ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ: ಮಾಹಿತಿ ವಿವರ
ಕಾರವಾರ, ಜನವರಿ 4: ನಾಳೆ(ಜನವರಿ 5) ರಿಂದ ಇಪ್ಪತ್ತು ದಿನಗಳ ಕಾಲ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಚಲಿಸುವ ವಾಹನಗಳು ಬದಲಿ ಮಾರ್ಗದಲ್ಲಿ ತೆರಳುವಂತೆ ಉತ್ತರ ಕನ್ನಡ ಜಿಲ್ಲಾಳಿತ ಮನವಿ ಮಾಡಿಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ-ಅನಮೋಡ ನಡುವಿನ (ತಿನ್ನೇಘಾಟ) ಪ್ರದೇಶದಲ್ಲಿ ನೈರುತ್ಯ ರೇಲ್ವೆ ವತಿಯಿಂದ (TGT-CLR Railway doubling Project) ರೇಲ್ವೆ ಹಳಿ ದ್ವಿಗುಣಗೊಳಿಸುವ ಕಾಮಗಾರಿ ಕೈಗೊಳ್ಳುವುದು ಅವಶ್ಯವಾಗಿರುವುದರಿಂದ ಜನವರಿ 5 ರಿಂದ 25ರ ವರೆಗೆ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿ (NH-4A) ಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ, ಅನುಮೋಡನಿಂದ ರಾಮನಗರ (ದಾಂಡೇಲಿ) ಕಡೆಗೆ ಹೋಗುವ ಲಘು ವಾಹನಗಳಿಗೆ ಅನುಮೋಡ-ಕ್ಯಾಸರಲಾಕ್ ಕ್ರಾಸ್-ಕ್ಯಾಸರಲಾಕ್-ಕುಣಗಿನಿ ಚೆಕ್ಪೋಸ್ಟ್- ಚಾಂದೇವಾಡಿ-ಜಗಲಬೇಟ್ ಮಾರ್ಗವಾಗಿ ಏಕಮುಖ ಸಂಚಾರ, ರಾಮನಗರದಿಂದ ಅನುಮೋಡ ಹೊಗುವ ಲಘು ವಾಹನಗಳಿಗೆ ರಾಮನಗರ-ತಿನ್ನೇಘಾಟ-ಮಾರ್ಸಂಗಳ್ ಕ್ರಾಸ್-ಹೆಮ್ಮಡಗಾ ರೊಡ್- ಅನುಮೋಡ್ ಮಾರ್ಗವಾಗಿ ಏಕಮುಖ ಸಂಚಾರ ಹಾಗೂ ಮಧ್ಯಮ ಮತ್ತು ಭಾರಿ ವಾಹನಗಳಿಗೆ ಆಳ್ನಾವರ-ಹಳಿಯಾಳ-ಯಲ್ಲಾಪುರ-ಕಾರವಾರ- ಗೋವಾ ಮಾರ್ಗದ ಮೂಲಕ ಸಂಚರಿಸುವಂತೆ ಆದೇಶಿಸಿದ್ದಾರೆ.
ಭಟ್ಕಳದಲ್ಲಿ ಗ್ಯಾಸ್ ಏಜೆನ್ಸಿಗೆ ಕನ್ನ: 5 ಲಕ್ಷಕ್ಕೂ ಅಧಿಕ ನಗದು ದೋಚಿದ ಖದೀಮರು
ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿದ್ದ ಗ್ಯಾಸ್ ಏಜೆನ್ಸಿಗೆ ನುಗ್ಗಿದ ಖದೀಮರು 5 ಲಕ್ಷಕ್ಕೂ ಅಧಿಕ ನಗದು ದೋಚಿ ಪರಾರಿಯಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ದಿನಕರ ವಿಠಲ್ ಕಿಣಿ ಮಾಲೀಕತ್ವದ ಮೂಕಾಂಬಿಕಾ ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿದೆ. ಬುಧವಾರ ಬೆಳಗಿನ ಜಾವದ ವೇಳೆಯಲ್ಲಿ ಗ್ಯಾಸ್ ಏಜೆನ್ಸಿ ಕಟ್ಟಡದ ಬಳಿ ಬಂದ ಮೂವರು ಖದೀಮರು ಬಾಗಿಲು ಮುರಿದು ಒಳಗೆ ನುಗ್ಗಿದ್ದಾರೆ. ಅದರಲ್ಲಿ ಓರ್ವ ಹೊರಗಡೆ ನಿಂತು ಕಾಯುತ್ತಿದ್ದರೆ. ಇನ್ನಿಬ್ಬರು ಒಳಗೆ ನುಗ್ಗಿ ನೇರವಾಗಿ ಏಜೆನ್ಸಿ ಮಾಲೀಕನ ಚೇಂಬರ್ ಬಾಗಿಲು ಮುರಿಯಲು ಪ್ರಯತ್ನಿಸಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದೆ ಇರುವುದರಿಂದ ಕೊನೆಗೆ ಬಾಗಿಲಿಗೆ ಅಳವಡಿಸಿದ ಗ್ಲಾಸ್ ಒಡೆದು ಚೇಂಬರನಲ್ಲಿದ್ದ ಸುಮಾರು 5,11,742 ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಬುಧವಾರ ಬೆಳಗ್ಗೆ ಮಾಲೀಕರು ಮುಂಜಾನೆ ಗ್ಯಾಸ್ ಏಜೆನ್ಸಿಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications