ಅನರ್ಹ ಶಾಸಕರು ಈಗಾಗಲೇ ಗೆದ್ದಿದ್ದರೆ ಮತ್ಯಾಕೆ ಪ್ರಚಾರ: ದೇಶಪಾಂಡೆ
Recommended Video
ಉತ್ತರ ಕನ್ನಡ, ನವೆಂಬರ್ 25: ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಗೆದ್ದಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೋದಲೆಲ್ಲಾ ಹೇಳುತ್ತಿದ್ದಾರೆ. ಹಾಗಾದರೆ ಮತ ಪ್ರಚಾರಕ್ಕೆ ಏಕೆ ಹೋಗಬೇಕೆಂದು ಪ್ರಶ್ನಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರಾರ್ಥ ಭಾಷಣದಲ್ಲಿ ಮಾತನಾಡಿ, ಪ್ರವಾಹ ಪೀಡಿತರಿಗೆ ನೆರೆ ಪರಿಹಾರವನ್ನು ಇನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ, ಮೊದಲು ಜನರನ್ನು ರಕ್ಷಿಸುವ ಕೆಲಸವಾಗಲಿ ಎಂದು ಸರ್ಕಾರಕ್ಕೆ ಛಾಟಿ ಬೀಸಿದರು
ಕಾಂಗ್ರೆಸ್- ಜೆಡಿಎಸ್ ನ ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ಸಮ್ಮಿಶ್ರ ಸರ್ಕಾರ ಬಿದ್ದಿತು. ಆದರೆ ಅವರಿಗೆ ಅಂಟಿರುವ ಅನರ್ಹ ಎಂಬ ಹಣೆಪಟ್ಟಿ ಕಳಚುವುದಿಲ್ಲ. ಅವರಿಗೆ ಮತದಾರರು ಸೋಲಿನ ಶಿಕ್ಷೆ ಕೊಟ್ಟು ಶಾಶ್ವತವಾಗಿ ಅನರ್ಹಗೊಳಿಸಬೇಕು ಎಂದರು.

ಡಿಸೆಂಬರ್ 05 ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆಯ ಮತದಾನ ನಡೆಯಲಿದ್ದು, ಇದರ ಫಲಿತಾಂಶ ಡಿಸೆಂಬರ್ 09 ರಂದು ಪ್ರಕಟವಾಗಲಿದೆ.
ಸಿಎಂ ಪ್ರಚಾರ ಸಭೆಯ ಭಾಷಣಗಳಲ್ಲಿ ನಮ್ಮ ಅಭ್ಯರ್ಥಿಗಳು ಈಗಾಗಲೇ ಗೆದ್ದಿದ್ದು, ಗೆಲುವಿನ ಅಂತರ ಅಷ್ಟೇ ತಿಳಿಯಬೇಕು ಎನ್ನುತ್ತಾರೆ. ಹಾಗಿದ್ದರೆ ಪ್ರಚಾರಕ್ಕೆ ಬರದೇ ಸುಮ್ಮನೇ ಕುಳಿತುಕೊಳ್ಳಬಹುದಲ್ವಾ ಎಂದು ಪ್ರಶ್ನಿಸಿದ್ದಾರೆ.
ಅನರ್ಹರೆಂದು ಸುಪ್ರೀಂಕೋರ್ಟ್ ಹೇಳಿದೆ, ಅವರು ಯಾವ ಪಕ್ಷದಲ್ಲಿರಲು ಲಾಯಕ್ಕಿಲ್ಲ. ಈ ಉಪ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸಬೇಕಿದೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications