ಹಾಸನದಿಂದ ಬಂದು ಬಂಗಾರಪೇಟೇಲಿ ಡಕಾಯಿತಿ ಮಾಡಿದ್ದು ಏಕೆ?
ಎಲ್ಲ ಆರೋಪಿಗಳು ಹಾಸನದವರು. ಅಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದರು. ಇದೇ ಮೊದಲ ಸಲ ಡಕಾಯಿತಿ ಮಾಡಿದ್ದರು. ರಾಮಕೃಷ್ಣಪ್ಪ ಅವರ ಮನೆಯಲ್ಲಿ ₹ 80 ಕೋಟಿ ಕಪ್ಪು ಹಣವಿದೆ ಎಂದು ಪ್ರಮುಖ ಆರೋಪಿ ಪ್ರೇಮಾ ಅವರಿಗೆ ಯಾರೋ ಹೇಳಿದ್ದರು.
ಬಂಗಾರಪೇಟೆ, ನವೆಂಬರ್ 2: ಇದೊಂಥರ ವಿಚಿತ್ರ ಪ್ರಕರಣ. ಇಲ್ಲಿನ ರಾಮಕೃಷ್ಣಪ್ಪ ಅವರ ಮನೆಯಲ್ಲಿ ಎಂಬತ್ತು ಕೋಟಿ ಇದೆ ಎಂದು ಅದ್ಯಾರು ಈ ಆರೋಪಿಗಳಿಗೆ ಹೇಳಿದರೋ ಹಾಸನದಿಂದ ಬಂಗಾರಪೇಟೆವರೆಗೆ ಬಂದು ಡಕಾಯಿತಿ ಮಾಡಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಕಮ್ಮದಿನ್ನೆಯ ರಾಮಕೃಷ್ಣಪ್ಪ ಅವರ ತೋಟದ ಮನೇಲಿ ಹಣ-ಆಭರಣ ದೋಚಿದ್ದ ಪ್ರೇಮಾ, ಪ್ರತಾಪ್, ಅನಿಲ್ ಕುಮಾರ್, ನಾಗೇಗೌಡ, ಹರೀಶ್, ಸುನಿಲ್ ಕುಮಾರ್, ರಘು, ಮಧು, ಮಾರಿಮುತ್ತು, ಸಂತೋಷ್ ಹಾಗೂ ಆರ್.ಮಂಜುನಾಥ್ ಎಂಬುವರನ್ನು ಬಂಧಿಸಲಾಗಿದೆ. ಇನ್ನೂ ಐವರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪ್ರಯತ್ನ ಮುಂದುವರಿದಿದೆ.[ಹಾವು ಕಡಿದು ಮಗಳು, ಹೃದಯಾಘಾತದಿಂದ ತಾಯಿ ಸಾವು]

ಎಲ್ಲ ಆರೋಪಿಗಳು ಹಾಸನದವರು. ಅಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದರು. ಇದೇ ಮೊದಲ ಸಲ ಡಕಾಯಿತಿ ಮಾಡಿದ್ದರು. ರಾಮಕೃಷ್ಣಪ್ಪ ಅವರ ಮನೆಯಲ್ಲಿ ₹ 80 ಕೋಟಿ ಕಪ್ಪು ಹಣವಿದೆ ಎಂದು ಪ್ರಮುಖ ಆರೋಪಿ ಪ್ರೇಮಾ ಅವರಿಗೆ ಯಾರೋ ಹೇಳಿದ್ದರು. ಈ ಹಣ ದೋಚಬೇಕು ಎಂದು ಯೋಜನೆ ರೂಪಿಸಿದ ಆಕೆ, ತನ್ನ ಗಂಡ ಇತರರ ಗುಂಪು ಮಾಡಿಕೊಂಡು ಸೆ.19ರಂದು ದರೋಡೆಗೆ ಪ್ರಯತ್ನಿಸಲಾಗಿತ್ತು.
ಆದರೆ, ರಾಮಕೃಷ್ಣಪ್ಪ ಅವರ ಮನೇಲಿ ನಾಯಿಗಳು ಇದ್ದವು. ಆದ್ದರಿಂದ ದರೋಡೆ ವಿಫಲವಾಗಿತ್ತು. 4 ದಿನಗಳ ನಂತರ ಮತ್ತೆ ಬಂದ ಈ ತಂಡ ನಾಯಿಗಳಿಗೆ ಮದ್ದು ಹಾಕಿ, ಪ್ರಜ್ಞೆ ತಪ್ಪಿಸಿ ಮನೆ ಒಳಗೆ ಹೋಗಿತ್ತು. ಕೋಟಿಲಿಂಗ ದರ್ಶನಕ್ಕೆ ಬಂದಿದ್ವಿ. ದಾರಿ ತಪ್ಪಿಹೋಯಿತು. ಕುಡಿಯಲು ನೀರು ಕೊಡಿ ಎಂದು ಮನೆಯವರನ್ನು ಕೇಳಿತ್ತು.[ಹುಬ್ಬಳ್ಳಿಯಲ್ಲಿ ಎಟಿಎಂ ದರೋಡೆ, ಇನ್ನಿತರ ಕ್ರೈಂ ಸುದ್ದಿಗಳು]
ಮನೆ ಮಾಲೀಕರು ಬಾಗಿಲು ತೆಗೆದ ಬಳಿಕ ಅವರು ಹಾಗೂ ಮನೆಯವರ ಕೈ-ಕಾಲು ಕಟ್ಟಿಹಾಕಿ ಚಾಕು ತೋರಿಸಿ ₹ 5 ಲಕ್ಷ ನಗದು 197 ಗ್ರಾಂ ಚಿನ್ನ ದೋಚಿದ್ದರು. ಎಲ್ಲ ಆರೋಪಿಗಳನ್ನು ಹಾಸನದಲ್ಲೇ ಬಂಧಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications