ಯಲ್ಲಾಪುರ; ಕೊಲೆ ಮಾಡಿ ನಾಪತ್ತೆ ಎಂದು ಬಿಂಬಿಸಿದವರಿಗೆ ಕೋಳ!
ಕಾರವಾರ, ಜುಲೈ 09; ಆಕೆ ಗಂಡನನ್ನು ಕೊಲೆ ಮಾಡಿದ್ದಳು. ಕಾಣೆಯಾಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣದ ತನಿಖೆ ನಡೆಸಿದ ಯಲ್ಲಾಪುರ ಪೊಲೀಸರು ಮಹಿಳೆ ಮತ್ತು ಆಕೆಯ ಮೂವರು ಸಂಬಂಧಿಕರನ್ನು ಬಂಧಿಸಿದ್ದಾರೆ.
ಚಿಕ್ಕ ಮಾವಳ್ಳಿ ನಿವಾಸಿ ಶ್ವೇತಾ ರಾಜೇಶ ನಾಯ್ಕ(29) ಕೊಲೆಯಾದ ವ್ಯಕ್ತಿಯ ಪತ್ನಿ. ಕೊಲೆಗೆ ಸಹಕಾರ ನೀಡಿದ ದೀಪಕ ಬುದ್ದಾ ಮರಾಠಿ (53), ಗಂಗಾಧರ ದೀಪಕ ಮರಾಠಿ (26), ಹಾಗೂ ಯಮುನಾ ದೀಪಕ ಮರಾಠಿ (50) ಇತರ ಆರೋಪಿಗಳು.
ಶ್ವೇತಾ ಪತಿ ರಾಜೇಶ ನಾರಾಯಣ ನಾಯ್ಕ 10/06/2021ರಂದು ಸಂಜೆ 7 ಗಂಟೆಗೆ ಮನೆಯಿಂದ ಹೋದವನು ಇವರೆಗೂ ಮನೆಗೆ ಬಂದಿಲ್ಲ ಎಂದು 14/06/2021ರಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿದ್ದರು.

ಈ ಪ್ರಕರಣದಲ್ಲಿ ಪ್ರತ್ಯೇಕವಾಗಿ ಎರಡು ತಂಡವನ್ನು ರಚಿಸಿ ಕಾಣೆಯಾದ ರಾಜೇಶನ ಹೆಂಡತಿ ಹಾಗೂ ಅವರ ಕುಟುಂಬದ ಸದಸ್ಯರನ್ನು ತೀವ್ರವಾಗಿ ವಿಚಾರಣೆ ಒಳಪಡಿಸಲಾಗಿತ್ತು. ಕಾಣೆಯಾದ ರಾಜೇಶ ತನ್ನ ಹೆಂಡತಿ ಶ್ವೇತಾ ಜೊತೆ ಆಸ್ತಿ ವಿಚಾರವಾಗಿ ಆಗಾಗ ಜಗಳ ತೆಗೆದು ಹೊಡೆಯುತ್ತಿದ್ದದ್ದು ತಿಳಿದುಬಂದಿತ್ತು.
ಇದೇ ವಿಷಯದಲ್ಲಿ 10/06/2021ರಂದು ಚಿಕ್ಕ ಮಾವಳ್ಳಿಯ ತನ್ನ ಮಾವನ ಮನೆಯಲ್ಲಿ ರಾಜೇಶ ರಾತ್ರಿ ತನ್ನ ಹೆಂಡತಿ ಹಾಗೂ ಅತ್ತೆ, ಮಾವ, ಭಾವನೊಂದಿಗೆ ಜಗಳ ತೆಗೆದಿದ್ದಾನೆ. ಅದೇ ಸಿಟ್ಟಿನಿಂದ ಆರೋಪಿತರು ರಾಜೇಶನಿಗೆ ಗುದ್ದಲಿ ಹಾಗೂ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ, ಶವವನ್ನು ಸುಟ್ಟು ಹಾಕಿ ಮೂಳೆಗಳನ್ನು ಕಾಡಿನಲ್ಲಿ ಎಸೆದಿದ್ದರು.
ಮೃತನ ಮೋಟಾರ್ ಸೈಕಲ್, ಮೊಬೈಲ್ ಹಾಗೂ ಚಪ್ಪಲಿಯನ್ನು ದೇಹಳ್ಳಿ ಗ್ರಾಮದ ಕಾಡಿನಲ್ಲಿ ಎಸೆದು ತನಿಖೆಯ ದಿಕ್ಕು ತಪ್ಪಿಸಲು ಬೇಟೆಗೆ ಹೋದಾಗ ಯಾವುದೋ ಪ್ರಾಣಿ ಆತನನ್ನು ತಿಂದಿರಬಹುದು ಎಂದು ನಂಬಿಸುವ ಉದ್ದೇಶ ಹೊಂದಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಪೊಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಪೊಲೀಸ್ ಉಪಾಧೀಕ್ಷಕರಾದ ರವಿ ನಾಯ್ಕರವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಸುರೇಶ ಯಳ್ಳೂರು ನೇತ್ರತ್ವದಲ್ಲಿ ಪ್ರಕರಣದ ತನಿಖೆ ನಡೆದಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications