ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ; ವಿದ್ಯಾರ್ಥಿಗಳು 8 ಕಿ.ಮೀ. ನಡೆಯುವುದು ತಪ್ಪಿತು!
ಬೆಂಗಳೂರು, ಮಾ. 17: ಹೊನ್ನಾವರ ತಾಲೂಕಿನ ಮಹಿಮೆ ಮತ್ತು ಸುತ್ತಮುತ್ತಲ ಗ್ರಾಮಗಳ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸಾರಿಗೆ ಸಂಸ್ಥೆಯು ಮಹಿಮೆ ಗ್ರಾಮದ ಮೂಲಕ ಹಾದು ಹೋಗುವಂತೆ ಬಸ್ಗಳನ್ನು ಕಾರ್ಯಾಚರಿಸಲು ಆದೇಶಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಾವು ಮಹಿಮೆ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಗಮನಿಸಿದ್ದು, ಗ್ರಾಮದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೌಲಭ್ಯ ಒದಗಿಸಬೇಕೆಂದು ಡಿಸಿಎಂ ಲಕ್ಷ್ಮಣ ಎಸ್. ಸವದಿ ಅವರಿಗೆ ಮನವಿ ಮಾಡಿದ ತಕ್ಷಣವೇ ಸ್ಪಂದಿಸಿ ಗ್ರಾಮಕ್ಕೆ ಬಸ್ ಕಾರ್ಯಾಚರಣೆಗೆ ಆದೇಶಿಸಿದ್ದಾರೆಂದು ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ವರದಿಯನ್ನು ಸಾರಿಗೆ ಸಚಿವರ ಗಮನಕ್ಕೆ ತಂದಾಗ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಹೊನ್ನಾವರ ತಾಲೂಕಿನ ಮಹಿಮೆ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಒದಗಿಸಲು ಆದೇಶ ನೀಡುವುದಾಗಿ ತಿಳಿಸಿದ್ದರು. ಅದರಂತೆ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಿದ್ದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬಸ್ ಗಾಗಿ 8 ಕಿ.ಮೀ. ನಡೆಯವುದು ತಪ್ಪಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಮೆ ಗ್ರಾಮದ ವಿದ್ಯಾರ್ಥಿಗಳು ಪ್ರೌಢಶಾಲೆಗಾಗಿ ದೂರದ ಅಳ್ಳಂಕಿ, (20 ಕಿ.ಮೀ.) ಜಲವಳಕರ್ಕಿ(25 ಕಿ.ಮೀ.), ಗೇರುಸೊಪ್ಪಕ್ಕೆ (16 ಕಿ.ಮೀ.) ಮತ್ತು ಪದವಿ ಪೂರ್ವ ಕಾಲೇಜಿಗೆ 40 ಕಿಮೀ ದೂರದ ಹೊನ್ನಾವರ ಪಟ್ಟಣಕ್ಕೆ ಹೋಗುತ್ತಾರೆ. ಆದರೆ ಅವರು ಬಸ್ ಗಾಗಿ ಮಹಿಮೆ ಕ್ರಾಸ್ ಗೆ 8 ಕಿ.ಮೀ. ದೂರ ನಡೆದುಕೊಂಡು ಹೋಗಬೇಕಿದೆ. ಹಾಗೆಯೇ ಮಳೆಗಾಲದಲ್ಲಿ ಮಹಿಮೆ ಗ್ರಾಮದ ಹಳ್ಳ ತುಂಬಿ ಹರಿಯುವುದರಿಂದ ಹೊರಜಗತ್ತಿನೊಂದಿಗೆ ಸಂಪರ್ಕ ಕಡಿತಗೊಂಡು ನಡೆದು ಹೋಗಲೂ ಸಹ ತೊಂದರೆಯಾಗಿತ್ತು.

ಸೋಮವಾರ ವಿಧಾನಪರಿಷತ್ತಿನ ಕಲಾಪದಲ್ಲಿ ವಿಷಯ ಪ್ರಸ್ತಾಪವಾದಾಗ ಈ ಕುರಿತು ಸಾರಿಗೆ ಸಚಿವರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹಿಮೆ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ನೀಡಿದ್ದ ಭರವಸೆ ಈಡೇರಿದಂತಾಗಿದೆ. ತಮ್ಮ ಮನವಿಗೆ ಸ್ಪಂದಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ ಡಿಸಿಎಂ ಲಕ್ಷ್ಮಣ ಎಸ್. ಸವದಿ ಅವರಿಗೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications