ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ನಾವು ಅತೃಪ್ತರಲ್ಲ; ಅಸಹಾಯಕರು" ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜುಲೈ 25: "ಕ್ಷೇತ್ರದ ಜನತೆಗೆ ನ್ಯಾಯ ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಸಹಾಯಕರಾಗಿ ರಾಜೀನಾಮೆ ನೀಡಿದ್ದೇವೆ. ಹೀಗಾಗಿ, ನಾವು ಅತೃಪ್ತರಲ್ಲ; ಅಸಹಾಯಕರು" ಎಂದಿದ್ದಾರೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್.

ಗುರುವಾರ ಯಲ್ಲಾಪುರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, "ರಾಜೀನಾಮೆ ನೀಡಿರುವವರಲ್ಲಿ ಎಲ್ಲರೂ ಹಿರಿಯ ಶಾಸಕರೇ ಇದ್ದಾರೆ. ಮೊದಲ ಬಾರಿ ಶಾಸಕರಾದವರು ಯಾರೂ ಇಲ್ಲ. ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆಯೇ ಹೊರತು ಪಕ್ಷಕ್ಕಲ್ಲ. ನಾವು ಇಂತಹ ದೊಡ್ಡ ನಿರ್ಣಯವನ್ನು ಒಂದು ದಿನದಲ್ಲಿ ಕೈಗೊಂಡಿಲ್ಲ. ಬಹು ದಿನಗಳಿಂದ ಅಸಹಾಯಕತೆ ಅನುಭವಿಸಿ, ಅದು ಮಿತಿ ಮೀರಿದ ನಂತರ ಈ ನಿರ್ಣಯಕ್ಕೆ ಬಂದಿದ್ದೇವೆ. 20 ಶಾಸಕರ ರಾಜೀನಾಮೆ ಸಣ್ಣದಲ್ಲ. ಪರಿಸ್ಥಿತಿ ಕೈ ಮೀರಿ ಹೋಗುತ್ತದೆ ಎಂದಾಗ ಒಟ್ಟಾಗಿ ರಾಜೀನಾಮೆ ನಿರ್ಣಯಕ್ಕೆ ಬಂದೆವು" ಎಂದು ವಿವರಿಸಿದರು.

ತವರಿಗೆ ಬಂದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತವರಿಗೆ ಬಂದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್

"ನಾವೆಲ್ಲಾ ಒಟ್ಟಾಗಿದ್ದು, ನಿರ್ಣಯಕ್ಕೆ ಅಚಲರಾಗಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಜನತೆ ಮೇಲೆ ವಿಶ್ವಾಸವಿದೆ. ಅವರು ಪರಿಸ್ಥಿತಿಯನ್ನು ಅರಿಯುತ್ತಾರೆ ಎಂಬ ನಂಬಿಕೆ ಇದೆ" ಎಂದರು.

We are not dissatisfied we are helpless said Yellapur MLA Shivaram Hebbar

"ನಾವಿನ್ನೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಯಾವುದೇ ಪಕ್ಷದ ನಾಯಕರನ್ನೂ ಸಂಪರ್ಕಿಸಿಲ್ಲ. ಸ್ಪೀಕರ್ ಮುಂದೆ ಎರಡು ಪ್ರಶ್ನೆಗಳಿವೆ. ಒಂದು ರಾಜೀನಾಮೆ, ಇನ್ನೊಂದು ಅನರ್ಹತೆ. ಅನರ್ಹರಾಗುವ ಸ್ಥಿತಿಯಲ್ಲಿ ನಾವಿಲ್ಲ. ರಾಜೀನಾಮೆ ಅಂಗಿಕಾರವಾಗಲೇಬೇಕು. ನಂತರ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ" ಎಂದು ಹೇಳಿದರು.
English summary
"We have resigned as helpless for not being able to provide justice to the people of the constituency. We are not dissatisfied; we are helpless" said Yellapur MLA Shivaram Hebbar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X