ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಕರ್ಣ ಕಡಲತೀರದಲ್ಲಿ ಈಜಲು ತೆರಳಿದ್ದ ಯುವಕ ಸಾವು: ನಾಲ್ವರ ರಕ್ಷಣೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜನೆವರಿ 5: ಪ್ರವಾಸಕ್ಕೆಂದು ಬಂದು ಈಜಲು ಸಮುದ್ರಕ್ಕೆ ಇಳಿದಿದ್ದ ಐವರು ಪ್ರವಾಸಿಗರ ಪೈಕಿ ಓರ್ವ ಮೃತಪಟ್ಟಿದ್ದು, ನಾಲ್ವರನ್ನು ರಕ್ಷಣೆ ಮಾಡಿರುವ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.

ಹೊಸ ವರ್ಷಾಚರಣೆ: ಕಾರವಾರ ಕಡಲ ತೀರ ಖಾಲಿ, ಗೋವಾ ಫುಲ್ಹೊಸ ವರ್ಷಾಚರಣೆ: ಕಾರವಾರ ಕಡಲ ತೀರ ಖಾಲಿ, ಗೋವಾ ಫುಲ್

ತುಮಕೂರು ಮೂಲದ ರಂಗನಾಥ ರಂಗಸಾಮಯ್ಯ (19) ಮೃತ ಯುವಕನಾಗಿದ್ದಾನೆ. ತುಮಕೂರಿನಿಂದ 10 ಜನ ಸೇರಿ ಪ್ರವಾಸಕ್ಕೆ ಆಗಮಿಸಿದ್ದರು. ದೇವರ ದರ್ಶನ ಪಡೆದು ಸಮುದ್ರದಲ್ಲಿ ಈಜಾಡಲು ತೆರಳಿದಾಗ ಒಮ್ಮೆಲೆ ಬಂದ ಅಲೆಗೆ ಐವರು ಯುವಕರು ಕೊಚ್ಚಿಕೊಂಡು ಹೋಗಿದ್ದಾರೆ.

Karwar: Youth Dies After Drowning At Gokarna Beach; 4 Rescued

ತಕ್ಷಣ ಜೊತೆಯಲ್ಲಿದ್ದವರು ಕೂಗಿಕೊಂಡಾಗ ಸಮೀಪದಲ್ಲೇ ಇದ್ದ ಪ್ರವಾಸಿಗರಿಗೆ ಬೋಟಿಂಗ್ ಕರೆದುಕೊಂಡು ತೆರಳುವ ಸಿಬ್ಬಂದಿಗಳಾದ ಶೇಖರ ಹರಿಕಾಂತ, ನಿತ್ಯಾನಂದ ಹರಿಕಾಂತ ಎಂಬುವವರು ಬೋಟ್ ಮೂಲಕ ತೆರಳಿ ನಾಲ್ವರನ್ನು ಹರಸಾಹಸ ಮಾಡಿ ಕರೆ ತಂದಿದ್ದಾರೆ.

Karwar: Youth Dies After Drowning At Gokarna Beach; 4 Rescued

Recommended Video

ಬೆಂಗಳೂರು: 12 ಜನ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪಾಸಿಟಿವ್, ಸೋಂಕಿತರ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ ಟ್ರೇಸ್-ಸಚಿವ ಸುಧಾಕರ್ | Oneindia Kannada

ದಡಕ್ಕೆ ತರುವ ವೇಳೆಯಲ್ಲಿ ಓರ್ವ ಮಾತ್ರ ಅಲೆಗಳಿಗೆ ಸಿಕ್ಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ತಕ್ಷಣ ಆತನನ್ನು ಆ್ಯಂಬುಲೆನ್ಸ್ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Youth dies after drowning and four rescued Held on the main beach of gokarna in kumata taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X