ಸಿದ್ದಾಪುರ: ಕೆರೆ ಬೇಟೆಗೆ ಬಂದು ಮೀನು ಸಿಗದಿದ್ದಕ್ಕೆ ಆಕ್ರೋಶ
ಕಾರವಾರ, ಮೇ 29: ದೇವಾಲಯದ ಕಟ್ಟಡ ನಿರ್ಮಾಣ ಸಹಾಯಾರ್ಥವಾಗಿ ಕೆರೆಯಲ್ಲಿನ ಮೀನು ಹಿಡಿಯುವುದಕ್ಕಾಗಿ ದೇವಸ್ಥಾನ ಕಮಿಟಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿತ್ತು.
ಮೀನು ಬೇಟೆಗಾಗಿ ಆಗಮಿಸಿದ್ದ ಸಾವಿರಾರು ಮಂದಿ ಕೆರೆಗೆ ಇಳಿದಿದ್ರು. ಆದರೆ ಕೆರೆಯಲ್ಲಿ ಮೀನು ಸಿಕ್ಕಿಲ್ಲ ಅನ್ನೋ ಕಾರಣಕ್ಕೆ ರೊಚ್ಚಿಗೆದ್ದ ಜನರು ಮೀನು ಬೇಟೆ ಆಯೋಜನೆ ಮಾಡಿದ ಸಮಿತಿ ವಿರುದ್ಧವೇ ಆಕ್ರೋಶಗೊಂಡು ಗಲಾಟೆ ನಡೆಸಿದ್ದು, ಪೆಂಡಾಲ್ ಸೇರಿದಂತೆ ಸಿಕ್ಕ ವಸ್ತುಗಳನ್ನೆಲ್ಲ ಹೊತ್ತೊಯ್ದಿದ್ದಾರೆ.
ಸಮಿತಿ ಸದಸ್ಯರ ವಿರುದ್ಧ ಜನರ ಆಕ್ರೋಶ
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಗೋಡ ಗ್ರಾಮದಲ್ಲಿ ಈಶ್ವರ ದೇವಸ್ಥಾನ ಕಟ್ಟಡ ನಿರ್ಮಾಣದ ಸಹಾಯಾರ್ಥವಾಗಿ ಕೆರೆ ಮೀನು ಬೇಟೆ ಅಂತಾ ಆಯೋಜನೆ ಮಾಡಿತ್ತು. ಮೀನು ಬೇಟೆ ಆಯೋಜನೆ ಮಾಡಿರೋ ಬಗ್ಗೆ ಸಾಕಷ್ಟು ಪ್ರಚಾರವನ್ನು ಸಹ ಕೊಡಲಾಗಿತ್ತು. ಹೀಗಾಗಿ ಕೇವಲ ಸಿದ್ದಾಪುರ ತಾಲೂಕಿನಿಂದಷ್ಟೆ ಅಲ್ಲದೆ ಪಕ್ಕದ ಶಿವಮೊಗ್ಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಯ ನಾನಾ ಕಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಕರೆ ಮೀನುಬೇಟೆಗಾಗಿ ಆಗಮಿಸಿದ್ರು.

ಈ ಹಿಂದೆ ಪ್ರತಿ ವರ್ಷ ಕೂಡ ಕೆರೆ ಮೀನು ಬೇಟೆ ಆಯೋಜನೆ ಮಾಡಲಾಗಿತ್ತು. ಆದ್ರೆ ಕಳೆದ ಎರಡು ಮೂರು ವರ್ಷದಿಂದ ಕೊರೋನಾ ಇರೋ ಕಾರಣಕ್ಕೆ ಈ ಕೆರೆ ಮೀನು ಬೇಟೆ ಮಾಡಿರಲಿಲ್ಲ. ಹೀಗಾಗಿ ಅನೇಕ ವರ್ಷಗಳ ನಂತರದಲ್ಲಿ ಮೀನು ಬೇಟೆ ಮಾಡಿರೋ ಕಾರಣಕ್ಕೆ ಅಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಆದರೆ ಕೆರೆಯಲ್ಲಿ ಮೀನು ಇಲ್ಲದ ಕಾರಣ ಜನರು ಸಮಿತಿ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೀನು ಗಲಾಟೆಗೆ ಸುಖಾಂತ್ಯ
ಮೀನು ಬೇಟೆಗಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದ ಸಮಿತಿ ಪ್ರತಿ ಕುಣಿಕೆಗೆ 600 ರೂಪಾಯಿ ಹಣ ಪಡೆದುಕೊಳ್ಳಲಾಗಿತ್ತು. ಅದರಂತೆ 3000 ಸಾವಿರ ಜನರು 600ರೂಪಾಯಿ ಹಣ ನೀಡಿ ಪ್ರವೇಶ ಪಡೆದು ಕೆರೆಯಲ್ಲಿ ಮೀನು ಬೇಟೆಗೆ ಇಳಿದಿದ್ದರು.
ಆದರೆ ಕೆರೆಗೆ ಇಳಿದ ಬಹುತೇಕರಿಗೆ ಒಂದೇ ಒಂದು ಮೀನು ಸಿಕ್ಕಿರಲಿಲ್ಲ ಇದರಿಂದ ಆಕ್ರೋಶಕ್ಕೊಳಗಾದ ಮತ್ಸ್ಯ ಪ್ರಿಯರು ಕಾರ್ಯಕ್ರಮ ಆಯೋಜನೆ ಮಾಡಿದ್ದ ಸಂಘಟಕರ ವಿರುದ್ದ ಆಕ್ರೋಶಗೊಂಡು ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಶಾಮಿಯಾನವನ್ನು ಕಿತ್ತರಲ್ಲದೆ, ಸೌಂಡ್ ಬಾಕ್ಸ್, ಸ್ಪೀಕರ್, ಸೇರಿದಂತೆ ಸಿಕ್ಕ ವಸ್ತುಗಳನ್ನು ಹೊತ್ತೊಯ್ದಿದ್ದಾರೆ.

ಸಮಿತಿ ಸದಸ್ಯರ ಮೇಲೂ ಹಲ್ಲೆ ನಡೆಸಿದ್ದು ಸ್ಥಳಕ್ಕೆ ಆಗಮಿಸಿ ಪೊಲೀಸರ ಮೇಲೆ ಸಹ ಜನರು ಆಕ್ರೋಶ ಹೊರಹಾಕಿ ಹಲ್ಲೆ ಮಾಡಿದ್ದಾರೆ. ಒಟ್ಟಾರೆ ಸಿದ್ದಾಪುರ ತಾಲೂಕಿನ ಕಾನಗೋಡದಲ್ಲಿ ಆಯೋಜನೆ ಮಾಡಲಾಗಿದ್ದ ಕೆರೆ ಮೀನು ಬೇಟೆ ಗಲಾಟೆ ಕೊನೆಗೂ ಪೊಲೀಸರು ಕಾರ್ಯಕ್ರಮ ಆಯೋಜಕರ ಜೊತೆ ಮಾತುಕತೆ ನಡೆಸಿ ಜನರ ಹಣವನ್ನು ವಾಪಸ್ ಕೊಡಿಸೋ ಮೂಲಕ ಕೆರೆ ಮೀನು ಗಲಾಟೆಗೆ ಸುಖಾಂತ್ಯ ಹಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications