕೆಂಡಹಾಯುವುದನ್ನು ನೋಡುವುದಕ್ಕಾಗಿಯೇ ಗ್ರಾಮಸ್ಥರಲ್ಲದೇ ಅಕ್ಕಪಕ್ಕದ ಊರಿನಿಂದ ನೂರಾರು ಮಂದಿ ಆಗಮಿಸಿದ್ದರು.
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಹಬ್ಬ ರೈತ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ದೇವರಿಗೆ ನಡೆದುಕ್ಕೊಳ್ಳುವುದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಊರಿನ ಜನರಲ್ಲಿದೆ. ಇದೇ ಕಾರಣದಿಂದ ಪ್ರತಿ ವರ್ಷವೂ ಹಬ್ಬದ ದಿನ ದೇವರಿಗೆ ಪೂಜೆ ಸಲ್ಲಿಸಿ ತೆರಳುತ್ತಾರೆ.

ಒಟ್ಟಾರೆ ಕಟ್ಟೆಕೈ ಗ್ರಾಮದಲ್ಲಿ ವಿಶಿಷ್ಟವಾಗಿ ನಡೆಯುವ ಹಾಲಬ್ಬವೂ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು. ಮೂರು ದಿನವೂ ಸ್ಥಳೀಯವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ತಾವು ಬೆಳೆದ ಹೊಸ ಬೆಳೆಯ ಫಲವನ್ನು ದೇವರಿಗೆ ನೈವೇದ್ಯ ಮಾಡುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications